ಇಂಧನ ಬಿಕ್ಕಟ್ಟಿನ ನಡುವೆಯೇ ದೇಶದ ಜನತೆಗೆ ಕೇಂದ್ರ ಸರ್ಕಾರದಿಂದ ಗುಡ್ನ್ಯೂಸ್ : ಅಬಕಾರಿ ಸುಂಕದಲ್ಲಿ ಭಾರೀ ಕಡಿತ
Excise Duty: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಲ್ಲಿ ತೈಲ ಬಿಕ್ಕಟ್ಟು ಸೃಷ್ಠಿಯಾಗಿದ್ದು ಶೀಘ್ರದಲ್ಲಿಯೇ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಲಿದೆ ಎಂಬ ಊಹಾಪೋಹಗಳ ನಡುವೆಯೇ ಕೇಂದ್ರ ಸರ್ಕಾರ ದೇಶದ ಜನತೆಗೆ ಗುಡ್ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ 70 ಪ್ರತಿಶತ ಏರಿಕೆ ಮಾಡಿದ್ದರೆ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಶೇಕಡಾ 10ರಷ್ಟು ಕಡಿತಗೊಳಿಸಿ ಉದ್ಯಮ ವಲಯಕ್ಕೆ ಬೆಂಬಲ ನೀಡಿದೆ ಎಂದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.
ಸಂಪೂರ್ಣ ಜಗತ್ತಿನಲ್ಲಿ ಇಂಧನ ಪೂರೈಕೆಯಲ್ಲಿ ಸಂಕಷ್ಟ ಎದುರಾಗಿರುವ ಈ ಸಂದರ್ಭದಲ್ಲಿ ಭಾರತದ ಕೈಗಾರಿಕಾ ವಲಯಕ್ಕೆ ಯಾವುದೇ ರೀತಿಯ ತೊಂದರೆ ಬಾರದಂತೆ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಈ ಮಾತಿಗೆ ಸಾಕ್ಷಿ ಎಂಬಂತೆ ಪೂರಕವಾಗಿ ತೈಲ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ್ದಲ್ಲದೇ, ವಾಣಿಜ್ಯ ಎಲ್ ಪಿಜಿ ಹಂಚಿಕೆಯನ್ನು ಹೆಚ್ಚಿಸಿದೆ.
ದೇಶದಲ್ಲಿ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗುತ್ತಿರುವ ಅಭಾವ ಗಮನಕ್ಕೆ ಬರುತ್ತಿದ್ದಂತೆಯೇ ಕಾರ್ಯೋನ್ಮುಖರಾದ ಪ್ರಧಾನಿ ಮೋದಿ ಅವರು ದೇಶದಲ್ಲಿ ವಾಣಿಜ್ಯ ಸಿಲಿಂಡರ್ಗಳ ಪೂರೈಕೆ ಪ್ರಮಾಣವನ್ನು ಶೇಕಡಾ 70ರಷ್ಟು ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದಾರೆ. ಇದರಿಂದ ದೇಶದ ಆಟೋಮೊಬೈಲ್, ಉಕ್ಕು ಸೇರಿದಂತೆ ವಿವಿಧ ಉತ್ಪಾದನಾ ವಲಯಗಳಿಗೆ ಹೆಚ್ಚಿನ ಲಾಭವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಇದನ್ನೂ ಓದಿ: ಭಾರತದಲ್ಲಿ ಜಾರಿಯಾಗುತ್ತಾ ಕೊರೊನಾ ಮಾದರಿ ಲಾಕ್ ಡೌನ್ : ಕೇಂದ್ರ ಸರಕಾರದಿಂದ ಮಹತ್ವದ ಸೂಚನೆ
ದೇಶದಲ್ಲಿ ಲಾಕ್ಡೌನ್ ಇಲ್ಲ
ಇನ್ನು ದೇಶದಲ್ಲಿ ಕೊರೊನಾ ಮಾದರಿಯ ಲಾಕ್ಡೌನ್ ಜಾರಿಯಾಗಲಿದೆ ಎಂಬ ಗೊಂದಲಕ್ಕೂ ಇದೇ ವೇಳೆ ತೆರೆ ಎಳೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೇಶದಲ್ಲಿ ಕೊರೊನಾ ಮಾದರಿ ಪರಿಸ್ಥಿತಿ ಏನಿಲ್ಲ. ಹೀಗಾಗಿ ದೇಶದಲ್ಲಿ ಲಾಕ್ಡೌನ್ ಜಾರಿಮಾಡುವಂತಹ ಪ್ರಸ್ತಾವನೆಯೇ ಸರ್ಕಾರದ ಮುಂದೆ ಬಂದಿಲ್ಲ. ಹೀಗಾಗಿ ಯಾರೊಬ್ಬರೂ ಇಂತಹ ಹುಸಿ ಮಾತುಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಮ್ಮ ಸರ್ಕಾರ ಎಂದಿಗೂ ಜನಪರ ನಿಲುವು ಕೈಗೊಳ್ಳಲಿದೆ ಎಂದಿದ್ದಾರೆ.



