ಸಿಎಂ ಸ್ಥಾನಕ್ಕಾಗಿ ಮುಂದುವರಿದ ಡಿಕೆಶಿ ಸರ್ಕಸ್​ : ರಾಹುಲ್​, ಸೋನಿಯಾ ಜೊತೆ ಮಹತ್ವದ ಮೀಟಿಂಗ್​​

Karnataka CM Change Secrete Meeting : ನವದೆಹಲಿ : ಮತಗಳ್ಳತನ ವಿರುದ್ಧದ ಹೋರಾಟಕ್ಕಾಗಿ ದೆಹಲಿಗೆ ತೆರಳಿದ್ದ ಡಿಸಿಎಂ ಡಿ.ಕೆ ಶಿವಕುಮಾರ್​​ ಈ ಸಂದರ್ಭದಲ್ಲಿಯೂ ತಮ್ಮ ಸಿಎಂ ಸ್ಥಾನದ ಲಾಬಿ ಪ್ರಯತ್ನ ಮುಂದುವರಿಸಿದ ಎಲ್ಲಾ ಲಕ್ಷಣಗಳು ಕಂಡು ಬಂದಿದೆ.

ನಿನ್ನೆ ಸಂಜೆ ಕಾಂಗ್ರೆಸ್​ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್​ ಗಾಂಧಿಯನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕಾಗಿ ಮತ್ತೊಮ್ಮೆ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ.

ಮತಗಳ್ಳತನ ವಿರುದ್ಧದ ಹೋರಾಟದ ಹಿನ್ನೆಲೆಯಲ್ಲಿ ನಿನ್ನೆ ಸಿಎಂ ಸಿದ್ದರಾಮಯ್ಯ ಕೂಡ ದೆಹಲಿಯಲ್ಲೇ ಇದ್ದರು. ಪ್ರತಿಭಟನಾ ಸಮಾವೇಶ ಮುಗಿಸಿ ಸಿಎಂ ಸಿದ್ದರಾಮಯ್ಯ ಬೆಳಗಾವಿಯತ್ತ ಮುಖ ಮಾಡಿದ್ರೆ, ಡಿಸಿಎಂ ಡಿ.ಕೆ ಶಿವಕುಮಾರ್​ ಮಾತ್ರ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ.

ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಭೇಟಿಗೆ ತೆರಳಿದ ಡಿ.ಕೆ ಶಿವಕುಮಾರ್​ ಮತ್ತೊಮ್ಮೆ ಸಿಎಂ ಸ್ಥಾನದ ಅಭಿಲಾಷೆ ಹೊರ ಹಾಕಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಅಧಿಕಾರ ಬದಲಾವಣೆ ಕುರಿತಂತೆ ಶೀಘ್ರದಲ್ಲೇ ಮಹತ್ವದ ನಿರ್ಧಾರ ಹೊರಹಾಕುವ ಭರವಸೆಯನ್ನು ಸೋನಿಯಾ ಹಾಗೂ ರಾಹುಲ್​​ ನೀಡಿದ್ದಾರೆ ಎನ್ನಲಾಗಿದೆ.ಆದರೆ ಈ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ಇದೊಂದು ಸೌಹಾರ್ದ ಭೇಟಿ ಅಷ್ಟೇ.

ಎಲ್ಲಾ ಮಾಹಿತಿಯನ್ನು ನಾನು ಇಲ್ಲಿ ಹಂಚಿಕೊಳ್ಳಲು ಆಗುವುದಿಲ್ಲ. ಹೇಳಿಕೊಳ್ಳುವ ಅನಿವಾರ್ಯತೆಯೂ ನನಗಿಲ್ಲ ಎಂದು ಹೇಳಿದ್ದಾರೆ.ಆದರೂ ಸಿಎಂ ಸಿದ್ದರಾಮಯ್ಯ ದೆಹಲಿಯಿಂದ ನಿರ್ಗಮಿಸುತ್ತಿದ್ದಂತೆಯೇ ಡಿ.ಕೆ ಶಿವಕುಮಾರ್​ ವರಿಷ್ಠರ ಭೇಟಿಗೆ ಮುಂದಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿದೆ.

Karnataka CM Change DK Shivakumar Sonia Gandhi and Rahul Gandhi Secrete Meeting

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories