2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ : ಕರ್ನಾಟಕದ 9 ಮಂದಿಗೆ ಸ್ಥಾನ
2026ನೇ ಸಾಲಿನ ಪದ್ಮ ಪ್ರಶಸ್ತಿ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಈ ಬಾರಿಯ ಪದ್ಮ ಪಟ್ಟಿಯಲ್ಲಿ ಕರ್ನಾಟಕದ 9 ಸಾಧಕರು ಸ್ಥಾನ ಪಡೆದಿದ್ದಾರೆ. ಶತಾವಧಾನಿ ಗಣೇಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆಯಾಗಿದ್ದರೆ, ಅಂಕೇಗೌಡ, ಅರ್ಮಿದಾ ಫರ್ನಾಂಡೀಸ್, ಸುಶೀಲಮ್ಮ, ಪ್ರಭಾಕರ ಕೋರೆ, ಶಶಿ ಶೇಖರ ವೆಂಪಾಟಿ, ಶುಭಾ ವೆಂಕಟೇಶ ಅಯ್ಯಂಗಾರ್, ಸುರೇಶ್ ಹನಗವಾಡಿ ಹಾಗೂ ಟಿ.ಟಿ ಜಗನ್ನಾಥ ಅವರಿಗೆ ಪದ್ಮಶ್ರೀ ಪ್ರಶಸ್ತಿ ದೊರಕಿದೆ.
ಈ ಬಾರಿ ಒಟ್ಟೂ 131 ಜನರಿಗೆ ಪದ್ಮ ಪ್ರಶಸ್ತಿ ಪ್ರಕಟಿಸಲಾಗಿದೆ. ಇದರಲ್ಲಿ 5 ಪದ್ಮವಿಭೂಷಣ, 13 ಪದ್ಮಭೂಷಣ ಹಾಗೂ 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ.
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಹಾಗೂ ಕೇರಳದ ಮಾಜಿ ಸಿಎಂ ವಿ.ಎಸ್ ಅಚ್ಯುತಾನಂದನ್ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ.
ಇದನ್ನೂ ಓದಿ: ಭಾರತ ಸರ್ಕಾರದ ಅತ್ಯುನ್ನತ ಪದ್ಮ ಪ್ರಶಸ್ತಿ 2026: ಯಾರಿಗೆ ಯಾವ ಪ್ರಶಸ್ತಿ? ಇಲ್ಲಿದೆ ಸಂಪೂರ್ಣ ಪಟ್ಟಿ
ಇನ್ನು ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಕ್ರಿಕೇಟಿಗ ರೋಹಿತ್ ಶರ್ಮಾ ಅವರಿಗೂ ಪದ್ಮಶ್ರೀ ಒಲಿದಿದೆ. ಇನ್ನುಳಿದಂತೆ ಭಾರತೀಯ ಕ್ರೀಡಾಪಟುಗಳಾದ ಪ್ರವೀಣ್ ಕುಮಾರ್, ಸವಿತಾ ಪುನಿತಾ, ಬಲದೇವ್ ಸಿಂಗ್, ಭಗವಾನ್ ದಾಸ್ ರಾಯ್ಕ್ಬಾರ್ ಹಾಗೂ ಕೆ. ಪಜನಿವೇಲ್ ಕೂಡ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.



