ರಾಜ್ಯಸಭೆಗೆ ಕರಾವಳಿಯಿಂದ ಎರಡು ಆಕಾಂಕ್ಷಿಗಳ ಹೆಸರು: ಮಂಗಳೂರಿನ ನವೀನ್ ಡಿಸೋಜ, ಕುಮುಟಾದ ನಿವೇದಿತಾ ಆಳ್ವ ನಡುವೆ ಪೈಪೋಟಿ!

ಈ ಬಾರಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರ ವಿಭಾಗದಲ್ಲಿ ಮಂಗಳೂರಿನ ಹಿರಿಯ ಮಾಜಿ ಕಾರ್ಪೊರೇಟರ್ ನವೀನ್ ಡಿಸೋಜ ಹಾಗೂ ಕುಮಟಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಿವೇದಿತಾ ಆಳ್ವ ನಡುವೆ ಪೈಪೋಟಿ ಇದೆ ಎನ್ನಲಾಗುತ್ತಿದೆ.

ಬೆಂಗಳೂರು: ರಾಜ್ಯಸಭೆಯ 3 ಕಾಂಗ್ರೆಸ್ ಸೀಟುಗಳ ಪೈಕಿ ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಮೀಸಲಾಗುವ ಸಂಭವ ಇದೆ ಎನ್ನಲಾಗುತ್ತಿದೆ. ಕಳೆದ ಬಾರಿ ಒಂದು ಸ್ಥಾನ ಮುಸ್ಲಿಮರಿಗೆ ಲಭ್ಯವಾಗಿತ್ತು.

ಈ ಬಾರಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರ ವಿಭಾಗದಲ್ಲಿ ಮಂಗಳೂರಿನ ಹಿರಿಯ ಮಾಜಿ ಕಾರ್ಪೊರೇಟರ್ ನವೀನ್ ಡಿಸೋಜ ಹಾಗೂ ಕುಮಟಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಿವೇದಿತಾ ಆಳ್ವ ನಡುವೆ ಪೈಪೋಟಿ ಇದೆ ಎನ್ನಲಾಗುತ್ತಿದೆ.

ಮೂರು ರಾಜ್ಯಸಭಾ ಸ್ಥಾನಗಳು ಮುಂದಿನ ತಿಂಗಳು ತೆರವಾಗಲಿದೆ. ಈ ಪೈಕಿ ಒಂದು ಸ್ಥಾನ ಮತ್ತೊಮ್ಮೆ ಕಾಂಗ್ರೆಸ್   ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಮ್ಮೆ ಸಿಗಲಿದೆ ಎಂಬುದು ಗ್ಯಾರಂಟಿಯಾಗಿದೆ. ಕಳೆದ ಬಾರಿ ಮುಸ್ಲಿಂ ಅಲ್ಪಸಂಖ್ಯಾತರಿಗೆ ಒಂದು ರಾಜ್ಯಸಭಾ ಸದಸ್ಯ ಸ್ಥಾನ ಒಲಿದು ಬಂದಿತ್ತು.

ಈ ಬಾರಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಒಲಿದು ಬರಲಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಕ್ರಿಶ್ಚಿಯನ್ ಸಂಖ್ಯೆಯಲ್ಲಿರುವ ದಕ್ಷಿಣ ಕನ್ನಡದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಈ ಹುದ್ದೆ ಸಿಗಬಹುದು ಎಂದು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ಈ ಪೈಕಿ ಕಾಂಗ್ರೆಸ್ ನ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿರುವ ಹಾಗೂ ಹಿರಿಯ ಕಾರ್ಪೊರೇಟರ್ ಆಗಿ ಸೇವೆ ಸಲ್ಲಿಸಿರುವ ನವೀನ್ ಡಿಸೋಜಾ ರವರ ಹೆಸರು ಮುಂಚೂಣಿಯಲ್ಲಿದೆ ಎಂದು ತಿಳಿದು ಬಂದಿದೆ.

ಈ ಬಾರಿಯ ಕೇರಳದ ಚುನಾವಣೆಯಲ್ಲಿ ಸಹ ನವೀನ್ ಡಿಸೋಜ ಕಾರ್ಯನಿರ್ವಹಣೆ ಪಕ್ಷದ ಹೈಕಮಾಂಡ್ ಗಮನ ಸೆಳೆದಿದೆ ಎನ್ನಲಾಗಿದೆ. ಈ ಮೊದಲು ತನಗೆ ನೀಡಿರುವ ಹಲವಾರು ಜವಾಬ್ದಾರಿಗಳನ್ನು ಎಲ್ಲಿಯೂ ಪ್ರಚಾರ ಬಯಸದೆ ಚಾಚು ತಪ್ಪದೇ ನಿರ್ವಹಿಸಿದ ಕೀರ್ತಿ ನವೀನ್ ಡಿಸೋಜ ರವರಿಗೆ ಇದೆ.

ಈ ಎಲ್ಲಾ ಅಂಶಗಳ ಆಧಾರದ ಮೇಲೆ ಈ ಬಾರಿ ಅವರನ್ನು ರಾಜ್ಯಸಭೆ ಕಳಿಸುವ ಬಗ್ಗೆ ಪಕ್ಷದ ಉನ್ನತ ಮೂಲಗಳು ಗಂಭೀರ ಚಿಂತನೆಯಲ್ಲಿದೆ ಎಂದು ತಿಳಿದು ಬಂದಿದೆ. ನಿವೇದಿತಾ ಆಳ್ವ ಈ ಮೊದಲು ವಿಧಾನಸಭಾ ಚುನಾವಣೆಯಲ್ಲಿ ಕುಮಟಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಅವರು ಹಿರಿಯ ಕಾಂಗ್ರೆಸ್ ರಾಜಕಾರಣಿ ಮಾರ್ಗರೇಟ್ ಅಳ್ವ ರವರ ಪುತ್ರರಾಗಿದ್ದಾರೆ.

ಈ ಮೊದಲು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಈ ಬಾರಿ ಯುವ ಮುಖಗಳಿಗೆ ಆದ್ಯತೆ ನೀಡಲಾಗುತ್ತಿದೆ ಎನ್ನಲಾಗುತ್ತಿದ್ದು, ಈ ನೆಲೆಯಲ್ಲಿ ನವೀನ್ ಡಿಸೋಜಾ ಹಾಗೂ ನಿವೇದಿತಾ ಆಳ್ವ ಹೆಸರು ಮುಂಚೂಣಿಗೆ ಬಂದಿದೆ.

ಇನ್ನೊಂದು ಸ್ಥಾನ ಯಾರ ಪಾಲಾಗಲಿದೆ ಎಂಬ ಕುತೂಹಲ ಮನೆ ಮಾಡಿದೆ. ಕಾಂಗ್ರೆಸ್ ತನ್ನ ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನು ಸುಲಭವಾಗಿ ಪಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಕಾಂಗ್ರೆಸ್ ಶಾಸಕರಗಳ ಬಲ 3 ರಾಜ್ಯಸಭೆಗೆ ಆಯ್ಕೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

ರಾಜ್ಯಸಭಾ ಚುನಾವಣೆ ಜೂನ್ 18ರಂದು ನಡೆಯಲಿದ್ದು, ಜೂನ್ ಎಂಟಕ್ಕೆ ನಾಮಿನೇಷನ್ ಸಲ್ಲಿಸಲು ಅಂತಿಮ ದಿನಾಂಕವಾಗಿದೆ. ಜೂನ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಈ ಬಗ್ಗೆ ಚುನಾವಣಾ ಆಯೋಗ ಮಾಹಿತಿ ನೀಡಿದೆ.

Anil Gundmi | ಅನಿಲ್‌ ಗುಂಡ್ಮಿ

ಅನಿಲ್‌ ಗುಂಡ್ಮಿ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡದಲ್ಲಿ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಬಿಎಸ್ಸಿ ಪದವೀಧರರಾಗಿದ್ದು, ಪ್ರಚಲಿತ ವಿದ್ಯಾಮಾನ, ಕ್ರೀಡೆ, ಸಿನಿಮಾ, ದೇಶ, ವಿದೇಶಗಳ ಸುದ್ದಿಗಳ ಬರವಣೆಗೆಯಲ್ಲಿ ಹಿಡಿತಹೊಂದಿದ್ದಾರೆ. ಕಳೆದ ಐದು ವರ್ಷಗಳಿಂದಲೂ ನ್ಯೂಸ್‌ ನೆಕ್ಸ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದಾರೆ.

Related Stories