ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಖ್ಯಾತ ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆಯನ್ನು ನೀಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದಲ್ಲಿ ದಿನಕ್ಕೊಂದು ಹೆಸರು ಕೇಳಿಬರುತ್ತಿದೆ. ರಾಗಿಣಿ, ಸಂಜನಾ ಜೈಲು ಸೇರಿದ ಬೆನ್ನಲ್ಲೇ ಇದೀಗ ತೆಲುಗು ನಟ ಹಾಗೂ ಕನ್ನಡ ಕಿರುತೆರೆಯ ಖ್ಯಾತ ನಿರೂಪಕ ಅಕುಲ್ ಬಾಲಾಜಿ ಹೆಸರು ಡ್ರಗ್ಸ್ ಮಾಫಿಯಾದಲ್ಲಿ ಕೇಳಿಬಂದಿದೆ. ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಅಕುಲ್ ಬಾಲಾಜಿ ಹೆಸರನ್ನು ಬಾಯ್ಬಿಟ್ಟಿದ್ದು, ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಸೂಚನೆಯನ್ನು ಕೊಟ್ಟಿದೆ.

ಇನ್ನು ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದಲ್ಲಿ ರಾಜಕಾರಣಿಗಳ ಮಕ್ಕಳು ಭಾಗಿಯಾಗಿದ್ದಾರೆನ್ನುವ ಮಾತು ಕೇಳಿಬಂದಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಇದೀಗ ಪ್ರಭಾವಿ ರಾಜಕಾರಣಿ ಮಾಜಿ ಶಾಸಕ ಆರ್.ವಿ.ದೇವರಾಜ್ ಅವರ ಪುತ್ರ ಬಿಬಿಎಂಪಿ ಕಾರ್ಪೋರೇಟರ್ ಆರ್.ವಿ.ಯುವರಾಜ್ ಹೆಸರು ಡ್ರಗ್ಸ್ ಮಾಫಿಯಾದಲ್ಲಿ ತಳುಕು ಹಾಕಿದೆ. ಹೀಗಾಗಿ ಆರ್.ವಿ.ಯುವರಾಜ್ ಗೆ ಸಿಸಿಬಿ ನೋಟಿಸ್ ಜಾರಿ ಮಾಡಿದ್ದು


ಕನ್ನಡ ರಿಯಾಲಿಟಿ ಶೋಗಳಲ್ಲಿ ನಿರೂಪಕನಾಗಿದ್ದ ನಟ ಸಂತೋಷ್ ಕುಮಾರ್ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ನೂರು ಜನ್ಮಕ್ಕೂ ಸಿನಿಮಾದಲ್ಲಿ ನಾಯಕ ನಟನಾಗಿ ಸಂತೋಷ್ ಕುಮಾರ್ ಅಭಿನಯಿಸಿದ್ದರು. ಇದೀಗ ನಟ ಸಂತೋಷ್ ಅವರಿಗೂ ಸಿಸಿಬಿ ನೋಟಿಸ್ ಜಾರಿ ಮಾಡಿದೆ.