ಶನಿವಾರ, ಮೇ 3, 2025
HomeBreakingಖ್ಯಾತ ನಿಘಂಟು ತಜ್ಞ ಶತಾಯುಷಿ ಪ್ರೊ.ಜಿ. ವೆಂಕಟಸುಬ್ಬಯ್ಯ ಇನ್ನಿಲ್ಲ

ಖ್ಯಾತ ನಿಘಂಟು ತಜ್ಞ ಶತಾಯುಷಿ ಪ್ರೊ.ಜಿ. ವೆಂಕಟಸುಬ್ಬಯ್ಯ ಇನ್ನಿಲ್ಲ

- Advertisement -

ಬೆಂಗಳೂರು : ಖ್ಯಾತ ನಿಘಂಟು ತಜ್ಞ ಶತಾಯುಷಿ ಪ್ರೊ.ಜಿ ವೆಂಕಟ ಸುಬ್ಬಯ್ಯ (108‌ ವರ್ಷ) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಕಳೆದ‌ ಹಲವು ಸಮಯಗಳಿಂದಲೂ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ವೆಂಕಟಸುಬ್ಬಯ್ಯ ಅವರು, ಕಳೆದೊಂದು ವಾರದ ಹಿಂದೆ ಯಷ್ಟೇ ಮೂತ್ರ ನಾಳದ ಸೋಂಕಿಗೆ ಒಳಗಾಗಿದ್ದರು. ಆರೋಗ್ಯ ದಲ್ಲಿ ಚೇತರಿಕೆಯನ್ನು ಕಂಡಿದ್ದರು. ಆದರೆ ರಾತ್ರಿ ವಯೋ ಸಹಜವಾಗಿ ಅಸ್ವಸ್ಥರಾಗಿ ಭಾನುವಾರ ತಡರಾತ್ರಿ 1.15ಕ್ಕೆ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

1913ರ ಆಗಸ್ಟ್ 13ರಂದು ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣದ ಗಂಜಾಂನಲ್ಲಿ ಜನಿಸಿದ ವೆಂಕಟ ವೆಂಕಟ ಸುಬ್ಬಯ್ಯ ಅವರು ಭಾಷಾ ತಜ್ಞ, ಸಂಶೋಧಕ, ಬರಹಗಾರ, ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ 2011ರ ಫೆಬ್ರುವರಿ 4ರಿಂದ 6ರವರೆಗೆ ನಡೆದ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,  ಪಂಪ ಪ್ರಶಸ್ತಿ, ನಾಡೋಜ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಪ್ರೊ. ಜಿ. ವೆಂಕಟ ಸುಬ್ಬಯ್ಯ ಅವರ ಅಂತ್ಯಕ್ರಿಯೆ ಚಾಮರಾಜ ಪೇಟೆಯ ಚಿತಾಗಾರದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನಡೆಯಲಿದ್ದು, ಜಯನಗರ 7ನೇ ಬ್ಲಾಕ್‌ನ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular