ಮಂಗಳವಾರ, ಏಪ್ರಿಲ್ 29, 2025
HomeBreakingವಂಚಕ ಮೆಹುಲ್ ಚೋಕ್ಸಿಗೆ ಜಾಮೀನು ನಿರಾಕರಣೆ : ಅಪಹರಣ‌ ಮಾಡಲಾಗಿತ್ತು ಎಂದ ವಕೀಲರು..!!!

ವಂಚಕ ಮೆಹುಲ್ ಚೋಕ್ಸಿಗೆ ಜಾಮೀನು ನಿರಾಕರಣೆ : ಅಪಹರಣ‌ ಮಾಡಲಾಗಿತ್ತು ಎಂದ ವಕೀಲರು..!!!

- Advertisement -

ನವದೆಹಲಿ : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂಪಾಯಿ‌‌‌ ವಂಚನೆ ಪ್ರಕರಣದ‌ ಆರೋಪಿ ಉದ್ಯಮಿ ಮೆಹುಲ್ ಚೋಕ್ಸಿಗೆ ಜಾಮೀನು ನೀಡಲು ಡೊಮೆನಿಕಾ ನ್ಯಾಯಾಲಯ ನಿರಾಕರಿಸಿದೆ.

ಕಳೆದ ಮೇ 23 ರಂದು ಊಟಕ್ಕೆಂದು ಹೊರಟಿದ್ದ ಮೆಹುಲ್ ಚೋಕ್ಸಿ ಆಂಟಿಗುವಾದಿಂದ ನಾಪತ್ತೆಯಾಗಿ ದ್ದರು. ಬಳಿಕ ಆಂಟಿಗುವಾ ಪೊಲೀಸರು ಚೋಕ್ಸಿಗಾಗಿ ತೀವ್ರ ಶೋಧ ನಡೆಸಿದ್ದರು. ಈ ವೇಳೆ ಚೋಕ್ಸಿ ಡೊಮೆನಿಕಾದಲ್ಲಿ ಬಂಧನಕ್ಕೀಡಾಗಿದ್ದರು. ಡೊಮೆನಿಕಾಗೆ ಅಕ್ರಮವಾಗಿ ಪ್ರವೇಶ ಮಾಡಿದ ಆರೋಪದ ಮೇಲೆ  ಅವರನ್ನು ಬಂಧಿಸಲಾಗಿತ್ತು ಎನ್ನಲಾಗಿದೆ.

ಆಂಟಿಗುವಾದಿಂದ ಡೊಮಿನಿಕಾಕ್ಕೆ ಅಕ್ರಮವಾಗಿ ನುಸುಳಿರುವ ಬಗ್ಗೆ ಡೊಮಿನಿಕಾ ಕೋರ್ಟ್​​ನಲ್ಲಿ ವಿಚಾರಣೆ ನಡೆದಿತ್ತು ಜಾಮೀನು ನಿರಾಕರಿಸಿದೆ. ಅಲ್ಲದೇ ಭಾರತಕ್ಕೆ  ಗಡಿಪಾರು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮತ್ತೊಂದು ವಿಚಾರಣೆ ಕೂಡ ನಡೆಯ ಲಿದ್ದು, ಈ ವಿಚಾರಣೆಗೆ ಚೋಕ್ಸಿ ಕೂಡ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular