ಉಡುಪಿ : ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರ ವಿರುದ್ದ ಕಠಿಣ ಕ್ರಮಕೈಗೊಳ್ಳುವ ಉಡುಪಿ ಡಿಸಿ ಜಗದೀಶ್ ಅವರೇ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಮೆಹಂದಿ ಕಾರ್ಯಕ್ರಮದಲ್ಲಿ ಮಾಸ್ಕ್ ಇಲ್ಲದೇ ಡಿಸಿ ಅವರು ಪಾಲ್ಗೊಂಡಿರೋದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಪೊಲೀಸ್ ಅಧಿಕಾರಿಯೋರ್ವರ ಮಗಳ ಮದುವೆಯ ಮೆಹಂದಿ ಕಾರ್ಯದಲ್ಲಿ ಜಿಲ್ಲಾಧಿಕಾರಿಗಳು ಮಾಸ್ಕ್ ಇಲ್ಲದೇ ಪಾಲ್ಗೊಂಡಿದ್ದಾರೆ. ಅಷ್ಟೇ ಅಲ್ಲ ಸ್ಟೇಜಿನಲ್ಲಿ ಇದ್ದವರೂ ಕೂಡ ಮಾಸ್ಕ್ ಧರಿಸಿಲ್ಲ. ಮಾಸ್ಕ್ ಧರಿಸದ ಜನಸಾಮಾನ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವ ಜಿಲ್ಲಾಧಿಕಾರಿಗಳೇ ಹೀಗೆ ಮಾಡಿರೋದು ಎಷ್ಟು ಸರಿ ಅಂತಾ ಜನತೆ ಪ್ರಶ್ನಿಸುತ್ತಿದ್ದಾರೆ.

ಕಳೆದೊಂದು ವಾರದ ಹಿಂದೆಯಷ್ಟೇ ಬಸ್ಸಿನಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಗಳನ್ನು ಕೆಳಗೆ ಇಳಿಸಿ ವಿವಾದಕ್ಕೆ ಸಿಲುಕಿದ್ದರು.

ಇದೀಗ ತಾವೇ ನಿಯಮ ಉಲ್ಲಂಘಿಸಿರೋದು ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಜಿಲ್ಲಾಧಿಕಾರಿಗಳ ಕ್ರಮವನ್ನು ಸಾಮಾಜಿಕ ಜಾಲತಾಣದಲ್ಲಿ ಜನರು ಪ್ರಶ್ನಿಸುತ್ತಿದ್ದಾರೆ.
ಇನ್ನು ಮೆಹಂದಿ ಕಾರ್ಯಕ್ರಮದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಸಂಪುರ್ಣವಾಗಿ ಉಲ್ಲಂಘಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವರು ಮಾಸ್ಕ್ ಧರಿಸಿಲ್ಲ,ಸಾಮಾಜಿಕ ಅಂತರ ಪಾಲನೆ ಮಾಡಿಲ್ಲವೆಂಬ ಆರೋಪ ಕೇಳಿಬಂದಿದೆ.
https://youtube.com/shorts/iq32XD49VE8?feature=share
