ಮಂಗಳವಾರ, ಮೇ 13, 2025
HomeBreakingMantralaya Open: ರಾಯರ ಬೃಂದಾವನ ದರ್ಶನಕ್ಕೆ ಭಕ್ತರಿಗೆ ಅವಕಾಶ

Mantralaya Open: ರಾಯರ ಬೃಂದಾವನ ದರ್ಶನಕ್ಕೆ ಭಕ್ತರಿಗೆ ಅವಕಾಶ

- Advertisement -

ರಾಯಚೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನ ದರ್ಶನ ಪಡೆಯಲು ಭಕ್ತರಿಗೆ ಶ್ರೀಮಠದ ಆಡಳಿತ ಮಂಡಳಿ ಅವಕಾಶ ಕಲ್ಪಿಸಿದೆ.

ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ರಾಯರ ಮೂಲ ಬೃಂದಾವನದ ದರ್ಶನವನ್ನು  ಪಡೆಯಬಹುದಾಗಿದೆ. ಬೆಳಗ್ಗೆ 6 ರಿಂದ ಅಪರಾಹ್ನ 2ರ ವರೆಗೆ ಮತ್ತು ಸಂಜೆ 4ರಿಂದ ರಾತ್ರಿ 9ರ ವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ ಮಠದ ಪ್ರಾಕಾರದಲ್ಲಿ ಪ್ರದಕ್ಷಿಣೆಗೆ ಅವಕಾಶವಿಲ್ಲ.

ಆಂಧ್ರಪ್ರದೇಶ ಸರಕಾರ ಕೊರೊನಾ ಸೋಂಕು ಕಡಿಮೆಯಾದ ಹಿನ್ನೆಲೆ ಯಲ್ಲಿ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಮಾರ್ಗಸೂಚಿ ಯ ಅನ್ವಯ, ಹೊರ ಊರುಗಳಿಂದ ಬರುವ ಭಕ್ತರಿಗೆ ಮಠದ ವಸತಿಗೃಹ ಗಳಲ್ಲಿ ವಾಸ್ತವ್ಯಕ್ಕೆಅವಕಾಶ ಕಲ್ಪಿಸಲಾಗಿದೆ.

ಆದರೆ ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಪಾಲನೆ ಹಾಗೂ ಮಾಸ್ಕ್  ಕಡ್ಡಾಯಗೊಳಿಸಲಾಗಿದೆ ಎಂದು ಮಂತ್ರಾಲಯದ ರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ತಿಳಿಸಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular