ಮಧ್ಯಪ್ರದೇಶ : ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ 30 ಅಡಿ ಆಳದ ಕಾಲುವೆಗೆ ಉರುಳಿ 32 ಮಂದಿ ಸಾವನ್ನಪ್ಪಿರುವ ಘಟನೆ ಮದ್ಯಪ್ರದೇಶದ ಸಿಂಧಿ ಜಿಲ್ಲೆಯಲ್ಲಿ ನಡೆದಿದೆ.
ಇಂದು ಬೆಳಗ್ಗೆ 8.30ರ ಸುಮಾರಿಗೆ 54 ಮಂದಿಯನ್ನು ಹೊತ್ತಿದ್ದ ಬಸ್ ಸಾತ್ನಾ ಕಡೆಗೆ ಚಲಿಸುತ್ತಿತ್ತು. ಈ ವೇಳೆಯಲ್ಲಿ ಬಸ್ ಕಾಲುವಿಗೆ ಉರುಳಿಬಿದ್ದಿದೆ. ಬಸ್ಸಿನಲ್ಲಿದ್ದ 7 ಮಂದಿಯನ್ನು ರಕ್ಷಿಸಲಾಗಿದ್ದು, 30 ಮಂದಿ ಸಾವನ್ನಪ್ಪಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯವನ್ನು ನಡೆಸಲಾಗುತ್ತಿದೆ.
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್ ತೀವ್ರ ವಿಷಾಧ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ. ಅಗ್ನಿಶಾಮಕದಳದ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದು, ಸ್ಥಳೀಯ ಸಹಕಾರದಿಂದ ನೀರುಪಾಲದವರ ಪತ್ತೆ ಕಾರ್ಯ ನಡೆಸಲಾಗುತ್ತಿದೆ.
Comments are closed.