ಗರಿಕೆಮಠದಲ್ಲಿ ಚಿರತೆ ಪ್ರತ್ಯಕ್ಷ : ರಾತ್ರಿ ಪ್ರಯಾಣಿಕರೇ ಎಚ್ಚರ..!

ಕೋಟ : ಕರಾವಳಿ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚುತ್ತಿದೆ. ಇದೀಗ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಸಮೀಪದ ಗರಿಕೆಮಠದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ರಾತ್ರಿ ೩ ಗಂಟೆಯ ಸುಮಾರಿಗೆ ಕೋಟ- ಸೈಬ್ರಕಟ್ಟೆ ರಸ್ತೆಯಲ್ಲಿ ಸಾಗಿ ಹೋಗಿದ್ದು, ಈ ಮಾರ್ಗದಲ್ಲಿ ಸಂಚಾರ ಮಾಡುತ್ತಿರುವವರ ಕಣ್ಣಿಗೆ ಬಿದ್ದಿದೆ. ಚಿರತೆ ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.

ಗರಿಕೆಮಠ ಬಸ್‌ನಿಲ್ದಾಣದ ಬಳಿ ಚಿರತೆ ಕಾಣಿಸಿಕೊಂಡಿದೆ. ರಸ್ತೆಯ ದಕ್ಷಿಣ ಧಿಕ್ಕಿನಿಂದ ಉತ್ತರ ಧಿಕ್ಕಿಗೆ ಸಾಗಿ ಹೋಗಿದೆ. ಈ ಭಾಗದಲ್ಲಿ ಸಾಕಷ್ಟು ಮನೆಗಳಿದ್ದು, ರಾತ್ರಿಯ ವೇಳೆಯಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸಹಜವಾಗಿ ಈ ಭಾಗದ ಜನತೆಯ ಆತಂಕಕ್ಕೆ ಕಾರಣವಾಗಿದೆ. ಸುಮಾರು ಐದು ವರ್ಷಗಳ ಹಿಂದೆ ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಹಸುವಿನ ಮೇಲೆ ದಾಳಿ ನಡೆಸಿತ್ತು.

ಇದನ್ನೂ ಓದಿ : BPL Card Holders Alert : ಬಿಪಿಎಲ್‌ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್‌

ಆದ್ರೀಗ ಐದು ವರ್ಷಗಳ ನಂತರ ಮತ್ತೆ ಚಿರತೆ ಕಾಣಿಸಿಕೊಂಡಿದೆ. ಕೋಟದಿಂದ ಸೈಬ್ರಕಟ್ಟೆ ಮಾರ್ಗದಲ್ಲಿ ನಿತ್ಯವೂ ಸಾವಿರಾರು ವಾಹನಗಳು ಸಂಚಾರ ಮಾಡುತ್ತಿವೆ. ದ್ವಿಚಕ್ರವಾಹನ ಸವಾರರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಮಾಡುವುದರಿಂದ ಆತಂಕವನ್ನುಂಟು ಮಾಡಿದೆ. ಈ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕಾಗಿದೆ. ಕೋಟ ಸಮೀಪದ ಬೇಳೂರು, ಶಿರಿಯಾರ, ತೆಕ್ಕಟ್ಟೆ ಸಮೀಪದ ಮಲ್ಯಾಡಿ ಭಾಗದಲ್ಲಿ ಆಗಾಗ ಚಿರತೆಗಳು ಕಾಣಿಸಿಕೊಳ್ಳುತ್ತಿವೆ.

ಇದನ್ನೂ ಓದಿ : ದಸರಾ ಹಬ್ಬಕ್ಕೆ ಗೃಹಲಕ್ಷ್ಮೀ ಹಣದಲ್ಲಿ ಮಗನಿಗೆ ಬೈಕ್ ಕೊಡಿಸಿದ ತಾಯಿ!

Leopard Found in Garikemata near Kota Udupi News

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories