ಬ್ರಹ್ಮಾವರ: ಮಟ್ಕಾ ದಂಧೆಕೋರನ ಮೇಲೆ ಪೊಲೀಸರ ದಾಳಿ
ಬ್ರಹ್ಮಾವರ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟವಾಡಿಸುತ್ತಾ ಜನರನ್ನು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬ್ರಹ್ಮಾವರ ಪೊಲೀಸರು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಬ್ರಹ್ಮಾವರ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟವಾಡಿಸುತ್ತಾ ಜನರನ್ನು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬ್ರಹ್ಮಾವರ ಪೊಲೀಸರು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮೇ 8ರಂದು ಸಂಜೆ ವಾರಂಬಳ್ಳಿ ಗ್ರಾಮದ ಬಸ್ ನಿಲ್ದಾಣದ ಸಮೀಪವಿರುವ ಕೀರ್ತಿ ಲಾಡ್ಜ್ ಪಕ್ಕದ ಓಣಿಯಲ್ಲಿ ಈ ಅಕ್ರಮ ದಂಧೆ ನಡೆಯುತ್ತಿತ್ತು. ಬೀಟ್ ಸಿಬ್ಬಂದಿಗಳಾದ ರಾಘವೇಂದ್ರ ಮತ್ತು ಪ್ರದೀಪ ಆಲಿಪುರ ಅವರು ನೀಡಿದ ಖಚಿತ ಮಾಹಿತಿಯ ಮೇರೆಗೆ, ಬ್ರಹ್ಮಾವರ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಜಯಕರ ಎ. ಮತ್ತು ತಂಡ ಸ್ಥಳಕ್ಕೆ ದಾಳಿ ನಡೆಸಿತು.
ಬಂಧಿತ ಆರೋಪಿಯನ್ನು ಚಂದ್ರಶೇಖರ ಎಂದು ಗುರುತಿಸಲಾಗಿದೆ. ಈತ ರಸ್ತೆಯಲ್ಲಿ ಹೋಗುವ ಜನರನ್ನು ಕೂಗಿ ಕರೆದು ಆಮಿಷ ಒಡ್ಡುತ್ತಿದ್ದನು. ಪೊಲೀಸರು ಮರೆಯಲ್ಲಿ ನಿಂತು ಈ ದೃಶ್ಯವನ್ನು ಖಚಿತಪಡಿಸಿಕೊಂಡು ಸಂಜೆ 6:35ಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ಅಲ್ಲಿದ್ದ ಜನ ಓಡಿ ಹೋಗಿದ್ದು, ಚಂದ್ರಶೇಖರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಮಲ್ಪೆಯ ಕಿಶೋರ್ಗೆ ಹಣ ಸಂದಾಯ?
ವಿಚಾರಣೆಯ ವೇಳೆ ಆರೋಪಿ ಸ್ಫೋಟಕ ಮಾಹಿತಿ ನೀಡಿದ್ದಾನೆ. ಸಾರ್ವಜನಿಕರಿಂದ ಸಂಗ್ರಹಿಸಿದ ಹಣದಲ್ಲಿ ಸ್ವಲ್ಪ ಕಮಿಷನ್ ಇಟ್ಟುಕೊಂಡು ಉಳಿದ ಮೊತ್ತವನ್ನು ಮಲ್ಪೆಯ ಕಿಶೋರ್ ಎಂಬುವರಿಗೆ ನೀಡುವುದಾಗಿ ಒಪ್ಪಿಕೊಂಡಿದ್ದಾನೆ. ಇದರಿಂದ ಈ ಮಟ್ಕಾ ಜಾಲ ಕೇವಲ ಬ್ರಹ್ಮಾವರಕ್ಕೆ ಸೀಮಿತವಾಗಿಲ್ಲ ಎಂಬುದು ಸ್ಪಷ್ಟವಾಗಿದೆ.
Also Read: ಕುಂದಾಪುರ: 50 ಪವನ್ ಚಿನ್ನ, 20 ಲಕ್ಷ ರೂ.ವರದಕ್ಷಿಣೆ ಕಿರುಕುಳ, ಪ್ರಕರಣ ದಾಖಲು
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ಈ ಜಾಲದ ಹಿಂದಿರುವ ಇತರ ವ್ಯಕ್ತಿಗಳ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ.
Brahmavar Police raid on Matka racketeer



