ಸೋಮವಾರ, ಜೂನ್ 16, 2025
HomeSportsKL RAHUL Captain : ಭಾರತ ತಂಡಕ್ಕೆ ಕೆ.ಎಲ್.ರಾಹುಲ್‌ ನಾಯಕ

KL RAHUL Captain : ಭಾರತ ತಂಡಕ್ಕೆ ಕೆ.ಎಲ್.ರಾಹುಲ್‌ ನಾಯಕ

- Advertisement -

ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್‌ ಸರಣಿಗೆ ಸಜ್ಜಾಗುತ್ತಿದೆ. ಟೆಸ್ಟ್‌ ಸರಣಿಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಬಿಗ್‌ ಶಾಕ್‌ ಎದುರಾಗಿದೆ. ಇದೇ ಮೊದಲ ಬಾರಿಗೆ ಟೆಸ್ಟ್‌ ತಂಡದ‌ ( Team India captain ) ಉಪನಾಯಕನಾಗಿ ಆಯ್ಕೆಯಾಗಿದ್ದ ರೋಹಿತ್‌ ಶರ್ಮಾ ಗಾಯಗೊಂಡು ತಂಡದಿಂದ ಹೊರ ಬಿದ್ದಿದ್ದಾರೆ. ಇದೀಗ ರೋಹಿತ್‌ ಶರ್ಮಾ ಬದಲು ಪ್ರಿಯಾಂಕ್‌ ಪಂಚಾಲ್‌ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇನ್ನೊಂದೆಡೆಯಲ್ಲಿ ಉಪನಾಯಕನ ಹುದ್ದೆಯನ್ನು ಬಿಸಿಸಿಐ ಯಾರಿಗೆ ನೀಡುತ್ತೆ ಅನ್ನೋ ಕುತೂಹಲ ಗರಿಗೆದರಿದ್ದು, ಕನ್ನಡಿಗ ಕೆ.ಎಲ್.ರಾಹುಲ್‌ ಉಪನಾಯಕನಾಗೋದು ಖಚಿತವಾಗಿದೆ. ಅಲ್ಲದೇ ಏಕದಿನ ಪಂದ್ಯಕ್ಕೆ ರೋಹಿತ್‌ ಶರ್ಮಾ ಅಲಭ್ಯರಾದ್ರೆ ರಾಹುಲ್‌ ಟೀಂ ಇಂಡಿಯಾದ ನಾಯಕನಾಗೋದು (KL RAHUL Captain) ಪಕ್ಕಾ.

ಟೀಂ ಇಂಡಿಯಾ ನಾಯಕ ವಿರಾಟ್‌ ಕೊಯ್ಲಿ ಚುಟುಕು ಕ್ರಿಕೆಟ್‌ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರೋಹಿತ್‌ ಶರ್ಮಾ ಅವರನ್ನು ನಾಯಕನನ್ನಾಗಿ, ಕನ್ನಡಿಗ ಕೆ.ಎಲ್.ರಾಹುಲ್‌ ಅವರನ್ನು ಉಪನಾಯಕನನ್ನಾಗಿ ನೇಮಕ ಮಾಡಲಾಗಿತ್ತು. ನ್ಯೂಜಿಲೆಂಡ್‌ ವಿರುದ್ದದ ಸರಣಿಯನ್ನು ವಿರಾಟ್‌ ಕೊಯ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಅಮೋಘ ಗೆಲುವು ದಾಖಲಿಸಿದ ಬೆನ್ನಲ್ಲೇ ಕೊಯ್ಲಿ ಅವರನ್ನು ಏಕದಿನ ತಂಡದ ನಾಯಕತ್ವದಿಂದಲೂ ಕೆಳಗೆ ಇಳಿಸಲಾಗಿತ್ತು. ರೋಹಿತ್‌ ಶರ್ಮಾ ಅವರನ್ನು ಏಕದಿನ ತಂಡದ ನಾಯಕನನ್ನಾಗಿ ನೇಮಕ ಮಾಡಿದ್ದರೂ ಕೂಡ ಉಪನಾಯಕನ ಹುದ್ದೆಯನ್ನು ಖಾಲಿ ಉಳಿಸಲಾಗಿತ್ತು. ಆದರೆ ಟೆಸ್ಟ್‌ ತಂಡದ ಉಪನಾಯಕನಾಗಿದ್ದ ಅಜಿಂಕ್ಯಾ ರಹಾನೆ ಅವರನ್ನು ಹುದ್ದೆಯಿಂದ ಕೆಳಗಿಳಿಸಿದ ಬೆನ್ನಲ್ಲೇ ರೋಹಿತ್‌ ಶರ್ಮಾ ಉಪನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ಗಾಯಗೊಂಡಿರುವುದು ಕ್ರಿಕೆಟ್‌ ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದೆ.

ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆಯಲ್ಲಿ ಟೀಂ ಇಂಡಿಯಾ ಒಟ್ಟಿ ಮೂರು ಟೆಸ್ಟ್‌, ಮೂರು ಏಕದಿನ ಹಾಗೂ ನಾಲ್ಕು ಟೀ 20 ಪಂದ್ಯಗಳನ್ನು ಆಡಲಿದೆ. ಈಗಾಗಲೇ ಟೆಸ್ಟ್‌ ತಂಡಕ್ಕೆ ಆಟಗಾರರನ್ನು ಆಯ್ಕೆ ಮಾಡಿದೆ. ನ್ಯೂಜಿಲೆಂಡ್‌ ವಿರುದ್ದದ ಟೆಸ್ಟ್‌ ಸರಣಿಯಿಂದ ದೂರ ಉಳಿದಿದ್ದ ಕೆ.ಎಲ್.ರಾಹುಲ್‌ ತಂಡವನ್ನು ಸೇರಿಕೊಂಡಿದ್ದಾರೆ. ವಿರಾಟ್‌ ಕೊಯ್ಲಿ ಟೆಸ್ಟ್‌ ತಂಡದ ನಾಯಕರಾಗಿ ಮುಂದುವರಿಯಲಿದ್ದಾರೆ. ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ರಾಹುಲ್‌ ಉಪನಾಯಕರಾಗಲಿದ್ದಾರೆ ಅನ್ನೋದು ಕ್ರಿಕೆಟ್‌ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆಯಲ್ಲಿ ಏಕದಿನ ನಾಯಕತ್ವದಿಂದ ಕೆಳಗಿಳಿಸಿದ ಬೆನ್ನಲ್ಲೇ ವಿರಾಟ್‌ ಕೊಯ್ಲಿ ಬಿಸಿಸಿಐ ವಿರುದ್ದ ಮುನಿಸಿಕೊಂಡಿದ್ದಾರೆ. ಅಲ್ಲದೇ ಏಕದಿನ ಪಂದ್ಯಗಳಿಂದ ದೂರ ಉಳಿಯಲು ಕೊಯ್ಲಿ ನಿರ್ಧಾರ ಮಾಡಿದ್ದಾರೆ. ಒಂದೊಮ್ಮೆ ರೋಹಿತ್‌ ಶರ್ಮಾ ಏಕದಿನ ಪಂದ್ಯದ ವೇಳೆಗೆ ಗುಣಮುಖರಾಗದೇ ಇದ್ರೆ ಕೆ.ಎಲ್.ರಾಹುಲ್‌ ಏಕದಿನ ಸರಣಿಗೆ ನಾಯಕನಾಗಲಿದ್ದಾರೆ. ಈಗಾಗಲೇ ಟಿ೨೦ ತಂಡ ಉಪನಾಯಕನಾಗಿರುವ ರಾಹುಲ್‌ ಏಕದಿನ ತಂಡಕ್ಕೂ ಉಪನಾಯಕನನ್ನಾಗಿ ಬಿಸಿಸಿಐ ನೇಮಕ ಮಾಡಲು ಸಿದ್ದತೆ ನಡೆಸಿದೆ ಎನ್ನಲಾಗುತ್ತಿದೆ. ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ರಾಹುಲ್‌ ಜೊತೆಗೆ ಮಯಾಂಕ್‌ ಅಗರ್ವಾಲ್‌ ಆರಂಭಿಕರಾಗಿ ಕಣಕ್ಕೆ ಇಳಿಯಲಿದ್ದಾರೆ.

ಒಟ್ಟಿನಲ್ಲಿ ಅದ್ಬುತ ಫಾರ್ಮ್‌ನಲ್ಲಿರುವ ಕನ್ನಡಿಗ ಕೆ.ಎಲ್.ರಾಹುಲ್‌ಗೆ ಟೀಂ ಇಂಡಿಯಾವನ್ನು ಮುನ್ನಡೆಸುವ ಅವಕಾಶ ಒದಗಿ ಬರುವುದು ಖಚಿತ ಎನ್ನಲಾಗುತ್ತಿದೆ. ರೋಹಿತ್‌ ಶರ್ಮಾ ಗಾಯದಿಂದ ಗುಣಮುಖರಾಗದೇ ಇದ್ರೆ ಬಿಸಿಸಿಐ ಕನ್ನಡಿಗನಿಗೆ ಮಣೆ ಹಾಕುವುದು ಖಚಿತ. ಇನ್ನೊದೆಡೆಯಲ್ಲಿ ಕನ್ನಡಿಗ ರಾಹುಲ್‌ ದ್ರಾವಿಡ್‌ ಟೀಂ ಇಂಡಿಯಾದ ಮುಖ್ಯ ಕೋಚ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಭಾರತದ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಪ್ರಿಯಾಂಕ್ ಪಾಂಚಾಲ್, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್-ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್), ಅಶ್ವಿನ್ಕೆ ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊ. ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಎಂಡಿ ಸಿರಾಜ್.

(KL Rahul is Team India captain)

Arun Gundmi | ಅರುಣ್ ಗುಂಡ್ಮಿ
Arun Gundmi Editor In Chief News Next Kannada. Working in more than 20 Years in Kannada Media (Print, Digital and News Channels. Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular