ಭಾನುವಾರ, ಏಪ್ರಿಲ್ 27, 2025
Homehoroscopeನಿತ್ಯಭವಿಷ್ಯ : ಹೇಗಿದೆ ಇಂದಿನ ನಿಮ್ಮ ಜಾತಕಫಲ

ನಿತ್ಯಭವಿಷ್ಯ : ಹೇಗಿದೆ ಇಂದಿನ ನಿಮ್ಮ ಜಾತಕಫಲ

- Advertisement -

ಮೇಷರಾಶಿ
ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗತಿಗಳು ಅನುಕೂಲಕರವಾಗಿ ಮುಂದವರಿ ಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.
ಅದೃಷ್ಟರಾಶಿ : 5

ವೃಷಭರಾಶಿ
ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.
ಅದೃಷ್ಟರಾಶಿ : 7

ಮಿಥುನರಾಶಿ
ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು.
ಅದೃಷ್ಟರಾಶಿ : 1

ಕರ್ಕಾಟಕರಾಶಿ
ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು.
ಅದೃಷ್ಟರಾಶಿ : 8

ಸಿಂಹರಾಶಿ
ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು.
ಅದೃಷ್ಟರಾಶಿ : 4

ಕನ್ಯಾರಾಶಿ
ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆ ವಹಿಸಿರಿ.
ಅದೃಷ್ಟರಾಶಿ : 5

ತುಲಾರಾಶಿ
ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ.
ಅದೃಷ್ಟರಾಶಿ : 2

ವೃಶ್ಚಿಕರಾಶಿ
ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು.
ಅದೃಷ್ಟರಾಶಿ : 6

ಧನುರಾಶಿ
ಅನಿರೀಕ್ಷಿತ ಸಂಚಾರ ಒದಗಿ ಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು.
ಅದೃಷ್ಟರಾಶಿ :3

ಮಕರರಾಶಿ
ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆ ನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮರ್ಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ.
ಅದೃಷ್ಟರಾಶಿ : 6

ಕುಂಭರಾಶಿ
ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು.
ಅದೃಷ್ಟರಾಶಿ : 8

ಮೀನರಾಶಿ
ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂಡದ ಜಾಯಮಾನ ಇರುವುದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವುದು.
ಅದೃಷ್ಟರಾಶಿ : 3

ಶುಭಂಭವತು
ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular