ಬಿಜೆಪಿ ರಾಜ್ಯಸಭೆ, ವಿಧಾನಪರಿಷತ್ ಟಿಕೆಟ್ ಘೋಷಣೆ: ಸುಮಲತಾ, ದೇವೇಗೌಡರಿಗೆ ನಿರಾಸೆ; ಅಚ್ಚರಿಯ ಅಭ್ಯರ್ಥಿಗಳಿಗೆ ಮಣೆ!
ಅಚ್ಚರಿಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ತಡರಾತ್ರಿ ರಾಜ್ಯಸಭೆ ಹಾಗೂ ರಾಜ್ಯ ವಿಧಾನಪರಿಷತ್ ಚುನಾವಣೆಗೆ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ

ಅಚ್ಚರಿಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ತಡರಾತ್ರಿ ರಾಜ್ಯಸಭೆ ಹಾಗೂ ರಾಜ್ಯ ವಿಧಾನಪರಿಷತ್ ಚುನಾವಣೆಗೆ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ರಾಜ್ಯಸಭಾ ಚುನಾವಣೆಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಟಿಕೆಟ್ ಕೈತಪ್ಪಿದೆ. ಹಾಗೂ ಸುಮಲತಾ ಅಂಬರೀಶ್ ಅವರಿಗೂ ರಾಜ್ಯಸಭಾ ಟಿಕೆಟ್ ಮಿಸ್ ಆಗಿದೆ.
ಬಿಜೆಪಿ – ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ರಾಜ್ಯಸಭೆಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಪರಿಗಣಿಸುವಂತೆ ಜೆಡಿಎಸ್ ಮನವಿ ಮಾಡಿತ್ತು. ಇತ್ತ ಬಿಜೆಪಿ ರಾಜ್ಯ ಘಟಕದಿಂದ ರಾಜ್ಯಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಶ್ರ ಹೆಸರನ್ನು ಶಿಫಾರಸ್ಸು ಮಾಡಲಾಗಿತ್ತು. ಹಾಗೂ ಪರಿಷತ್ ಚುನಾವಣೆಗೆ ರಘು ಕೌಟಿಲ್ಯ, ಪ್ರಮೋದ್ ಮದ್ವರಾಜ್, ನಳೀನ್ ಕುಮಾರ್ ಕಟೀಲ್, ಲಿಂಗರಾಜ ಪಾಟೀಲ, ಮಂಜುಳಾ ಹಾಗೂ ಶರಣು ತಳ್ಳಿಕೇರಿ ಎಂಬವರ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿತ್ತು.
ಇದನ್ನೂ ಓದಿ : ತಮಿಳುನಾಡಲ್ಲಿ ಅಣ್ಣಾಮಲೈ ಚರಿತ್ರೆ : ಒಂದೇ ದಿನ 14 ಲಕ್ಷ ಜನ ಪಕ್ಷ ಸೇರ್ಪಡೆ
ಆದರೆ ತಡರಾತ್ರಿ ಬಿಜೆಪಿ ಪ್ರಕಟಿಸಿರುವ ಪಟ್ಟಿಯಲ್ಲಿ ರಾಜ್ಯಸಭೆಗೆ ಡಾ.ಎಂ. ನಾಗರಾಜ್, ವಿಧಾನಪರಿಷತ್ಗೆ ಲಿಂಗರಾಜ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರನ್ನು ಕಣಕ್ಕಿಳಿಸಲಾಗಿದೆ. ಇನ್ನು ವಿಧಾನಪರಿಷತ್ ಚುನಾವಣೆಗೆ ಬಿಜೆಪಿ – ಜೆಡಿಎಸ್ ಮೈತ್ರಿಯಿಂದ 3ನೇ ಅಭ್ಯರ್ಥಿಯಾಗಿ ಗೋವಿಂದ ರಾಜು ಹೆಸರನ್ನು ಘೋಷಣೆ ಮಾಡಿದೆ .



