ಶಿರಸಿ ಮಾರಿಕಾಂಬಾ ಜಾತ್ರೆಗೆ ಆಗಮಿಸುವ ಭಕ್ತರಿಗೆ ರೈಲ್ವೆ ಇಲಾಖೆಯಿಂದ ಸಿಹಿಸುದ್ದಿ

ಶಿರಸಿ : ಕರುನಾಡಿನ ಸುಪ್ರಸಿದ್ಧ ಜಾತ್ರೆಗಳ ಪೈಕಿ ಒಂದಾದ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆಗೆ ಜನಸಾಗರವೇ ಹರಿದುಬರುತ್ತದೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಕೂಡ ಉಂಟಾಗುತ್ತಿದೆ . ಇದನ್ನು ಮನಗಂಡು ನೈಋತ್ಯ ರೈಲ್ವೆಯು ಭಕ್ತರ ಅನುಕೂಲಕ್ಕಾಗಿ 2 ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ಯಶವಂತಪುರದಿಂದ ತಾಳಗುಪ್ಪದವರೆಗೆ ಈ ವಿಶೇಷ ರೈಲು ಸೇವೆ ಲಭ್ಯವಿರಲಿದೆ.

ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ನಾಳೆಯಿಮದಲೇ ಸಂಚಾರ ಆರಂಭಿಸಲಿದೆ. ರೈಲು ಸಂಖ್ಯೆ 06587 ನಾಳೆ ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಶನಿವಾರ ಮುಂಜಾನೆ 05:05ಕ್ಕೆ ತಾಳಗುಪ್ಪ ತಲುಪಲಿದೆ. ಮತ್ತೆ ವಾಪಸ್​​​​​​ ಬೆಂಗಳೂರಿಗೆ ರೈಲು ಸಂಖ್ಯೆ 06588 ಶನಿವಾರ ಬೆಳಿಗ್ಗೆ 09:30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 05:15ಕ್ಕೆ ಯಶವಂತಪುರ ತಲುಪಲಿದೆ.
ಮಾರ್ಚ್​​ ಒಂದರಿಂದ ರೈಲು ಸಂಖ್ಯೆ 16581 ಮಧ್ಯರಾತ್ರಿ 12:15ಕ್ಕೆ ಯಶವಂತಪುರದಿಂದ ಹೊರಟು ಬೆಳಿಗ್ಗೆ 9ಕ್ಕೆ ತಾಳಗುಪ್ಪ ತಲುಪಲಿದೆ. ಇನ್ನು ಅದೇ ದಿನ ಅಂದರೆ ಮಾರ್ಚ್ 1 ರಂದು ರೈಲು ಸಂಖ್ಯೆ 16582 ರಾತ್ರಿ 10ಕ್ಕೆ ತಾಳಗುಪ್ಪದಿಂದ ಹೊರಟು ಮರುದಿನ ಮುಂಜಾನೆ 04:45ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ: ವಂದೇ ಭಾರತ್​ ರೈಲು ವಿವಾದ : ಮಂಗಳೂರಿಗರಿಗೆ ಭಾರೀ ನಿರಾಶೆ

ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಳು ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ ಜಂಬಗಾರು ನಿಲುಗಡೆ ಇರುವುದರಿಂದ ಈ ಭಾಗಗಳಿಂದ ಆಗಮಿಸುವ ಭಕ್ತಾದಿಗಳಿಗೂ ಅನುಕೂಲವಾಗಲಿದೆ. ಜಾತ್ರೆಗೆ ಆಗಮಿಸುವ ಭಕ್ತರ ಸಂಖ್ಯೆ ಅಧಿಕವಾಗಿರುವ ಹಿನ್ನೆಲೆಯಲ್ಲಿ ಮುಂಗಡ ಟಿಕೆಟ್​ ಬುಕ್ಕಿಂಗ್​ ಮಾಡಿಕೊಳ್ಳುವಂತೆ ರೈಲ್ವೆ ಇಲಾಖೆ ಸಲಹೆ ನೀಡಿದೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories