ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಯಾವುದೇ ಬದಲಾವಣೆಯಿಲ್ಲ: ಕೇಂದ್ರ ಸರ್ಕಾರದಿಂದ ಹೊರಬಿತ್ತು ಸ್ಪಷ್ಟನೆ
ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭಗೊಂಡ ಬಳಿಕ ದೇಶದಲ್ಲಿ ಎಲ್ಪಿಜಿ ಸಿಲಿಂಡರ್ಗಳಿಗೆ ಅಭಾವ ಸೃಷ್ಟಿಯಾಗಿದೆ. ಈ ನಡುವೆ ಸಿಲಿಂಡರ್ಗಳ ಮರಪೂರಣ ಅವಧಿಯಲ್ಲಿಯೂ ವಿಸ್ತರಣೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿತ್ತು.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭಗೊಂಡ ಬಳಿಕ ದೇಶದಲ್ಲಿ ಎಲ್ಪಿಜಿ ಸಿಲಿಂಡರ್ಗಳಿಗೆ ಅಭಾವ ಸೃಷ್ಟಿಯಾಗಿದೆ. ಈ ನಡುವೆ ಸಿಲಿಂಡರ್ಗಳ ಮರಪೂರಣ ಅವಧಿಯಲ್ಲಿಯೂ ವಿಸ್ತರಣೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿತ್ತು. ಇದು ಸಾರ್ವಜನಿಕರ ಅನುಮಾನಗಳಿಗೆ ಮತ್ತಷ್ಟು ಇಂಬು ನೀಡಿದೆ.
ಆದರೆ ಇದೀಗ ಈ ಎಲ್ಲಾ ವರದಿಗಳನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದ್ದು, ಎಲ್ಪಿಜಿ ಮರುಪೂರಣದ ಅವಧಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹಾಗೂ ನಿಗದಿತ ಸಮಯದ ಮಿತಿಯಲ್ಲೇ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪುನರುಚ್ಛರಿಸಿದೆ.
ಎಲ್ಪಿಜಿ ಮರುಪೂರಣ ಬುಕ್ಕಿಂಗ್ ಸಮಯಸೂಚಿಯಲ್ಲಿ ಬದಲಾವಣೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವರದಿ ಸುಳ್ಳು ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟನೆ ನೀಡಿದೆ.
ಈ ವರದಿಗಳಿಗೆ ಯಾವುದೇ ಆಧಾರವಿಲ್ಲ. ದೇಶದಲ್ಲಿ ಸಾಕಷ್ಟು ಎಲ್ಪಿಜಿ ಸರಬರಾಜು ಇದ್ದು ನಾಗರಿಕರು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಅನಗತ್ಯ ಆತಂಕವನ್ನು ಸೃಷ್ಠಿಸುವಂತಹ ಇಂತಹ ಸುದ್ದಿಗಳಿಗೆ ಕಿವಿಗೊಡಬೇಡಿ . ಎಲ್ಪಿಜಿ ಪೂರೈಕೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಅಲ್ಲದೇ ಎಲ್ಪಿಜಿ ಅಭಾವವಾಗಬಹುದು ಎಂಬ ಆತಂಕದಲ್ಲಿ ಅನಗತ್ಯ ಸಿಲಿಂಡರ್ ಬುಕ್ಕಿಂಗ್ ಮಾಡುವ ಅಗತ್ಯ ಕೂಡ ಇಲ್ಲ ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯ ದೇಶದ ಜನತೆಗೆ ಕರೆ ನೀಡಿದೆ.
Also Read: ದೇಶದ ಪ್ರಮುಖ ನಗರಗಳಲ್ಲಿ ತೈಲೋತ್ಪನ್ನಗಳ ಕೊರತೆ : ಎಲ್ಲೆಲ್ಲೂ ‘ನೋ ಸ್ಟಾಕ್’ ಬೋರ್ಡ್
ಇಂಡಿಯನ್ ಆಯಿಲ್ ಕೂಡ ತನ್ನ ಅಧಿಕೃತ ಖಾತೆಯಲ್ಲಿ ಈ ವಿಚಾರವಾಗಿ ಮಾಹಿತಿ ಹಂಚಿಕೊಂಡಿದ್ದು, ಎಲ್ಪಿಜಿ ಮರುಪೂರಣ ಬುಕ್ಕಿಂಗ್ ಸಮಯಸೂಚಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ವಿಷಯವಾಗಿದೆ.
ಈ ಹಿಂದಿನಂತೆಯೇ ನಗರ ಪ್ರದೇಶಗಳಿಗೆ 25 ದಿನ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳ ಮಿತಿಯನ್ನೇ ನಿಗದಿಪಡಿಸಲಾಗಿದ್ದು ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ದೇಶಾದ್ಯಂತ ಎಲ್ಪಿಜಿ ಸರಬರಾಜಿನಲ್ಲೂ ಯಾವುದೇ ಬದಲಾವಣೆ ಇಲ್ಲ. ಹೀಗಾಗಿ ಅನಗತ್ಯ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಬರೆಯಲಾಗಿದೆ.
No change in gas booking period Clarification issued by Central Govt



