ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ (Gruha Lakshmi Scheme) ಮೂಲಕ ಕರ್ನಾಟಕದಲ್ಲಿ ಕೋಟ್ಯಾಂತರ ಕುಟುಂಬ ಆರ್ಥಿಕ ಸಹಕಾರ ಪಡೆಯುತ್ತಿದೆ. ಕಳೆದ ಎರಡು ತಿಂಗಳಿನಿಂದಲೂ ಗೃಹಲಕ್ಷ್ಮೀ ಹಣ ಸಿಗದೆ ಕಂಗಾಲಾಗಿದ್ದ ಯಜಮಾನಿಯರಿಗೆ ಗುಡ್ನ್ಯೂಸ್ ಸಿಕ್ಕಿದೆ. ಗೃಹಲಕ್ಷ್ಮೀ ಯೋಜನೆಯ ಹಣದ ಜೊತೆಗೆ ಪಟ್ಟಿ ಪರಿಷ್ಕರಣೆಯ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಮೂಲಕ ಪ್ರತೀ ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತೀ ತಿಂಗಳು 2000 ರೂಪಾಯಿಯನ್ನು ನೇರ ವರ್ಗಾವಣೆ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದಿದೆ. ಇದೀಗ ಯೋಜನೆಯ ಮೂಲಕ ಪ್ರತೀ ತಿಂಗಳು 2000ಕ್ಕಿಂತಲೂ ಹೆಚ್ಚಿನ ಹಣ ನೀಡಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.
ಆದರೆ ಕಳೆದ ಮೂರು ತಿಂಗಳ ಅವಧಿಯಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಸಕಾಲದಲ್ಲಿ ಯಜಮಾನಿಯರ ಖಾತೆಗೆ ಜಮೆ ಆಗಿರಲಿಲ್ಲ. ಆದ್ರೆ ಮಾರ್ಚ್ ತಿಂಗಳ ಹಣ ಈ ತಿಂಗಳು ಗೃಹಿಣಿಯರ ಖಾತೆಗೆ ಜಮೆ ಆಗಿತ್ತು. ಆದ್ರೀಗ ಎಪ್ರಿಲ್ ಹಾಗೂ ಮೇ ತಿಂಗಳ ಹಣ ಪಾವತಿಯ ಕುರಿತು ಸಚಿವರು ಗುಡ್ನ್ಯೂಸ್ ಕೊಟ್ಟಿದ್ದಾರೆ.
Also Read : Post Office Recruitment 2025 : 10ನೇ ತರಗತಿ ಉತ್ತೀರ್ಣರಾದ್ರೆ ಅಂಚೆ ಇಲಾಖೆಯಲ್ಲಿ ಉದ್ಯೋಗ : 138 ಹುದ್ದೆ, 30 ಸಾವಿರ ವೇತನ
Gruha Lakshmi Scheme : ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ ಇಲ್ಲ
ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಪರಿಷ್ಕರಣೆ ಮಾಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ಕೊಟ್ಟಿದ್ದಾರೆ. ಪ್ರತೀ ತಿಂಗಳು ಗೃಹಲಕ್ಷ್ಮೀ ಯೋಜನೆಗೆ 10 ಸಾವಿರದಿಂದ 15 ಸಾವಿರ ಮಹಿಳೆಯರು ಸೇರ್ಪಡೆ ಆಗುತ್ತಿದ್ದಾರೆ. ಆದರೆ ಹಣ ಸಂದಾಯ ಮಾಡಲು ತಾಂತ್ರಿಕ ಸಮಸ್ಯೆ ಉಂಟಾಗಿದೆ.
ಕೇಂದ್ರ ಸರಕಾರದ ನಿಯಮದ ಪ್ರಕಾರ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಇಲಾಖೆಯ ಬದಲು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಮೂಲಕ ನೀಡಬೇಕು. ಕೆಲವೊಂದು ತಾಂತ್ರಿಕ ಸಮಸ್ಯೆಯ ಕಾರಣದಿಂದಾಗಿ ಹಣವನ್ನು ಗೃಹಿಣಿಯರಿಗೆ ತಲುಪುವಲ್ಲಿ ವಿಳಂಭವಾಗುತ್ತಿದೆಯೇ ಹೊರತು ಬೇರೆ ಯಾವುದೇ ಕಾರಣವಿಲ್ಲ ಎಂದಿದ್ದಾರೆ.
Also Read : PM-SYM Yojana: ಈ ಯೋಜನೆಯಡಿ ಪ್ರತೀ ತಿಂಗಳು 3000 ರೂ.. : ಪುರುಷರಿಗೂ ಸಿಗುತ್ತೆ ಹಣ
Gruha Lakshmi Scheme Good News in Kannada News