ಅಹಮದಾಬಾದ್ : ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ ಏಕದಿನ ಸರಣಿಗೆ ಮುನ್ನವೇ ಟೀಂ ಇಂಡಿಯಾಕ್ಕೆ ಬಿಗ್ ಶಾಕ್ ಎದುರಾಗಿದೆ. ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್ ಸೇರಿದಂತೆ ಐವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವೆಸ್ಟ್ಇಂಡಿಸ್ ವಿರುದ್ದದ ಸರಣಿಗೆ (IND vs WI Series)ಕೊರೊನಾ ಕಾರ್ಮೋಡದ ಕವಿದಿದೆ. ಈ ನಡುವಲ್ಲೇ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರಿಗೆ ಟೀಂ ಇಂಡಿಯಾದಿಂದ ಬುಲಾವ್ ಬಂದಿದೆ.
ಭಾರತ ಮತ್ತು ವೆಸ್ಟ್ ಇಂಡಿಸ್ ವಿರುದ್ದದ ಭಾರತ ತಂಡ ಅಹಮದಾಬಾದ್ ನಲ್ಲಿ ಆಟಗಾರರು ಅಭ್ಯಾಸ ಶಿಬಿರದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆಯಲ್ಲಿ ಆಟಗಾರರನ್ನು ಕೋವಿಡ್-19 ಧನಾತ್ಮಕ ಪರೀಕ್ಷೆಯಲ್ಲಿ ಆರಂಭಿಕರಾದ ಶಿಖರ್ ಧವನ್ ಮತ್ತು ರುತುರಾಜ್ ಗಾಯಕ್ವಾಡ್ ಹಾಗೂ ಶ್ರೇಯಸ್ ಅಯ್ಯರ್ ಅವರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಅಲ್ಲದೇ ಮೀಸಲು ಆಟಗಾರ ನವದೀಪ್ ಸೈನಿ, ಫೀಲ್ಡಿಂಗ್ ಕೋಚ್ ಟಿ.ದಿಲೀಪ್, ಭದ್ರತಾ ಸಂಪರ್ಕಾಧಿಕಾರಿ ಬಿ. ಲೋಕೇಶ್ ಮತ್ತು ಕ್ರೀಡಾ ಮಸಾಜ್ ಥೆರಪಿಸ್ಟ್ ರಾಜೀವ್ ಕುಮಾರ್ ಅವರಿಗೆ ಸೋಂಕು ಇರುವುದು ಖಚಿತವಾಗಿದೆ.
ರೋಹಿತ್ ಶರ್ಮಾ ನೇತೃತ್ವದ ತಂಡವು ಮೊದಲ ಪಂದ್ಯಕ್ಕೂ ಮುನ್ನ ಗುರುವಾರ ತಮ್ಮ ತರಬೇತಿಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಇದೀಗ ಟೀಂ ಇಂಡಿಯಾದ ಆಟಗಾರರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಂದು ಮತ್ತೆ ಎಲ್ಲಾ ಆಟಗಾರರನ್ನು ಕೋವಿಡ್ ಟೆಸ್ಟ್ಗೆ ಒಳಪಡಿಸಲು ಬಿಸಿಸಿಐ ನಿರ್ಧರಿಸಿದೆ. ಭಾರತ ತಂಡ ಭಾನುವಾರ, ಫೆಬ್ರವರಿ 6 ರಿಂದ ವೆಸ್ಟ್ ಇಂಡೀಸ್ ವಿರುದ್ಧ ಅಹಮದಾಬಾದ್ನಲ್ಲಿ ಮೊದಲ ಪಂದವನ್ನು ಆಡಲಿದೆ. ಒಟ್ಟು ಮೂರು ಏಕದಿನ ಪಂದ್ಯಗಳು ಕೂಡ ಅಹಮದಾಬಾದ್ನಲ್ಲಿಯೇ ನಡೆಯಲಿದೆ. ಅಲ್ಲದೇ ಫೆಬ್ರವರಿ 16 ರಿಂದ ಕೋಲ್ಕತ್ತಾದಲ್ಲಿ 3 ಪಂದ್ಯಗಳ T20I ಸರಣಿ ಆರಂಭಗೊಳ್ಳಲಿದೆ. ರೋಹಿತ್ ಶರ್ಮಾ ತಂಡವನ್ನು ಸೇರ್ಪಡೆಗೊಂಡಿದ್ದು, ಸರಣಿಗೆ ಈಗಾಗಲೇ ರೋಹಿತ್ ಶರ್ಮಾ ನಾಯಕತ್ವದಲ್ಲಿ 18 ಸದಸ್ಯರ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದೆ.
ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ದೇಶದಲ್ಲಿ ಓಮಿಕ್ರಾನ್ ಬೆದರಿಕೆಯಿಂದಾಗಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪ್ರೇಕ್ಷಕರಿಗೆ ಪಂದ್ಯ ವೀಕ್ಷಣೆ ಮಾಡಲು ಅವಕಾಶವನ್ನು ನಿರಾಕರಿಸಿದೆ. ಆದರೆ ಈಡನ್ ಗಾರ್ಡನ್ಸ್ ಟಿ20ಐ ಸರಣಿಗೆ ಗರಿಷ್ಠ 70 ಪ್ರತಿಶತ ಹಾಜರಾತಿಯನ್ನು ಹೊಂದಿರುತ್ತದೆ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆ ಹೇಳಿದೆ. CAB ಅಧ್ಯಕ್ಷ ಅವಿಶೇಕ್ ದಾಲ್ಮಿಯಾ ಅವರು T20I ಸರಣಿಯಲ್ಲಿ ಪಾಲ್ಗೊಳ್ಳಲು ಅಭಿಮಾನಿಗಳಿಗೆ ಅವಕಾಶ ನೀಡಿದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ. ಕಳೆದ ವರ್ಷ ನ್ಯೂಜಿಲೆಂಡ್ನ ಭಾರತ ಪ್ರವಾಸದ ಮೂರನೇ T20I ಅನ್ನು ಕೋಲ್ಕತ್ತಾ ಈಡನ್ ಗಾರ್ಡನ್ಸ್ 50 ಪ್ರತಿಶತ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ.
ಕ್ರೀಡಾ ಚಟುವಟಿಕೆಗಳನ್ನು ಪುನರಾರಂಭಿಸುವುದಾಗಿ ಘೋಷಿಸಿದ್ದಕ್ಕಾಗಿ ಗೌರವಾನ್ವಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮುಖ್ಯ ಕಾರ್ಯದರ್ಶಿ ಮತ್ತು ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಾವು ಕೃತಜ್ಞರಾಗಿರುತ್ತೇವೆ ಮತ್ತು ಪ್ರೇಕ್ಷಕರ ಸಾಮರ್ಥ್ಯದ 75 ಪ್ರತಿಶತವನ್ನು ಕ್ರೀಡಾಂಗಣಕ್ಕೆ ಹಿಂತಿರುಗಿಸಲು ಅವಕಾಶ ಮಾಡಿಕೊಟ್ಟಿದ್ದೇವೆ” ಎಂದು ಅವಿಶೇಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ ವಿಶ್ವಕಪ್ ಫೈನಲ್ಗೆ ಎಂಟ್ರಿ
ಇದನ್ನೂ ಓದಿ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡ್ತಾರೆ RCB ಮಾಜಿ ಆಟಗಾರ ಹರ್ಷಲ್ ಪಟೇಲ್
( IND vs WI Series: Dhawan, Shreyas Iyer and 5 others test covid positive, Mayank Agarwal added)