ಗೃಹಜ್ಯೋತಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಕೆಗೆ ಅವಕಾಶ : ಸಿಎಂ ಡಿ.ಕೆ. ಶಿವಕುಮಾರ್​ ಮಹತ್ವದ ಘೋಷಣೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ಸೋರಿಕೆ ತಡೆಗೆ ಸಿಎಂ ಡಿ.ಕೆ ಶಿವಕುಮಾರ್​ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ಸೋರಿಕೆ ತಡೆಗೆ ಸಿಎಂ ಡಿ.ಕೆ ಶಿವಕುಮಾರ್​ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಈ ಯೋಜನೆಯ ದುರ್ಬಳಕೆ ಮಾಡಿಕೊಳ್ಳುತ್ತಿರುವವರಿಗೆ ಅಂಕುಶ ಹಾಕಲು ಹಾಗೂ ನೈಜ ಫಲಾನುಭವಿಗಳಿಗೆ ಮಾತ್ರ ಈ ಯೋಜನೆ ದೊರಕುವಂತೆ ಮಾಡಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಹೊಸ ಮಾಹಿತಿಯನ್ನು ನೀಡಿದ್ದಾರೆ. ಇನ್ಮುಂದೆ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದ್ದು, ಸರ್ಕಾರವೇ ನೇರವಾಗಿ ಪ್ರತಿ ಮನೆಗೂ ಭೇಟಿ ನೀಡಿ ಗೃಹಜ್ಯೋತಿ ಯೋಜನೆಯ ಮರುನೋಂದಣಿಗೆ ಅರ್ಜಿ ಪ್ರತಿ ನೀಡಲಿದೆ.

ಬೆಂಗಳೂರಿನಲ್ಲಿ ನಡೆದ ಇಂಧನ ಇಲಾಖೆಯ ಸಮಾರಂಭದಲ್ಲಿ ಈ ವಿಚಾರವಾಗಿ ಮಾತನಾಡಿದ ಸಿಎಂ ಡಿ.ಕೆ ಶಿವಕುಮಾರ್​, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ದುರ್ಬಳಕೆಯನ್ನು ತಡೆಯಲು ಅನೇಕ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಗೃಹಜ್ಯೋತಿ ಯೋಜನೆಯ ಲಾಭವನ್ನು ಒಂದೂವರೆ ಕೋಟಿಗೂ ಅಧಿಕ ಜನರು ಪಡೆದುಕೊಳ್ಳುತ್ತಿದ್ದಾರೆ. ಆದರೆ ನೈಜ ಫಲಾನುಭವಿಗಳಿಗೆ ಮಾತ್ರ ಈ ಯೋಜನೆಯ ಲಾಭ ದೊರಕುವಂತೆ ಮಾಡುವುದು ನಮ್ಮ ಉದ್ದೇಶ. ಹೀಗಾಗಿ ಮರುಅರ್ಜಿ ಪ್ರಕ್ರಿಯೆಗೆ ಚಾಲನೆ ನೀಡುವ ಮೂಲಕ ಗೃಹಜ್ಯೋತಿ ಯೋಜನೆಗೆ ಮೇಜರ್​ ಸರ್ಜರಿ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

Also Read: ಇಂದಿನಿಂದ ಶುರು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : ಫಾರ್ಮ್​ ಭರ್ತಿ ಮಾಡದ ಜನತೆಯ ಮತದಾನದ ಹಕ್ಕಿಗೆ ಕುತ್ತು

ಮತದಾರರ ಪಟ್ಟಿಯಲ್ಲಿ ಸ್ಥಾನ ಹೊಂದಿರುವವರಿಗೆ ಮಾತ್ರ ಗೃಹಜ್ಯೋತಿ ಯೋಜನೆಯ ಲಾಭ ದೊರಕಲಿದೆ. ಇಂಧನ ಇಲಾಖೆಯ ಸಿಬ್ಬಂದಿ ಪ್ರತಿ ಮನೆಗೂ ಭೇಟಿ ನೀಡಿ ಗೃಹಜ್ಯೋತಿ ಯೋಜನೆಯ ಅರ್ಜಿ ನೀಡಲಿದ್ದಾರೆ. ಪ್ರಸ್ತುತ ಇಂದಿನಿಂದ ಆರಂಭಗೊಂಡಿರುವ ಎಸ್​ಐಆರ್​ ಪ್ರಕ್ರಿಯೆಯಲ್ಲಿ ಭಾಗವಹಿಸಿದವರಿಗೆ ಮಾತ್ರ ಭವಿಷ್ಯದಲ್ಲಿ ಮತದಾರರ ಪಟ್ಟಿಯಲ್ಲಿ ಸ್ಥಾನ ದೊರಕಲಿದೆ. ಮತದಾರರ ಪಟ್ಟಿಯಲ್ಲಿ ಸ್ಥಾನ ಇರುವವರು ಮಾತ್ರ ಗೃಹಜ್ಯೋತಿಯ ನೂತನ ಅರ್ಜಿ ಭರ್ತಿ ಮಾಡುವ ಅರ್ಹತೆ ಹೊಂದಿರುತ್ತಾರೆ. ಹೀಗಾಗಿ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ರಾಜ್ಯದ ಜನತೆ ಈ ಎರಡೂ ಪ್ರಕ್ರಿಯೆಗಳಲ್ಲಿ ಭಾಗವಹಿಸುವುದು ಕಡ್ಡಾಯವಾಗಿರಲಿದೆ.

Opportunity to apply for Gruha Jyothi scheme again CM DK Shivakumar makes significant announcement

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »