ಬುಧವಾರ, ಜೂನ್ 18, 2025
HomekarnatakaCrime News : ಕಾಲುವೆಗೆ ಉರುಳಿದ ಕಾರು : ಸ್ಥಳದಲ್ಲೇ ನಾಲ್ವರ ದುರ್ಮರಣ

Crime News : ಕಾಲುವೆಗೆ ಉರುಳಿದ ಕಾರು : ಸ್ಥಳದಲ್ಲೇ ನಾಲ್ವರ ದುರ್ಮರಣ

- Advertisement -

ಬಾಗಲಕೋಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿಬಿದ್ದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿಯ ಪೈಕಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದಲ್ಲಿ ನಡೆದಿದೆ.

ರಾಮದುರ್ಗ ತಾಲೂಕಿನ ಬಡಕಿ ಗ್ರಾಮದ ನಿವಾಸಿಗಳಾದ ಮಹಾದೇವ ಪಾಟೀಲ್‌ ( 27 ವರ್ಷ), ಎರಿತಾತಾ ಕಂಬಾರ್‌ (26 ವರ್ಷ), ವಿಜಯ್‌ (26 ವರ್ಷ) ಹಾಗೂ ಕಾರು ಚಾಲಕ ಸುನಿಲ್‌ ( 24 ವರ್ಷ) ಎಂಬವರೇ ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Car Accident

ಜಮಖಂಡಿಯಿಂದ ರಾಮದುರ್ಗದ ಕಡೆಗೆ ಬರುತ್ತಿದ್ದ ಕಾರು ಲೋಕಾಪುರ ರಸ್ತೆಯ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದಿದೆ. ರಸ್ತೆ ಪಕ್ಕದಲ್ಲಿದ್ದ ಕಲ್ಲಿಗೆ ಕಾರು ಢಿಕ್ಕಿಯಾದ ಹಿನ್ನೆಲೆಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗುತ್ತಿದೆ. ಆದರೆ ತಡರಾತ್ರಿಯಾಗಿದ್ದರಿಂದಾಗಿ ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಲೋಕಾಪುರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಇದನ್ನೂ ಓದಿ : ಮಕ್ಕಳ ಕೈಗೆ ಮೊಬೈಲ್‌ ನೀಡೋ ಮುನ್ನ ಹುಷಾರ್‌ ! ಅಶ್ಲೀಲ ಚಿತ್ರ ವೀಕ್ಷಣೆಗೆ ನಿರಾಕರಣೆ, ಅಪ್ತಾಪ್ತ ಬಾಲಕರಿಂದ 6 ವರ್ಷ ಬಾಲಕಿ ಹತ್ಯೆ

ಇದನ್ನೂ ಓದಿ : ಈಜಲು ತೆರಳಿದ್ದ ಇಬ್ಬರು ಬಾಲಕರು ನದಿಯಲ್ಲಿ ಮುಳುಗಿ ಸಾವು

( Car toppled into canal: four killed on the spot in Halki near Bagalkot District )

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular