ಸಿಎಂ ಸ್ಥಾನ ತ್ಯಜಿಸಿದ ಸಿದ್ದರಾಮಯ್ಯಗೆ ಬಂಪರ್ ಗಿಫ್ಟ್ : ಕಾಂಗ್ರೆಸ್ ಹೈಕಮಾಂಡ್ನಿಂದ ಅತ್ಯುನ್ನತ ಜವಾಬ್ದಾರಿ
2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿಯೇ ದ್ವಿತೀಯಾರ್ಧದಲ್ಲಿ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ತ್ಯಜಿಸಬೇಕು ಎನ್ನುವುದು ನಿಶ್ಚಿತವಾಗಿತ್ತು. ಅಂತೆಯೇ ಮೂರು ವರ್ಷಗಳ ಬಳಿಕ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಸಿಎಂ ಸ್ಥಾನ ಪದತ್ಯಾಗ ಮಾಡಿರುವ ಸಿದ್ದರಾಮಯ್ಯರಿಗೆ ಕಾಂಗ್ರೆಸ್ ಹೈಕಮಾಂಡ್ ಆಫರ್ಗಳ ಮೇಲೆ ಆಫರ್ ನೀಡುತ್ತಿದೆ.
2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿಯೇ ದ್ವಿತೀಯಾರ್ಧದಲ್ಲಿ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ತ್ಯಜಿಸಬೇಕು ಎನ್ನುವುದು ನಿಶ್ಚಿತವಾಗಿತ್ತು. ಅಂತೆಯೇ ಮೂರು ವರ್ಷಗಳ ಬಳಿಕ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಸಿಎಂ ಸ್ಥಾನ ಪದತ್ಯಾಗ ಮಾಡಿರುವ ಸಿದ್ದರಾಮಯ್ಯರಿಗೆ ಕಾಂಗ್ರೆಸ್ ಹೈಕಮಾಂಡ್ ಆಫರ್ಗಳ ಮೇಲೆ ಆಫರ್ ನೀಡುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಈ ಹಿಂದೆ ನೀಡಿರುವ ರಾಜ್ಯಸಭಾ ಸದಸ್ಯ ಸ್ಥಾನವನ್ನು ನಿರಾಕರಿಸಿದ ಸಿದ್ದರಾಮಯ್ಯಗೆ ಇದೀಗ ರಾಷ್ಟ್ರಮಟ್ಟದ ಹುದ್ದೆಯೊಂದನ್ನು ಹೈಕಮಾಂಡ್ ನೀಡಿದೆ.
ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಕೈಗೊಳ್ಳುವ ಕಾಂಗ್ರೆಸ್ನ ಅತ್ಯುನ್ನತ ಅಂಗವಾದ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಿಡಬ್ಲುಸಿಯ ಸದಸ್ಯರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸಿದ್ದರಾಮಯ್ಯರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಸಿದ್ದರಾಮಯ್ಯ ಇನ್ಮುಂದೆ ಕಾಂಗ್ರೆಸ್ ಹೈಕಮಾಂಡ್ ದರ್ಜೆಗೆ ಏರಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಕೆ.ಸಿ ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯ ಮೇರೆಗೆ ಸಿದ್ದರಾಮಯ್ಯರಿಗೆ ಸಿಡಬ್ಲುಸಿ ಸದಸ್ಯ ಸ್ಥಾನ ನೀಡುತ್ತಿರುವುದಾಗಿ ದೆಹಲಿ ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
Also Read: ಇಂದಿನಿಂದ ರಾಜ್ಯದಲ್ಲಿ ಡಿ.ಕೆ ಯುಗಾರಂಭ : ಸಂಜೆ 4:05ಕ್ಕೆ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ
ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ಅತ್ಯುನ್ನತ ನಿರ್ಧಾರಗಳು, ರಾಷ್ಟ್ರ ರಾಜಕಾರಣ , ಮೈತ್ರಿ ಕುರಿತ ನಿರ್ಣಯಗಳು ಸೇರಿದಂತೆ ಪಕ್ಷಕ್ಕೆ ಸಂಬಂಧಿಸಿದ ಅಂತಿಮ ನಿರ್ಧಾರಗಳನ್ನು ಕೈಗೊಳ್ಳುವ ಸೂಪರ್ ಪವರ್ ಹೊಂದಿರುವ ಕಮಿಟಿ ಇದಾಗಿದ್ದು, ಇದೀಗ ಈ ಕಮಿಟಿಯಲ್ಲಿ ಸಿದ್ದರಾಮಯ್ಯ ಕೂಡ ಸ್ಥಾನ ಪಡೆದಿದೆ. ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ನಾಯಕ ಎನಿಸಿರುವ ಸಿದ್ದರಾಮಯ್ಯರ ವರ್ಚಸ್ಸನ್ನು ರಾಷ್ಟ್ರಮಟ್ಟದಲ್ಲಿ ಬಳಸಿಕೊಳ್ಳುವುದು ಕಾಂಗ್ರೆಸ್ನ ಲೆಕ್ಕಾಚಾರ ಕೂಡ ಆಗಿದೆ.
Bumper gift for Siddaramaiah who resigned as CM Highest responsibility from Congress high command



