ನಾಳೆ ಚಂದ್ರ ಗ್ರಹಣ: ಯಾವ ರಾಶಿಯವರಿಗೆ ಲಾಭ? ಯಾವ ರಾಶಿಯವರಿಗೆ ನಷ್ಟ?

Lunar Eclipse 2025: ಸೂರ್ಯ ಗ್ರಹಣ ಮತ್ತು ಚಂದ್ರ ಗ್ರಹಣಗಳೆರಡೂ ಬಾನಂಗಳದಲ್ಲಿ ನಡೆಯುವ ಕೌತುಕಗಳು. ಇದೇ ಸ್ಟೆಪ್ಟೆಂಬರ್‌ 7 ರಂದು ಆಗಸದಲ್ಲಿ ಈ ವರ್ಷದ ಎರಡನೇಯ ಹಾಗೂ ಕೊನೆಯ ಚಂದ್ರ ಗ್ರಹಣ ನಡೆಯಲಿದೆ.

ಭಾದ್ರಪದ ಮಾಸದ ಹುಣ್ಣಿಮೆ ತಿಥಿಯಂದು ಈ ವಿದ್ಯಮಾನ ಜರುಗಲಿ‌ದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಣವನ್ನು ಅತ್ಯಂತ ಸೂಕ್ಷ್ಮ ಸಮಯ ಎಂದು ಹೇಳಲಾಗುತ್ತದೆ.

ಈ ಸಮಯದಲ್ಲಿ ಕೆಲವು ಧಾರ್ಮಿಕ ಆಚರಣೆಗಳನ್ನು ನಡೆಸಲಾಗುತ್ತದೆ. ಅದರ ಜೊತೆಗೆ ಕೆಲವು ಆಚರಣೆಗಳನ್ನು ನಿಷೇಧಿಸಲಾಗಿದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಣವು ಕೆಲವು ರಾಶಿಯವರಿಗೆ ಒಳ್ಳೆಯದನ್ನು ಮಾಡಿದರೆ ಇನ್ನು ಕೆಲವು ರಾಶಿಯವರಿಗೆ ಕೆಟ್ಟ ಪರಿಣಾಮವನ್ನು ಉಂಟುಮಾಡುತ್ತದೆ. ಅದಕ್ಕೆ ಶಾಸ್ತ್ರದಲ್ಲಿ ಪರಿಹಾರಗಳನ್ನು ಸಹ ಸೂಚಿಸಲಾಗಿದೆ.

ಈ ಗ್ರಹಣದ ಸಮಯದಲ್ಲಿ ಏನು ಮಾಡಬೇಕು? ದೋಷ ಪರಿಹಾರ ಹೇಗೆ ಎಂದು ತಿಳಿದುಕೊಳ್ಳೋಣ.

ಗ್ರಹಣ ಪ್ರಾರಂಭ ಮತ್ತು ಅಂತ್ಯ

ಈ ವರ್ಷದ 2ನೇ ಚಂದ್ರ ಗ್ರಹಣವು ಸೆಪ್ಟೆಂಬರ್‌ 7ರಂದು ಜರುಗಲಿದೆ. ಚಂದ್ರ ಗ್ರಹಣವು ಸೆಪ್ಟೆಂಬರ್‌ 7 ರ ರಾತ್ರಿ 9:58ಕ್ಕೆ ಪ್ರಾರಂಭವಾಗಿ ರಾತ್ರಿ 1:28 ನಿಮಿಷಕ್ಕೆ ಮುಕ್ತಾಯವಾಗುತ್ತದೆ. ಗ್ರಹಣದ ಆರಂಭ ಮತ್ತು ಮೋಕ್ಷಕಾಲದಲ್ಲಿ ಭಗವಂತನನ್ನು ಸ್ಮರಿಸುವುದರಿಂದ ಎಲ್ಲ ದೋಷಗಳು ನಾಶವಾಗುತ್ತವೆ. ಜ್ಯೋತಿಷ್ಯದ ಪ್ರಕಾರ ಚಂದ್ರ ಗ್ರಹಣದ ಸೂತಕವು ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಗುತ್ತದೆ. ಸೂತಕದ ಆರಂಭದಿಂದ ಗ್ರಹಣದ ಅಂತ್ಯದವರೆಗೆ, ಆಹಾರವನ್ನು ಸೇವಿಸುವುದನ್ನು ನಿಷೇಧಿಸಲಾಗಿದೆ. ಗ್ರಹಣದ ಸಮಯದಲ್ಲಿ ಯಾವುದೇ ಮಂತ್ರ ಮತ್ತು ಗುರು ಮಂತ್ರವನ್ನು ಪಠಿಸುವುದರಿಂದ ಸಿದ್ಧಿ ಪ್ರಾಪ್ತಿಯಾಗುತ್ತದೆ ಮತ್ತು ದೇಹದ ಆರೋಗ್ಯವನ್ನು ಕಾಪಾಡುತ್ತದೆ.

ಇದನ್ನೂ ಓದಿ: ಸ್ಯಾಮ್‌ಸಂಗ್‌ನ ಅತ್ಯಂತ ಅಗ್ಗದ ಫೋನ್ ಗ್ಯಾಲಕ್ಸಿ S25 FE ಬಿಡುಗಡೆ: 4 ಕ್ಯಾಮೆರಾ, AI ತಂತ್ರಜ್ಞಾನ ಇದರೆ ವೈಶಿಷ್ಟ್ಯ

ಚಂದ್ರ ಗ್ರಹಣದಂದು ಯಾವ ರಾಶಿಯವರು ಏನು ದಾನ ಮಾಡಬೇಕು?

ಗ್ರಹಣದ ಸಮಯವು ಕೆಲವು ರಾಶಿಯವರ ಮೇಲೆ ದೋಷದ ಪರಿಣಾಮವನ್ನುಂಟು ಮಾಡುತ್ತದೆ.

ಮೇಷ ರಾಶಿ: ಈ ಚಂದ್ರಗ್ರಹಣದಿಂದ ಮೇಷ ರಾಶಿಯವರಿಗೆ ಲಾಭವಾಗುತ್ತದೆ. ಮೇಷ ರಾಶಿಯವರು ಕೆಂಪು ಬೇಳೆಯನ್ನು ದಾನ ಮಾಡಬೇಕು, ಇದಲ್ಲದೆ, ಬಿಳಿ ವಸ್ತುಗಳನ್ನು ದಾನ ಮಾಡುವುದರಿಂದಲೂ ಪ್ರಯೋಜನ ಪಡೆದುಕೊಳ್ಳುತ್ತಾರೆ.
ವೃಷಭ ರಾಶಿ: ವೃಷಭ ರಾಶಿಯವರು ಜೀವನದಲ್ಲಿ ಸಂತೋಷವನ್ನು ಪಡೆಯುತ್ತಾರೆ. ವೃಷಭ ರಾಶಿಯವರು ಹಾಲು, ಮೊಸರು ಅಥವಾ ಅಕ್ಕಿಯಂತಹ ಬಿಳಿ ವಸ್ತುಗಳನ್ನು ದಾನ ಮಾಡಬೇಕು.
ಮಿಥುನ ರಾಶಿ: ಮಿಥುನ ರಾಶಿಯವರು ಹಸಿರು ಬಟ್ಟೆ ಮತ್ತು ಹಣ್ಣುಗಳನ್ನು ದಾನ ಮಾಡಬೇಕು.
ಕಟಕ ರಾಶಿ: ಕಟಕ ರಾಶಿಯವರು ಸಕ್ಕರೆ ಮಿಠಾಯಿ ಮತ್ತು ಹಾಲು ದಾನ ಮಾಡಬೇಕು.
ಸಿಂಹ ರಾಶಿ: ಸಿಂಹ ರಾಶಿಯವರು ಬೆಲ್ಲವನ್ನು ದಾನ ಮಾಡಬೇಕು.
ಕನ್ಯಾ ರಾಶಿ: ಕನ್ಯಾ ರಾಶಿಯವರು ಶುಭವನ್ನು ಪಡೆಯುತ್ತಾರೆ. ಕನ್ಯಾ ರಾಶಿಯವರು ಹೆಸರುಕಾಳನ್ನು ದಾನ ಮಾಡಬೇಕು.
ತುಲಾ ರಾಶಿ: ತುಲಾ ರಾಶಿಯವರು ಹಾಲು, ಅಕ್ಕಿ ಮತ್ತು ತುಪ್ಪವನ್ನು ದಾನ ಮಾಡಬೇಕು.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರು ಕೆಂಪು ವಸ್ತುಗಳನ್ನು ದಾನ ಮಾಡಬೇಕು.
ಮಕರ ರಾಶಿ: ಮಕರ ರಾಶಿಯವರು ಕಪ್ಪು ಎಳ್ಳನ್ನು ದಾನ ಮಾಡಬೇಕು.
ಕುಂಭ ರಾಶಿ: ಕುಂಭ ರಾಶಿಯವರು ಕಪ್ಪು ಎಳ್ಳು ಮತ್ತು ಎಣ್ಣೆಯನ್ನು ದಾನ ಮಾಡಬೇಕು.
ಮೀನ ರಾಶಿ: ಮೀನ ರಾಶಿಯವರು ಅರಿಶಿಣವನ್ನು ದಾನ ಮಾಡಬೇಕು.

ಇದನ್ನೂ ಓದಿ: Gruhalaskhmi : ಗೃಹಲಕ್ಷ್ಮೀ ಯೋಜನೆ : ಗೃಹಿಣಿಯರಿಗೆ ಭರ್ಜರಿ ಗುಡ್‌ನ್ಯೂಸ್

(When is Lunar Eclipse 2025 know the time date dos and dnots)

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories