ಬೆಂಗಳೂರು : ಗೃಹಲಕ್ಷ್ಮೀ ಯೋಜನೆ (Gruha Lakshmi Scheme) , ಅನ್ನಭಾಗ್ಯ (Anna Bhagya Scheme) ಹಾಗೂ ಗೃಹಜ್ಯೋತಿ ಯೋಜನೆಗೆ (Gruha Lakshmi Yojana) ಕರ್ನಾಟಕದ ಪ್ರತಿಯೊಬ್ಬರಿಗೂ ತಲುಪಿಸುವುದು ರಾಜ್ಯ ಸರಕಾರದ (Karnataka Governament) ಉದ್ದೇಶ. ಇದೇ ಕಾರಣಕ್ಕೆ ಇದೀಗ ರೇಷನ್ ಕಾರ್ಡ್ ತಿದ್ದುಪಡಿಗೆ (Ration Card Updates) ಅವಕಾಶ ಕಲ್ಪಿಸಿದೆ. ಇದೀಗ ಸರಕಾರ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ರೇಷನ್ ಕಾರ್ಡ್ನಲ್ಲಿನ ತಾಂತ್ರಿಕ ಕಾರಣಗಳಿಂದಾಗಿ (Technical Reason) ಗೃಹಲಕ್ಷ್ಮೀ ಯೋಜನೆ (Gruha Lakshmi Yojana), ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆಯ ಲಾಭ ಇನ್ನೂ ಸಿಕ್ಕಿಲ್ಲ. ಇದೀಗ ಪಡಿತರ ಕಾರ್ಡ್ ತಿದ್ದುಪಡಿಗೆ ಸರಕಾರ ಹೆಚ್ಚುವರಿ ಕಾಲಾವಕಾಶವನ್ನು ನೀಡಿದೆ. ಮೊದಲ ಹಂತದ ರೇಷನ್ ಕಾರ್ಡ್ ತಿದ್ದುಪಡಿ ಅವಧಿ ಮುಗಿದಿದ್ದು, ಎರಡನೇ ಹಂತದ ಜಿಲ್ಲೆಗಳಿಗೆ ಅವಕಾಶ ಕಲ್ಪಿಸಿದೆ.

ರೇಷನ್ ಕಾರ್ಡ್ ತಿದ್ದುಪಡಿ ವಿಚಾರದಲ್ಲಿ ಪ್ರಮುಖವಾಗಿ, ಹೊಸ ಸದಸ್ಯರ ಹೆಸರು ಸೇರ್ಪಡೆ, ಸದಸ್ಯರ ಹೆಸರು ತೆಗೆಯುವುದು. ಸದಸ್ಯರ ಹೆಸರಿನ ತಿದ್ದುಪಡಿ, ವಿಳಾಸ ತಿದ್ದುಪಡಿ. ಮನೆಯ ಯಜಮಾನರ ಬದಲಾವಣೆ ಸೇರಿದಂತೆ ವಿವಿಧ ರೀತಿಯ ತಿದ್ದುಪಡಿಗೆ ಅವಕಾಶ ಕಲ್ಪಿಸಿದೆ. ಅದ್ರಲ್ಲೂ ಪಡಿತರ ಚೀಟಿಯ ಜೊತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.
ಇದನ್ನೂ ಓದಿ : ಹೊಸ ಕಾರ್ಮಿಕ ನೀತಿ : ವಾರಕ್ಕೆ ಮೂರೂವರೆ ದಿನ ಕೆಲಸ, ಮೂರೂವರೆ ದಿನ ರಜೆ
ಕೇವಲ ಎಪಿಎಲ್ ಕಾರ್ಡ್ (APL Card) ಮಾತ್ರವಲ್ಲದೇ ಬಿಪಿಎಲ್ ಕಾರ್ಡ್ (BPL Card) ಮತ್ತು ಅಂತ್ಯೋದಯ ಕಾರ್ಡುದಾರರು (Anthyodhaya Card) ಕೂಡ ಪಡಿತರ ಚೀಟಿಯಲ್ಲಿನ ತಿದ್ದುಪಡಿಗಳನ್ನು ಮಾಡಿಕೊಳ್ಳಬಹುದಾಗಿದೆ. ಈಗಾಗಲೇ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ತಿದ್ದುಪಡಿಗೆ ಮೂರು ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.

ರೇಷನ್ ಕಾರ್ಡ್ದಾರರು ಕರ್ನಾಟಕ ಒನ್ (karnataka One), ಬೆಂಗಳೂರು ಒನ್ (Bengaluru One), ಗ್ರಾಮ ಒನ್ (Grama One) ಕೇಂದ್ರಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 7 ಗಂಟೆಯವರೆಗೆ ಪಡಿತರ ಚೀಟಿ ನವೀಕರಿಸಲು (Ration Card Updates) ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ : ಹೊಸ ರೇಷನ್ ಕಾರ್ಡ್ : ರೇಷನ್ ಕಾರ್ಡ್ ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ
ಇದೀಗ ರಾಜ್ಯ ಸರಕಾರ ಎರಡನೇ ಹಂತದಲ್ಲಿ ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಉತ್ತರ ಕನ್ನಡ, ವಿಜಯಪುರ, ಕೊಡಗು, ಮಂಡ್ಯ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ, ಹಾಸನ ಜಿಲ್ಲೆಗಳಿಗೆ ಅವಕಾಶ ಕಲ್ಪಿಸಿದ್ದು, ಅಕ್ಟೋಬರ್ 8ರಿಂದ 10ರವರೆಗೆ ಈ ಜಿಲ್ಲೆಗಳಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಪಡಿತರ ಚೀಟಿ ನವೀಕರಣಕ್ಕೆ ಅಗತ್ಯವಾದ ಪ್ರಮುಖ ದಾಖಲೆ:
ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ ಮತ್ತು ಅನ್ನ ಭಾಗ್ಯ ಯೋಜನೆ ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ತಿದ್ದುಪಡಿ ಮಾಡಲಾಗುತ್ತಿದೆ. ಪ್ರಮುಖವಾಗಿ ಪಡಿತರ ಚೀಟಿ ತಿದ್ದುಪಡಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಜೊತೆಗೆ ಆಧಾರ್ ಕಾರ್ಡ್ ಜೊತೆಗೆ ರೇಷನ್ ಕಾರ್ಡ್ ಲಿಂಕ್ ಮಾಡಬೇಕಾಗಿದೆ.
ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಆಗದೇ ಇರುವವರಿಗೆ ಇಲ್ಲಿದೆ ಗುಡ್ನ್ಯೂಸ್
ಚಿಕ್ಕ ಮಕ್ಕಳ ಹೆಸರು ಸೇರ್ಪಡೆಗೆ ಮಕ್ಕಳ ಸೇರ್ಪಡೆಗೆ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಜೊತೆಗೆ ತಂದೆ, ತಾಯಿಯ ಆಧಾರ್ ಕಾರ್ಡ್ ಅಗತ್ಯವಾಗಿದೆ. ಇನ್ನು ಇತರರ ಹೆಸರು, ವಿಳಾಸ ತಿದ್ದುಪಡಿಯನ್ನು ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಮಾಡಿಕೊಳ್ಳಬಹುದಾಗಿದೆ.
ಆದರೆ ಪಡಿತರ ತಿದ್ದುಪಡಿ ಮಾಡಿಸುವ ವೇಳೆಯಲ್ಲಿ ರೇಷನ್ ಕಾರ್ಡ್, ಬ್ಯಾಂಕ್ ಖಾತೆಯ ಪಾಸ್ಬುಕ್, ಆಧಾರ್ ಕಾರ್ಡ್ ಕೊಂಡೊಯ್ಯುವುದು ಉತ್ತಮ. ರಾಜ್ಯ ಸರಕಾರ ಇದೀಗ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕಲ್ಪಿಸಿದ್ದು, ಈ ಅವಕಾಶವನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕಾಗಿದೆ.
Karnataka Good news for APL, BPL card holders Important notice for ration card amendment