7th pay commission Big Updates : ಬೆಂಗಳೂರು : ಕರ್ನಾಟಕದಲ್ಲಿ 7ನೇ ವೇತನ ಆಯೋಗ ಜಾರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಡ್ನ್ಯೂಸ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಈಗಾಗಲೇ 7ನೇ ವೇತನ ಆಯೋಗ ಜಾರಿಯ ಕುರಿತು ಸಂಪುಟ ಸಭೆಯಲ್ಲಿ ಮೌಖಿಕ ಒಪ್ಪಿಗೆ ದೊರಕಿದ್ದು, ಮುಂದಿನ ತಿಂಗಳು ವರದಿ ಅಧಿಕೃತವಾಗಿ ಜಾರಿಯಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ 7ನೇ ವೇತನ ಆಯೋಗ ಜಾರಿ ಮಾಡುವ ಕುರಿತು ಈಗಾಗಲೇ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ ಮತ್ತು ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್. ಭೈರಪ್ಪ ಅವರ ನೇತೃತ್ವದ ನಿಯೋಗ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಭೇಟಿ ಮಾಡಿತ್ತು. ಈ ವೇಳೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ನೀಡಿದ್ದರು.
ಕರ್ನಾಟಕದಲ್ಲಿ ಏಳನೇ ವೇತನ ಆಯೋಗದ ಅವಧಿ ಈಗಾಗಲೇ ಮುಕ್ತಾಯಗೊಂಡಿದ್ದರೂ ಕೂಡ ಸರಕಾರ ಎರಡು ಬಾರಿ ಅವಧಿಯನ್ನು ವಿಸ್ತರಣೆ ಮಾಡಿತ್ತು. ಜೊತೆಗೆ ರಾಜ್ಯದಲ್ಲಿ ಸರಕಾರಿ ನೌಕರರ ವೇತನ ಹೆಚ್ಚಳವಾಗದೇ ಹಲವು ವರ್ಷ ಕಳೆದಿದೆ. ಕಳೆದ ಮೂರು ವರ್ಷಗಳಿಂದಲೂ ಸರಕಾರಿ ನೌಕರರು ವೇತನ ಆಯೋಗದ ವರದಿ ಜಾರಿ ಮಾಡುವಂತೆ ಸರಕಾರವನ್ನು ಒತ್ತಾಯಿಸುತ್ತಲೇ ಇದ್ದಾರೆ. ವೇತನ ಆಯೋಗದಲ್ಲಿರುವ ಕೆಲವೊಂದು ಅಂಶಗಳನ್ನು ಈಗಾಗಲೇ ಜಾರಿ ಮಾಡಿದ್ದು, ಪೂರ್ಣ ಪ್ರಮಾಣದಲ್ಲಿ ವರದಿಯನ್ನು ಜಾರಿಗೆ ತಂದಿಲ್ಲ.
ಇದನ್ನೂ ಓದಿ : Karnataka New Schools : ಹೊಸ ಶಾಲೆಗಳಿಗೆ ಇನ್ನಿಲ್ಲದ ಬೇಡಿಕೆ: ಅನುಮತಿ ಕೋರಿ ಸಲ್ಲಿಕೆಯಾಗಿದೆ ಸಾವಿರಾರು ಅರ್ಜಿ
ಕರ್ನಾಟಕ ಸರಕಾರದ ಮಾಜಿ ಮುಖ್ಯಕಾರ್ಯದರ್ಶಿ ಕೆ ಸುಧಾಕರ ರಾವ್ ಅವರ ನೇತೃತ್ವದ 7ನೇ ವೇತನ ಆಯೋಗ ಕಳೆದ ಮಾರ್ಚ್ 16 ರಂದು ಸರಕಾರಕ್ಕೆ ತನ್ನ ಅಂತಿಮ ವದಿಯನ್ನು ಸಲ್ಲಿಕೆ ಮಾಡಿತ್ತು. 7ನೇ ವೇತನ ಆಯೋಗದ ವರದಿಯಲ್ಲಿ ಪ್ರಮುಖವಾಗಿ ಸರಕಾರಿ ನೌಕರರ ವೇತನದಲ್ಲಿ ಶೇ.27.5 ರಷ್ಟು ಹೆಚ್ಚಳ ಮಾಡುವಂತೆ ಶಿಫಾರಸ್ಸು ಮಾಡಿತ್ತು. ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಲು ಜೂನ್ ಅಂತ್ಯದ ವರೆಗೆ ಗಡುವು ನೀಡಲಾಗಿತ್ತು. ಈ ನಡುವಲ್ಲೇ ಸರಕಾರ 7ನೇ ವೇತನ ಆಯೋಗ ಜಾರಿಗೆ ಮುಂದಾಗಿದೆ.

ಕರ್ನಾಟಕ ರಾಜ್ಯ ಸರಕಾರ 7ನೇ ವೇತನ ಆಯೋಗದ ವರದಿಯನ್ನು ಜಾರಿಗೆ ತಂದು ಶೇ. 27.5 ರಷ್ಟು ವೇತನದಲ್ಲಿ ಹೆಚ್ಚಳ ಮಾಡಿದ್ರೆ ರಾಜ್ಯ ಸರಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ ಕನಿಷ್ಟ 12 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ. ಐದು ವರ್ಷಕ್ಕೆ ಸುಮಾರು 60,000 ಕೋಟಿ ರೂಪಾಯಿಯನ್ನು ವೇತನಕ್ಕೆ ಬಳಸಿಕೊಳ್ಳುವುದಕ್ಕೆ ಈ ಹಿಂದೆ ಕೆಲ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ : Sleeping Tips : ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದ್ರೆ ಏನಾಗುತ್ತೆ ? ಯಾವ ದಿಕ್ಕಿಗೆ ಮಲಗೋದು ಸೂಕ್ತ, ಇಲ್ಲಿದೆ ವೈಜ್ಞಾನಿಕ ಕಾರಣ
ರಾಜ್ಯ ಸರಕಾರಿ ನೌಕರರ ವೇತನ ಹಾಗೂ ಕೇಂದ್ರ ಸರಕಾರಿ ನೌಕರರ ವೇತನದಲ್ಲಿ ಸಾಕಷ್ಟು ವ್ಯತ್ಯಾಸವಿದೆ ಎಂಬ ಆರೋಪ ಕೇಳಿಬಂದಿದ್ದು, ಅದನ್ನು ಸರಕಾರ ಸರಿದೂಗಿಸುವ ನಿಟ್ಟಿನಲ್ಲಿ ಕಳೆದ ಎರಡು ವರ್ಷಗಳಿಂದಲೂ ಸರಕಾರ ಯಾವುದೇ ಪ್ರಯತ್ನವನ್ನು ಮಾಡಿಲ್ಲ. ಇದೀಗ 7ನೇ ವೇತನ ಆಯೋಗ ಜಾರಿ ಆದ್ರೆ ಪೂರ್ಣ ಪ್ರಮಾಣದಲ್ಲಿ ಅಲ್ಲದಿದ್ರು, ಒಂದಿಷ್ಟು ಪ್ರಮಾಣದಲ್ಲಿ ಸರಿದೂಗಿಸಲು ಸಾಧ್ಯ ಎನ್ನುವ ಮಾತು ನೌಕರರ ವಲಯದಲ್ಲಿ ಕೇಳಿಬರುತ್ತಿದೆ.
ಇದನ್ನೂ ಓದಿ : ರಾಜ್ಯ ಸರ್ಕಾರ, ಬಿಬಿಎಂಪಿಯ ಮತ್ತೊಂದು ಎಡವಟ್ಟು: ಶಿಕ್ಷಕರ ಆಯ್ಕೆ ಹೊಣೆ ಸೆಕ್ಯೂರಿಟಿ ಏಜೆನ್ಸಿಗೆ
7th pay commission Big Updates Good news for Karnataka Government Employees Pay Hike News in Kannada