ಭಾನುವಾರ, ಏಪ್ರಿಲ್ 27, 2025
Homepoliticsನಾಳೆಯಿಂದ ಲಾಲ್ ಭಾಗ್ ನಲ್ಲಿ ವಿವೇಕ ಪುಷ್ಪ ಪ್ರದರ್ಶನ

ನಾಳೆಯಿಂದ ಲಾಲ್ ಭಾಗ್ ನಲ್ಲಿ ವಿವೇಕ ಪುಷ್ಪ ಪ್ರದರ್ಶನ

- Advertisement -

ಬೆಂಗಳೂರು : ಸ್ವಾಮಿ ವಿವೇಕಾನಂದರ 157ನೇ ಜನ್ಮದಿನಾಚರಣೆಯ ಸ್ಮರಣಾರ್ಥ ಈ ಬಾರಿ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ವಿವೇಕ ಪುಷ್ಪ ಪ್ರದರ್ಶನ-2020 ಆಯೋಜಿಸಲಾಗಿದೆ. ವರ್ಷಂಪ್ರತಿ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಹಿಸಲಾಗುತ್ತಿದೆ. ಆದರೆ ಈ ಬಾರಿ ವಿವೇಕಾನಂದ ನೆನಪಿನಲ್ಲಿ ವಿವೇಕ ಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ.

ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾಸಂಘದ ವತಿಯಿಂದ ಆಯೋಜಿಸಲಾಗುತ್ತಿರೋ ಪುಷ್ಪ ಪ್ರದರ್ಶನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜನವರಿ 17ರಂದು ಮಧ್ಯಾಹ್ನ 12 ಗಂಟೆಗೆ ಉದ್ಘಾಟಿಸಲಿದ್ದಾರೆ.

. ಬಸವನಗುಡಿ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಶ್ರೀ ಹರ್ಷಾನಂದ ಅವರು, ತೋಟಗಾರಿಕೆ ಇಲಾಖೆ ಸಚಿವ ವಿ.ಸೋಮಣ್ಣ ಮುಂತಾದವರು ಪಾಲ್ಗೊಳ್ಳಲಿದ್ದಾರೆ. ಚಿಕ್ಕಪೇಟೆ ಶಾಸಕ ಉದಯ್ ಬಿ.ಗರುಡಾಚಾರ್ ಅಧ್ಯಕ್ಷತೆ ವಹಿಸಲಿದ್ದು, ಸಂಸದ ತೇಜಸ್ವಿ ಸೂರ್ಯ, ಮೇಯರ್ ಎಂ.ಗೌತಮ್‍ಕುಮಾರ್, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಬಿಬಿಎಂಪಿ ಸದಸ್ಯೆ ವಾಣಿ ವಿ.ರಾವ್, ಅಪರ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಮತ್ತಿತರ ಗಣ್ಯರು ಭಾಗಿಯಾಗಲಿದ್ದಾರೆ ತೋಟಗಾರಿಕೆ ಇಲಾಖೆ ನಿರ್ದೇಶಕ ಬಿ.ವೆಂಕಟೇಶ್ ತಿಳಿಸಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular