ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕಳೆದೆರಡು ದಿನಗಳ ಹಿಂದೆ ನಡೆದಿದ್ದ ಮಗುವಿನ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆರಡು ದಿನಗಳ ಹಿಂದೆ ರಾತ್ರಿಯ ವೇಳೆಯಲ್ಲಿ 4 ವರ್ಷ ಬಾಲಕಿಯನ್ನು ಚೆನ್ನೈ ಮೂಲದ ದಿನೇಶ್ ಎಂಬಾತ ಅಪಹರಿಸಿ ಅತ್ಯಾಚಾರವೆಸಗಿದ್ದ, ಇದರಿಂದಾಗಿ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಪ್ರಕರಣದ ಜಾಡು ಹಿಡಿದ ಶ್ರೀರಾಂಪುರ ಠಾಣೆಯ ಪೊಲೀಸರು ಆರೋಪಿಯ ಜಾಡು ಬೇಧಿಸಿದ್ದಾರೆ. ಆರೋಪಿಯನ್ನು ಬಂಧಿಸಲು ತೆರಳಿದ ವೇಳೆಯಲ್ಲಿ ಆರೋಪಿ ದಿನೇಶ್ ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯ ಮೇಲೆ ಗುಂಡು ಹಾರಿಸಿ ದಿನೇಶ್ ನನ್ನು ಬಂಧಿಸಿದ್ದಾರೆ.