ಪುತ್ತೂರು: ತಂದೆಗೆ ಚಾಕು ಇರಿದು ಮಗ ಆತ್ಮಹತ್ಯೆ; ರಾಮಕುಂಜದಲ್ಲಿ ಘೋರ ದುರಂತ!

Puttur Crime News: ಪುತ್ತೂರು: ತಂದೆ ಮತ್ತು ಮಗನ ನಡುವೆ ನಡೆದ ಜಗಳವೊಂದು ಅಂತಿಮವಾಗಿ ದುರಂತದಲ್ಲಿ ಅಂತ್ಯಗೊಂಡಿರುವ ಘಟನೆ ಪುತ್ತೂರಿನ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ನಡೆದಿದೆ. ತಂದೆಗೆ ಚಾಕು ಇರಿದ ಮಗ, ಬಳಿಕ ತಾನೂ ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿದ್ದಾನೆ.

ಘಟನೆಯ ವಿವರ:

ಮೂಲತಃ ಕೇರಳದವರಾದ ವಸಂತ ಅಮೀನ್ ಎಂಬವರು ರಾಮಕುಂಜದ ಪಾದೆಯಲ್ಲಿ ಜಾಗ ಖರೀದಿಸಿ ವಾಸವಿದ್ದರು. ಶನಿವಾರ ಸಂಜೆ (ಜನವರಿ 24) ವಸಂತ ಅಮೀನ್ ಹಾಗೂ ಅವರ ಪುತ್ರ ಮೋಕ್ಷ ನಡುವೆ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ತೀವ್ರ ಜಗಳ ನಡೆದಿದೆ. ಈ ವೇಳೆ ಆವೇಶಕ್ಕೊಳಗಾದ ಮಗ ಮೋಕ್ಷ, ತಂದೆಗೆ ಚಾಕುವಿನಿಂದ ಇರಿದಿದ್ದಾನೆ.

ಇದನ್ನೂ ಓದಿ: ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ಮಹಿಳಾ ಟೆಸ್ಟ್ ತಂಡ ಪ್ರಕಟ

​ತಂದೆಯ ಮೇಲೆ ಹಲ್ಲೆ ನಡೆಸಿದ ಬೆನ್ನಲ್ಲೇ ತೀವ್ರ ಆತಂಕಕ್ಕೊಳಗಾದ ಮಗ, ಮನೆಯಲ್ಲಿದ್ದ ಕೋವಿಯಿಂದ ತನಗೆ ತಾನೇ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಿದೆ.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related Stories