ಮಂಗಳವಾರ, ಮೇ 13, 2025
HomeBreakingಕಾನೂನು ವಿಶ್ವವಿದ್ಯಾಲಯ ನಿವೃತ್ತ ಪ್ರಾಂಶುಪಾಲರ ಕಗ್ಗೊಲೆ

ಕಾನೂನು ವಿಶ್ವವಿದ್ಯಾಲಯ ನಿವೃತ್ತ ಪ್ರಾಂಶುಪಾಲರ ಕಗ್ಗೊಲೆ

- Advertisement -

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ನಿವೃತ್ತ ಪ್ರಾಂಶುಪಾಲರೋರ್ವರನ್ನು ಮನೆಯಲ್ಲಿಯೇ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಎಸ್.ಎಸ್.ಮುಶಣ್ಣನವರ ಎಂಬವರೇ ಕೊಲೆಯಾದ ನಿವೃತ್ತ ಪ್ರಾಂಶುಪಾಲರಾಗಿದ್ದಾರೆ.

ಹುಬ್ಬಳ್ಳಿಯ ಲಿಂಗರಾಜನಗರದ ಕಟ್ಟಿ ಮಂಗಳಮ್ಮ ದೇವಸ್ಥಾನ ಬಳಿಯಿರುವ ನಿವಾಸದಲ್ಲಿ ಎಸ್.ಎಸ್.ಮುಶಣ್ಣನವರ ವಾಸವಾಗಿದ್ದರು. ಮನೆಗೆ ಬಂದ ದುಷ್ಕರ್ಮಿಗಳು ಹತ್ಯೆಯನ್ನು ಮಾಡಿ ಪರಾರಿಯಾಗಿದ್ದಾರೆ. ಕೊಲೆ ನಡೆದಿರುವ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ತನಿಖೆಯನ್ನು ನಡೆಸುತ್ತಿದ್ದಾರೆ.

ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಕಾರ್ಯವನ್ನು ನಡೆಸಲಾಗುತ್ತಿದೆ. ಕೌಟುಂಬಿಕ ಕಾರಣದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗುತ್ತಿದ್ದು, ಪ್ರಾಂಶುಪಾಲರಾದ ಮುಶಣ್ಣನವರ ಅಳಿಯೇ ಈ ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗುತ್ತಿದೆ. ಕೊಲೆ ಪ್ರಕರಣವನ್ನು ಬೇಧಿಸಲು ಡಿಸಿಪಿ ನೇತೃತ್ವದಲ್ಲಿ ವಿಶೇಷ ಪೊಲೀಸರ ತಂಡವನ್ನು ರಚಿಸಲಾಗಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular