ಭಾನುವಾರ, ಏಪ್ರಿಲ್ 27, 2025
Homebusinessರೇಷನ್ ಕಾರ್ಡ್‌ ತಿದ್ದುಪಡಿಗೆ ಕೊನೆಯ ಅವಕಾಶ : ರಾಜ್ಯ ಸರಕಾರದಿಂದ ಮಹತ್ವದ ಆದೇಶ

ರೇಷನ್ ಕಾರ್ಡ್‌ ತಿದ್ದುಪಡಿಗೆ ಕೊನೆಯ ಅವಕಾಶ : ರಾಜ್ಯ ಸರಕಾರದಿಂದ ಮಹತ್ವದ ಆದೇಶ

- Advertisement -

ಬೆಂಗಳೂರು : ಕರ್ನಾಟಕ ಸರಕಾರ ಗೃಹಲಕ್ಷ್ಮೀ (Gruha Lakshmi Scheme), ಗೃಹಜ್ಯೋತಿ ( Gruha Jyothi Scheme) ಅನ್ನಭಾಗ್ಯ ಯೋಜನೆಗೆ (Anna Bhagya Scheme) ರೇಷನ್‌ ಕಾರ್ಡ್‌ ಕಡ್ಡಾಯಗೊಳಿಸಿದೆ. ಆದರೆ ಪಡಿತರ ಚೀಟಿಯಲ್ಲಿನ ಸಮಸ್ಯೆಯಿಂದಾಗಿ ಲಕ್ಷಾಂತರ ಮಂದಿ ಈ ಯೋಜನೆಯಿಂದ ವಂಚಿತರಾಗಿದ್ದಾರೆ. ಆದ್ರೀಗ ರಾಜ್ಯ ಸರಕಾರ ರೇಷನ್‌ ಕಾರ್ಡ್‌ ತಿದ್ದುಪಡಿಗೆ (Ration Card Updates) ಅಂತಿಮ ಅವಕಾಶ ನೀಡಿದೆ.

ರಾಜ್ಯ ಸರಕಾರದ ಆಹಾರ ಇಲಾಖೆ ಈಗಾಗಲೇ ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಎರಡು ಬಾರಿ ತಿದ್ದುಪಡಿಗೆ ಅವಕಾಶವನ್ನು ನೀಡಿತ್ತು. ಅಕ್ಟೋಬರ್‌ ತಿಂಗಳಲ್ಲಿ 5 ರಿಂದ 13ರ ವರೆಗೆ ರೇಷನ್‌ ಕಾರ್ಡ್‌ನಲ್ಲಿರುವ ಲೋಪದೋಷಗಳನ್ನು ಸರಿಪಡಿಸಬಹುದಾಗಿತ್ತು. ರಾಜ್ಯದ ಪ್ರತೀ ಜಿಲ್ಲೆಗಳಿಗೂ ಮೂರು ದಿನಗಳ ಕಾಲಾವಕಾಶ ನೀಡಲಾಗಿತ್ತು.

Ration Card Updates Last Chance, Important Order from Karnataka State Govt
Image Credit to Original Source

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ರೇಷನ್‌ ಕಾರ್ಡ್‌ ತಿದ್ದುಪಡಿ ಆರಂಭಿಸಿ ರಾಜ್ಯದಲ್ಲಿ ಹಂತ ಹಂತವಾಗಿ ರೇಷನ್‌ ಕಾರ್ಡ್‌ ಸಮಸ್ಯೆ ಪರಿಹಾರಕ್ಕೆ ಅವಕಾಶ ಕಲ್ಪಿಸಿತ್ತು. ಆದರೆ ಈ ವೇಳೆಯಲ್ಲಿ ಹಲವು ಜಿಲ್ಲೆಗಳಲ್ಲಿ ಸರ್ವರ್‌ ಸಮಸ್ಯೆಯಿಂದಾಗಿ ತಿದ್ದುಪಡಿ ಸಾಧ್ಯವಾಗಿರಲಿಲ್ಲ.

ಈ ನಡುವಲ್ಲೇ ಕರ್ನಾಟಕ ಸರಕಾರ ರೇಷನ್‌ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. ಪಡಿತರ ಚೀಟಿಯ ತಿದ್ದುಪಡಿಯ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ. ಸರ್ವರ್‌ ಸಮಸ್ಯೆ ಉಂಟಾಗಿರುವ ಜಿಲ್ಲೆಗಳಿಗೆ ಮತ್ತೆ ಮೂರು ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.

ಇದನ್ನೂ ಓದಿ : ಯುವತಿಯರ ಮದುವೆಗೆ 10 ಗ್ರಾಂ ಚಿನ್ನ, 1 ಲಕ್ಷ ರೂಪಾಯಿ ಉಚಿತ : ಗೃಹಲಕ್ಷ್ಮೀ ಬೆನ್ನಲ್ಲೇ ಮಹಾಲಕ್ಷ್ಮೀ ಯೋಜನೆ ಘೋಷಣೆ

ಎಪಿಎಲ್‌, ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡುದಾರರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿದೆ. ಈಗಾಗಲೇ ಎರಡು ದಿನಗಳಿಂದ ರೇಷನ್‌ ಕಾರ್ಡ್‌ ತಿದ್ದುಪಡಿ ಕಾರ್ಯ ನಡೆಯುತ್ತಿದ್ದು, ಮೊದಲ ಹಂತದಲ್ಲಿ ನಾಳೆ ಕೊನೆಯ ದಿನವಾಗಿದೆ. ಪಡಿತರ ಚೀಟಿದಾರರು ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳಲ್ಲಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

Ration Card Updates Last Chance, Important Order from Karnataka State Govt
Image credit to Original Source

ಈಗಾಗಲೇ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಕೊಡಗು, ಚಿಕ್ಕಮಗಳೂರು, ಹಾವೇರಿ, ಗದಗ, ಮೈಸೂರು, ಮಂಡ್ಯ, ವಿಜಯಪುರ, ಚಾಮರಾಜಪೇಟರ, ಬೆಳಗಾವಿ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಿಗೆ ಅಕ್ಟೋಬರ್ 16, 17 ಮತ್ತು 18 ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ ತಿದ್ದುಪಡಿಗೆ ಅವಕಾಶವಿದೆ.

ಇದನ್ನೂ ಓದಿ : ನಿಮ್ಮ ಹೆಣ್ಣು ಮಗಳ ಮದುವೆಗೆ ಸಿಗುತ್ತೆ 25 ಲಕ್ಷ ರೂ. : ಪ್ರಧಾನಿ ನರೇಂದ್ರ ಮೋದಿ ಸರಕಾರದಿಂದ ಹೊಸ ಯೋಜನೆ

ಇನ್ನು ಶಿವಮೊಗ್ಗ, ರಾಮನಗರ, ದಾವಣಗೆರೆ, ವಿಜಯನಗರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಕೊಪ್ಪಳ, ಕಲಬುರಗಿ, ಬೀದರ್‌, ಬಳ್ಳಾರಿ, ತುಮಕೂರು ಜಿಲ್ಲೆಗಳಿಗೆ ಅಕ್ಟೋಬರ್ 19, 20, 21ರ ವರೆಗೆ ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಹಿಂದೆ ತಿದ್ದುಪಡಿಗೆ ಅವಕಾಶ ನೀಡಿದ ಸಂದರ್ಭದಲ್ಲಿ ತಿದ್ದುಪಡಿಗೆ ಸುಮಾರು 70 ಸಾವಿರ ಅರ್ಜಿಗಳು ಬಂದಿದ್ದು, ಆಹಾರ ಇಲಾಖೆ ಈ ಕುರಿತು ಪರಿಶೀಲನೆಯನ್ನು ನಡೆಸುತ್ತಿದೆ. ಆದರೆ ದಾಖಲಾತಿಗಳು ಸರಿಯಾಗಿ ಇದ್ದರೆ ಮಾತ್ರವೇ ಅಂತಹ ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅನುಮತಿ ನೀಡಲಾಗುತ್ತದೆ.

ಇದನ್ನೂ ಓದಿ : ಅನ್ನಭಾಗ್ಯ ಯೋಜನೆಯ ಹಣ ಇನ್ನೂ ಬಂದಿಲ್ವಾ ? ಈ ಕೆಲಸ ಮಾಡಿದ್ರೆ ಇಂದೇ ಜಮೆ ಆಗುತ್ತೆ

ಪಡಿತರ ಚೀಟಿ ತಿದ್ದುಪಡಿ ಅಥವಾ ಹೊಸ ಕಾರ್ಡುಗಳಿಗೆ ಅರ್ಜಿ ಸಲ್ಲಿಸುವ ವೇಳೆಯಲ್ಲಿ ಸರ್ವರ್‌ ಸಮಸ್ಯೆ ತಲೆದೋರುತ್ತಿರುವುದು ಹೊಸತೇನಲ್ಲ. ರೇಷನ್‌ ಕಾರ್ಡ್‌ ತಿದ್ದುಪಡಿಗೆ ತೆರಳುವ ನಾಗರೀಕರು ಸೇವಾ ಕೇಂದ್ರಗಳ ಮುಂದೆ ಸಂಜೆಯ ವರೆಗೂ ಕಾದು ಕುಳಿತಿರುವ ದೃಶ್ಯ ಸಾಮಾನ್ಯವಾಗಿದೆ. ಈ ಕುರಿತು ಆಹಾಯ ಇಲಾಖೆಯ ಸಚಿವರಾಗಲಿ, ರಾಜ್ಯ ಸರಕಾರವಾಗಲಿ ಸರ್ವರ್‌ ಸಮಸ್ಯೆ ಪರಿಹಾರಕ್ಕೆ ಮನಸ್ಸು ಮಾಡುತ್ತಿಲ್ಲ.

Ration Card Updates Last Chance, Important Order from Karnataka State Govt

 

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular