ಮಂಗಳವಾರ, ಏಪ್ರಿಲ್ 29, 2025
Homepoliticsಸಚಿವೆಗೆ ಝೀರೋ ಟ್ರಾಫಿಕ್ ಪ್ರಕರಣ: ಸರ್ಕಾರ ಮತ್ತು ಶಶಿಕಲಾ ಜೊಲ್ಲೆಗೆ ಹೈಕೋರ್ಟ್ ನೊಟೀಸ್!

ಸಚಿವೆಗೆ ಝೀರೋ ಟ್ರಾಫಿಕ್ ಪ್ರಕರಣ: ಸರ್ಕಾರ ಮತ್ತು ಶಶಿಕಲಾ ಜೊಲ್ಲೆಗೆ ಹೈಕೋರ್ಟ್ ನೊಟೀಸ್!

- Advertisement -

ಪ್ರಮಾಣವ ವಚನಕ್ಕೆ ವಿಳಂಬವಾಗಬಾರದೆಂಬ ಕಾರಣಕ್ಕೆ  ಬೆಂಗಳೂರು ಏರ್ ಪೋರ್ಟ್ ನಿಂದ ರಾಜಭವನದವರೆಗೆ ಶಾಸಕಿ ಹಾಗೂ ಸಚಿವೆ ಶಶಿಕಲಾ ಜೊಲ್ಲೆಗೆ ಝೀರೋ ಟ್ರಾಫಿಕ್  ಕಲ್ಪಿಸಿದ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.

ಶಾಸಕರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವ ನಿರ್ಣಯ ತೆಗೆದುಕೊಂಡಿದ್ದು ಯಾರು? ಈ ರೀತಿ ಅನುಮತಿ ಕೊಟ್ಟರೇ ನಾಳೆ ಎಲ್ಲ ಶಾಸಕರು ಇದನ್ನೇ ಬಯಸಬಹುದು. ಜೀವಂತ ಹೃದಯ ರವಾನೆ ಹೊರತುಪಡಿಸಿ ಉಳಿದ ಸಂದರ್ಭದಲ್ಲಿ ಈ ವ್ಯವಸ್ಥೆ ಬಳಸುವ ಅಗತ್ಯವೇನಿದೆ ಎಂದು ಹೈಕೋರ್ಟ್ ಪ್ರಶ್ನಿಸಿದೆ.

ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸರ್ಕಾರಕ್ಕೆ ಉತ್ತರಿಸುವಂತೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ. ನ್ಯಾಯವಾದಿ ಜಿ.ಬಾಲಾಜಿ ನಾಯ್ಡು ಎಂಬುವವರು ಸರ್ಕಾರದ ಈ ಝೀರೋ ಟ್ರಾಫಿಕ್ ದುರ್ಬಳಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಮುಖ್ಯನ್ಯಾಯಮೂರ್ತಿ ಎ.ಎಸ್.ಓಕ್ ಅವರ ನ್ಯಾಯಪೀಠದಲ್ಲಿ ಪ್ರಕರಣ ವಿಚಾರಣೆಗೆ ಬಂದಿದ್ದು, ಸರ್ಕಾರ ಮತ್ತು ಸಚಿವರ ಜೊತೆಗೆ ನಗರ ಪೊಲೀಸ್ ಆಯುಕ್ತರು ಹಾಗೂ ಸಂಚಾರ ಪೊಲೀಸ್ ಆಯುಕ್ತರಿಗೂ  ನೊಟೀಸ್ ಜಾರಿಯಾಗಿದೆ.

ಅಗಸ್ಟ್ 4 ರಂದು ಮಧ್ಯಾಹ್ನ 2.14 ರಿಂದ 2.40 ರವರೆಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿ 34 ಕಿಲೋಮೀಟರ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದರಿಂದ ಜನಸಾಮಾನ್ಯರಿಗೆ ಉಂಟಾದ ತೊಂದರೆಗೆ ಪರಿಹಾರವೇನು ಎಂದು ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದೆ.  

RELATED ARTICLES

Most Popular