ಸೋಮವಾರ, ಏಪ್ರಿಲ್ 28, 2025
HomeCrimeMadhya Pradesh urination case : ಯುವಕನ ಮೇಲೆ‌ ಮೂತ್ರ ವಿಸರ್ಜನೆ, ಆರೋಪಿ ಅರೆಸ್ಟ್ :...

Madhya Pradesh urination case : ಯುವಕನ ಮೇಲೆ‌ ಮೂತ್ರ ವಿಸರ್ಜನೆ, ಆರೋಪಿ ಅರೆಸ್ಟ್ : ಸಿಎಂ ಚೌಹಾಣ್ ಹೇಳಿದ್ದೇನು ?

- Advertisement -

ಮಧ್ಯಪ್ರದೇಶ : ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ (Madhya Pradesh urination case) ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪ್ರಕರಣವು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಬಿರುಗಾಳಿ ಸೃಷ್ಟಿಸಿದ ಒಂದು ದಿನದ ನಂತರ, ಆರೋಪಿ ಪ್ರವೇಶ್ ಶುಕ್ಲಾನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಮಂಗಳವಾರ (ಜುಲೈ 4) ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಗಳು ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋವೊಂದು ಹರಿದಾಡಿತ್ತು. ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಘಟನೆಯ ಕುರಿತು ಮಾತನಾಡಿದ ಸಿಧಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಂಜುಲತಾ ಪಟ್ಲೆ, ಆರೋಪಿಯನ್ನು ಈಗ ವಿಚಾರಣೆ ನಡೆಸಲಾಗುತ್ತಿದ್ದು, ಶೀಘ್ರವೇ ಹೆಚ್ಚುವರಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. “ನಾವು ಆರೋಪಿಯನ್ನು (ಪ್ರವೇಶ್ ಶುಕ್ಲಾ) ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ವಿಷಯದಲ್ಲಿ ಹೆಚ್ಚಿನ ಕಾನೂನು ಕ್ರಮವನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294, 504 ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪಟ್ಲೆ ಹೇಳಿದರು.

ಆರೋಪಿ ಬಗ್ಗೆ ಸಿಎಂ ಚೌಹಾಣ್ ಹೇಳಿದ್ದೇನು ?
ರಾಜ್ಯ ಸರಕಾರ ಅವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ಆರೋಪಿಗಳ ಶಿಕ್ಷೆ ಎಲ್ಲರಿಗೂ ಪಾಠವಾಗಲಿದೆ ಎಂದು ಸಿಎಂ ಚೌಹಾಣ್ ಹೇಳಿದ್ದಾರೆ. ಭೋಪಾಲ್‌ನಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ನಾನು ಸೂಚನೆ ನೀಡಿದ್ದೇನೆ. ಇದು ಎಲ್ಲರಿಗೂ ನೈತಿಕ ಪಾಠವಾಗಬೇಕು, ನಾವು ಅವನನ್ನು ಬಿಡುವುದಿಲ್ಲ, ಆರೋಪಿಗೆ ಧರ್ಮ, ಜಾತಿ ಅಥವಾ ಪಕ್ಷವಿಲ್ಲ. ಆರೋಪಿ ಒಬ್ಬ ಆರೋಪಿ.” ಎಂದು ಹೇಳಿದ್ದಾರೆ.

ಇದನ್ನೂ ಓದಿ : Actress Anugowda : ಸ್ಯಾಂಡಲ್‌ವುಡ್‌ ನಟಿ ಅನುಗೌಡ ಮೇಲೆ ಹಲ್ಲೆ : ಸಾಗರದ ಸ್ಥಳೀಯ ನಿವಾಸಿಗಳ ಮೇಲೆ ದೂರು ದಾಖಲು

ಇದನ್ನೂ ಓದಿ : Maharashtra Road Accident‌ : ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

ಈ ಘಟನೆಯು ಸಿಧಿಯ ಕುಬ್ರಿ ಗ್ರಾಮದಲ್ಲಿ ನಡೆದಿದ್ದು, ವೈರಲ್ ವೀಡಿಯೊದಲ್ಲಿ ಆರೋಪಿಗಳು ಕುಡಿದ ಸ್ಥಿತಿಯಲ್ಲಿ ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜಿಸುತ್ತಿರುವುದನ್ನು ತೋರಿಸುತ್ತದೆ. ಬಲಿಯಾದವರನ್ನು 36 ವರ್ಷದ ದಸ್ಮತ್ ರಾವತ್ ಜಿಲ್ಲೆಯ ಕರೌಂಡಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಘಟನೆಯ ನಂತರ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಕೂಡ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದು, “ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

Madhya Pradesh urination case: Urination on a youth, accused arrested: What did CM Chauhan say?

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular