Illegal cow transport: ಅಕ್ರಮ ಗೋ ಸಾಗಾಟದ ವೇಳೆ ಕೆಟ್ಟು ನಿಂತ ವಾಹನ : ನಡುರಸ್ತೆಯಲ್ಲೇ ಹಸುಗಳನ್ನು ಬಿಟ್ಟು ಖದೀಮರು ಎಸ್ಕೇಪ್​

ಪುತ್ತೂರು : Illegal cow transport: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ವಾಹನ ಕೆಟ್ಟು ಹೋದ ಪರಿಣಾಮ ನಡು ರಸ್ತೆಯಲ್ಲಿಯೇ ಕಸಾಯಿಖಾನೆಗೆ ಸಾಗಿಸಬೇಕಿದ್ದ ವಾಹನಗಳನ್ನು ಬಿಟ್ಟು ಖದೀಮರು ಎಸ್ಕೇಪ್​ ಆದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು(Puttur) ತಾಲೂಕಿನ ನರಿಮೊಗರು ಸಮೀಪವಿರುವ ಗಡಿಪಿಲ ಎಂಬಲ್ಲಿ ಸಂಭವಿಸಿದೆ. ಈ ಸಂಬಂಧ ಪುತ್ತಿಲ ಪರಿವಾರ ಸೇವಾ ಟ್ರಸ್ಟ್​ ಪುತ್ತೂರು ನಗರದ ಪೊಲೀಸ್​ ಠಾಣೆಗೆ ದೂರು ನೀಡಿದೆ.

ಪುತ್ತೂರು ನಗರ ಠಾಣೆಗೆ ನೀಡಲಾದ ದೂರಿನಲ್ಲಿ ನರಿಮೊಗರು ಸಮೀಪದ ಗಡಿಪಲ ಎಂಬಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ವಾಹನ ಕೆಟ್ಟು ಹೋದ ಹಿನ್ನೆಲೆಯಲ್ಲಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನಗಳನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

ಮಾಲೀಕರಿಲ್ಲದ ಜಾನುವಾರುಗಳನ್ನು ಕದ್ದು ಈ ವಾಹನಗಳಲ್ಲಿ ಸಾಗಾಟ ಮಾಡಿರುವ ಅನುಮಾನ ಮೂಡಿದೆ. ಈ ಸಂಬಂಧ ಸೂಕ್ತ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್​ ಆಗ್ರಹಿಸಿದೆ.

Also Read: ಮಂಗಳೂರು : ಚಪ್ಪಲಿಯಿಂದ ಸಾರ್ವಜನಿಕ ಸ್ಥಳದಲ್ಲೇ ತಾಯಿಗೆ ಥಳಿಸಿದ ಮಗಳು : ವಿಡಿಯೋ ವೈರಲ್​

ಕೆಲವು ತಿಂಗಳುಗಳ ಹಿಂದಷ್ಟೇ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಸಮೀಪದ ಬೆಳ್ಳಿ ಚಡವು ಎಂಬಲ್ಲಿ ಅಕ್ರಮ ಗೋ ಸಾಗಾಟದಾರರ ಮೇಲೆ ಶೂಟೌಟ್​ ಮಾಡಲಾಗಿತ್ತು.

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories