ನವದೆಹಲಿ : ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ವಿಚಾರಣೆಯನ್ನು ನಡೆಸಲು ಸಿಬಿಐ ವಿಶೇಷ ನ್ಯಾಯಾಲಯ ಮುಂದಾಗಿದೆ.

ಜುಲೈ 23ರಂದು ಮುರಳಿ ಮನೋಹರ್ ಜೋಷಿ ಹಾಗೂ ಜುಲೈ 24ರಂದು ಎಲ್ ಕೆ ಅಡ್ವಾಣಿ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಿರುವ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದೆ.

ಇದೇ ಪ್ರಕರಣ ಸಂಬಂಧ ಶಿವಸೇನಾ ಮುಖಂಡ ಸತೀಶ್ ಪ್ರಧಾನ್ ಅವರು ವಿಚಾರಣೆ ಜುಲೈ 22ರಂದು ದಾಖಲಿಸುವ ಸಾಧ್ಯತೆ ಇದ್ದು, ಅಪರಾಧ ದಂಡ ಪ್ರಕ್ರಿಯಾ ಸಂಹಿತೆ(ಸಿಆರ್ಪಿಸಿ) ಕಲಂ 313ರ ಅನುಸಾರ ಹೇಳಿಕೆಯನ್ನು ವಿಶೇಷ ನ್ಯಾಯಾಲಯ ದಾಖಲಿಸಿಕೊಳ್ಳಲಿದೆ.