ಉತ್ತರ ಪ್ರದೇಶ :ಕೊರೊನಾ ಹಿನ್ನೆಲೆಯಲ್ಲಿ ಎಲ್ಲೆಡೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ರೆ ದಂಡ ವಿಧಿಸಲಾಗುತ್ತದೆ. ಆದ್ರೆ ಮಾಸ್ಕ್ ಹಾಕದೆ ಬ್ಯಾಂಕ್ ಒಳಗೆ ಪ್ರವೇಶ ಮಾಡಿದ ತಪ್ಪಿಗೆ ಸೆಕ್ಯೂರಿಟಿ ಗಾರ್ಡ ಓರ್ವ ಗ್ರಾಹಕನ ಮೇಲೆಯೇ ಗುಂಡು ಹಾರಿಸಿದ್ದಾನೆ.

ಉತ್ತರ ಪ್ರದೇಶದ ಬರೇಲಿಯಲ್ಲಿ ಈ ಘಟನೆ ನಡೆದಿದ್ದು, ರಾಜೇಶ್ ಕುಮಾರ್ ಎಂಬ ಗ್ರಾಹಕರು, ಬರೇಲಿಯ ಬ್ಯಾಂಕ್ ಆಪ್ ಬರೋಡ ಶಾಖೆಗೆ ಆಗಮಿಸಿದ್ದಾರೆ. ಈ ವೇಳೆಯಲ್ಲಿ ರಾಜೇಶ್ ಅವರು ಮಾಸ್ಕ್ ಧರಿಸಿರಲಿಲ್ಲ. ಭದ್ರತಾ ಸಿಬ್ಬಂದಿ ಬ್ಯಾಂಕ್ ಒಳಗೆ ತೆರಳುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜೇಶ್ ಕುಮಾರ್ ಭದ್ರತಾ ಸಿಬ್ಬಂದಿಯನ್ನೂ ಲೆಕ್ಕಿಸದೇ ಬ್ಯಾಂಕ್ ಒಳಗೆ ನುಗ್ಗಿದ್ದಾರೆ. ಈ ವೇಳೆಯಲ್ಲಿ ಭದ್ರತಾ ಸಿಬ್ಬಂಧಿ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಗಂಭೀರ ವಾಗಿ ಗಾಯಗೊಂಡಿರುವ ರಾಜೇಶ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಸೆಕ್ಯೂರಿಟಿ ಗಾರ್ಡ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಬ್ಯಾಂಕ್ ಅಳವಡಿಸಿರುವ ಸಿಸಿಟಿವಿ ದೃಶ್ಯ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸೆಕ್ಯೂರಿಟಿ ಗಾರ್ಡ್ ಹಾಗೂ ಗ್ರಾಹಕನ ನಡುವಿನ ಮಾತುಕತೆ, ಅಲ್ಲಿನ ಪರಿಸ್ಥಿತಿ ಸಿಸಿಟಿವಿ ದೃಶ್ಯದಿಂದ ಬಯಲಾಗಲಿದೆ. ಇದರಿಂದ ತಪ್ಪಿತಸ್ಥರು ಯಾರು ಅನ್ನೋದು ಹೊರಬೀಳಲಿದೆ ಎಂದು ಬರೋಡ ಜಂಕ್ಷನ ಶಾಖೆಯ ಬ್ಯಾಂಕ್ ಮ್ಯಾನೇಜರ್ ಗೀತಾ ಭುಸಾಲ್ ಹೇಳಿದ್ದಾರೆ.