Karnataka Next CM : ಬೆಂಗಳೂರು : ಕರ್ನಾಟಕದ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಪದೇ ಪದೇ ಸಾಬೀತಾಗುತ್ತಿದೆ. ಇದೀಗ ಮುಖ್ಯಮಂತ್ರಿ ಹುದ್ದೆಯ ವಿಚಾರವೂ ಮತ್ತೆ ಮುನ್ನೆಲೆಗೆ ಬಂದಿದೆ. ವರ್ಷಾಂತ್ಯದ ಒಳಗಾಗಿ ಸಿದ್ದರಾಮಯ್ಯ ಸಿಎಂ ಹುದ್ದೆಯಿಂದ ಕೆಳಗೆ ಇಳಿಯುವುದು ಖಚಿತ. ಆದರೆ ಮುಂದಿನ ಮುಖ್ಯಮಂತ್ರಿ ಹುದ್ದೆ ಡಿಕೆ ಶಿವಕುಮಾರ್ ಗೆ ಸಿಗೋದು ಅನುಮಾನ.Who will be Karnataka Next CM
ಕರ್ನಾಟಕದಲ್ಲಿ ಶತಾಯಗತಾಯ ಅಧಿಕಾರ ಹಿಡಿಯಲೇ ಬೇಕು ಎಂದು ಪಣತೊಟ್ಟಿದ್ದ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ಮೂಲಕ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿತ್ತು. ಬಹುಮತ ದೊರೆತಿದ್ರೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆಗೆ ಯಾರು ಏರ್ತಾರೆ ಅನ್ನೋದು ಕಗ್ಗಂಟಾಗಿಯೇ ಉಳಿದಿತ್ತು.
ಡಿಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್ ಮಲ್ಲಿಕಾರ್ಜುನ ಖರ್ಗೆ ಅವರ ನಡುವೆ ಪೈಪೋಟಿ ಏರ್ಪಟ್ಟಿದ್ದರೂ ಕೂಡ ಅಂತಿಮವಾಗಿ ಸಿದ್ದರಾಮಯ್ಯ ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಆಗಿರೋದು ಎಲ್ಲರಿಗೂ ಗೊತ್ತೇ ಇರುವ ವಿಚಾರ. ಆದರೆ ಕರ್ನಾಟಕದ ಮುಖ್ಯಮಂತ್ರಿ ಖುರ್ಚಿಯ ಮೇಲೆ ಕುಳಿತುಕೊಳ್ಳುವ ಹೊತ್ತಲ್ಲಿ ಎರಡೂವರೆ ವರ್ಷಗಳ ಒಪ್ಪಂದ ನಡೆದಿತ್ತು ಅನ್ನೋ ಮಾತು ಕೇಳಿಬಂದಿತ್ತು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಎರಡೂವರೆ ವರ್ಷದ ಬಳಿಕ ಸಿಎಂ ಹುದ್ದೆಯಿಂದ ಕೆಳಗೆ ಇಳಿಯಬೇಕು ನಂತರ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಅನ್ನೋ ಮಾತುಗಳಿದ್ದವು. ಆದರೆ ಎರಡೂವರೆ ವರ್ಷ ಕಳೆದರೂ ಸಿದ್ದರಾಮಯ್ಯ ಮಾತ್ರ ಕರ್ನಾಟಕದ ಮುಖ್ಯಮಂತ್ರಿ ಆಗಿ ಮುಂದುವರಿದ್ದಾರೆ. ಅಷ್ಟೇ ಅಲ್ಲಾ ಸಿದ್ದು ಆಪ್ತರು ಇಂತಹದ್ದೊಂದು ಒಪ್ಪಂದ ನಡೆದೇ ಇಲ್ಲ ಅನ್ನೋ ಹೇಳಿಕೆಗಳನ್ನು ನೀಡುತ್ತಿದ್ದಾರೆ.
Also Read : PM-SYM Yojana: ಈ ಯೋಜನೆಯಡಿ ಪ್ರತೀ ತಿಂಗಳು 3000 ರೂ.. : ಪುರುಷರಿಗೂ ಸಿಗುತ್ತೆ ಹಣ
ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ನೀಡಿರುವ ಹೇಳಿಕೆ ನೋಡಿದ್ರೆ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಡೌಟು ಅನ್ನುವಂತಿದೆ. ಆದರೆ ಕಳೆದ ಒಂದು ವಾರದ ಹಿಂದೆಯಷ್ಟೇ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಬಂದಿದ್ದರು.
ಕಾಂಗ್ರೆಸ್ ವರಿಷ್ಠರ ಸಭೆಯಲ್ಲಿ ಮುಂದಿನ ಐದು ತಿಂಗಳ ಒಳಗಾಗಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗೆ ಇಳಿಯಬೇಕಾಗಿದೆ. ಸಿದ್ದರಾಮಯ್ಯ ಸಿಎಂ ಹುದ್ದೆಯಿಂದ ಕೆಳಗೆ ಇಳಿದ ಬಳಿದ ಡಿಕೆ ಶಿವಕುಮಾರ್ ಅವರು ಸಿಎಂ ಆಗ್ತಾರೆ ಅನ್ನೋ ಲೆಕ್ಕಾಚಾರ ಇದೀಗ ಬುಡಮೇಲಾಗಿದೆ. ತಾನು ಸಿಎಂ ಹುದ್ದೆಯಿಂದ ಕೆಳಗೆ ಇಳಿಯುತ್ತೇನೆ, ಆದರೆ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಹುದ್ದೆ ನೀಡಬಾರದು ಅಂತಾ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರಂತೆ.
Karnataka Next CM : ಯಾರಾಗ್ತಾರೆ ಕರ್ನಾಟಕದ ಮುಂದಿನ ಸಿಎಂ..?
ದೆಹಲಿಯಲ್ಲಿ ನಡೆದಿರುವ ಚರ್ಚೆಯ ಕುರಿತು ಈಗಾಗಲೇ ಸಾಕಷ್ಟು ಗುಸುಗುಸು ಕೇಳಿಬರುತ್ತಿದೆ. ಕರ್ನಾಟಕದಲ್ಲಿ ದಲಿತ ಸಿಎಂ ಕೂಗು ಕೇಳಿಬರುತ್ತಿದ್ದು, ಡಾ.ಜಿ ಪರಮೇಶ್ವರ್ ಪದೇ ಪದೇ ದಲಿತ ಅಸ್ತ್ರ ಪ್ರಯೋಗ ಮಾಡುತ್ತಲೇ ಇದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಒಂದೊಮ್ಮೆ ಕರ್ನಾಟಕದ ಮುಖ್ಯಮಂತ್ರಿ ಆಗೋದೇ ಆದ್ರೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೂ ಕೂಡ ಒಪ್ಪಿಗೆ ಇದೆ ಎನ್ನಲಾಗುತ್ತಿದೆ.
ಡಿಕೆ ಶಿವಕುಮಾರ್ ಸದ್ಯ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಸಿದ್ದರಾಮಯ್ಯ ಬಣ ಡಿಕೆಶಿ ಅವರ ಬಳಿಯಿಂದ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಕಸಿಯುವ ಯತ್ನದಲ್ಲಿದೆ. ಈಗಾಗಲೇ ಸಾಕಷ್ಟು ಬಾರಿ ಕಾಂಗ್ರೆಸ್ ವರಿಷ್ಠರ ಮುಂದೆ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಬೇಡಿಕೆ ಇಟ್ಟಿದ್ದರೂ ಕೂಡ ಅದು ಸಾಧ್ಯವಾಗಿರಲಿಲ್ಲ.
Also Read : 5000 ಕಿ.ಮೀ ವೇಗ, ಭೂಮಿ ಸುತ್ತಲು ಕೇವಲ 7 ಗಂಟೆ ! ಏನಿದು ಹೈಪರ್ಸಾನಿಕ್ ವಿಮಾನ
ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಸಿಗದೇ ಇದ್ದರೆ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಕೆ ಆಗಲಿದ್ದಾರೆ. ಅಷ್ಟೇ ಅಲ್ಲಾ ಸಿದ್ದರಾಮಯ್ಯ ತಮ್ಮದು ಕೊನೆಯ ಚುನಾವಣೆ ಅಂತಾ ಈಗಾಗಲೇ ಘೋಷಣೆ ಮಾಡಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಯನ್ನು ಡಿಕೆ ಶಿವಕುಮಾರ್ ನೇತೃತ್ವದಲ್ಲಿಯೇ ಎದುರಿಸುವ ಲೆಕ್ಕಾಚಾರವೂ ನಡೆದಿದೆ. ಒಂದೊಮ್ಮೆ ಕಾಂಗ್ರೆಸ್ ವರಿಷ್ಠರು ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಸಿಎಂ ಹುದ್ದೆಯಲ್ಲಿ ಕೂರಿಸಿದ್ರೂ ಅಚ್ಚರಿಯಿಲ್ಲ.
Who will be Karnataka Next CM : Siddaramaiah, not DK Shivakumar Exclusive Kannada News