ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ಡಿಕೆಶಿ ಅವಿರೋಧ ಆಯ್ಕೆ : ಸರ್ಕಾರ ರಚನೆಗೆ ರಾಜ್ಯಪಾಲರಿಂದ ಹಸಿರು ನಿಶಾನೆ

ರಾಜಕೀಯ ಪಡಸಾಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಅಧಿಕಾರ ಹಸ್ತಾಂತರ ಗದ್ದಲ ಅತ್ಯಂತ ನಿರಾಳವಾಗಿ ಮುಂದುವರಿಯುತ್ತಿದೆ. ನಿನ್ನೆ ನಡೆದ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಸರ್ವಾನುಮತದಿಂದ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ರಾಜಕೀಯ ಪಡಸಾಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಅಧಿಕಾರ ಹಸ್ತಾಂತರ ಗದ್ದಲ ಅತ್ಯಂತ ನಿರಾಳವಾಗಿ ಮುಂದುವರಿಯುತ್ತಿದೆ. ನಿನ್ನೆ ನಡೆದ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಸರ್ವಾನುಮತದಿಂದ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಿರುವ ಡಿ.ಕೆ ಶಿವಕುಮಾರ್​ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ಸರ್ಕಾರ ರಚನೆಗೆ ರಾಜ್ಯಪಾಲರು ಸಮ್ಮತಿ ಸೂಚಿಸಿದ್ದಾರೆ.

ಇನ್ನು ಲೋಕಭವನದ ಗಾಜಿನ ಮನೆಯಲ್ಲಿ ಜೂನ್​ 3ನೇ ತಾರೀಖು ಸಂಜೆ 4:05ಕ್ಕೆ ಡಿ.ಕೆ ಶಿವಕುಮಾರ್​ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ .ಈ ದಿನದಂದು 9 ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಸಚಿವರ ಪಟ್ಟಿಯನ್ನು ಫೈನಲ್​ ಮಾಡಲಾಗಿದ್ದು, ಸೋಮವಾರದಂದು ದೆಹಲಿಗೆ ಪ್ರಯಾಣಿಸಲಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್​ ಹೈಕಮಾಂಡ್​ನಿಂದ ಸಚಿವರ ಪಟ್ಟಿಗೆ ಅಧಿಕೃತ ಮುದ್ರೆ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

ನೂತನ ಸಚಿವರ ಪಟ್ಟಿಯಲ್ಲಿ ಸಿದ್ದು ಬಣ ಹಾಗೂ ಡಿಕೆಶಿ ಬಣದ ನಾಯಕರಿಗೆ ಸಮಾನ ಆದ್ಯತೆ ನೀಡಲಾಗಿದೆ ಎನ್ನಲಾಗಿದೆ. ಎಲ್ಲಿಯೂ ಸಂಪುಟದ ನೂತನ ನಾಯಕರ ಹೆಸರನ್ನು ಬಹಿರಂಗಪಡಿಸಿದ ಡಿಕೆ ಶಿವಕುಮಾರ್​ ಬಳಿ ತೆರಳುತ್ತಿರುವ ಸಚಿವಾಕಾಂಕ್ಷಿಗಳು, ಮಂತ್ರಿ ಸ್ಥಾನಕ್ಕಾಗಿ ತಮ್ಮ ಲಾಬಿ ಮುಂದುವರಿಸಿದ್ದಾರೆ.

Also Read: ಸೋಮವಾರ ಡಿ. ಕೆ. ಶಿವಕುಮಾರ್ ಜೊತೆ ಈ 10 ಶಾಸಕರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ

ಇನ್ನು ಇದು ಮಾತ್ರವಲ್ಲದೇ ಡಿ.ಕೆ ಶಿವಕುಮಾರ್​ ರಾಜ್ಯದ ಮುಖ್ಯಮಂತ್ರಿಗಳಾಗುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಹುದ್ದೆ ರಾಜೀನಾಮೆ ನೀಡಲಿದ್ದು, ಈ ಹುದ್ದೆಗಾಗಿಯೂ ಪೈಪೋಟಿ ಆರಂಭವಾಗಿದೆ ಎನ್ನಲಾಗಿದೆ. ಈ ಹುದ್ದೆಯಲ್ಲಿ ಸತೀಶ್​ ಜಾರಕಿಹೊಳಿ, ಡಾ.ಜಿ ಪರಮೇಶ್ವರ್​ ಹಾಗೂ ಬಿ.ಕೆ ಹರಿಪ್ರಸಾದ್​ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿದ್ದು, ಹೈಕಮಾಂಡ್​ ಯಾರಿಗೆ ಮಣೆ ಹಾಕಲಿದೆ ಅನ್ನೋದನ್ನ ಕಾದು ನೋಡ್ಬೇಕಿದೆ.

DKS elected unopposed as new leader of the legislature party Governor gives green signal to form government

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories