ಬುಧವಾರ, ಏಪ್ರಿಲ್ 30, 2025
Homepoliticsಹಿಜಾಬ್​ ಹೆಸರಿನಲ್ಲಿ ಮತಾಂಧ ಶಕ್ತಿಗಳು ಆಟವಾಡುತ್ತಿವೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಹಿಜಾಬ್​ ಹೆಸರಿನಲ್ಲಿ ಮತಾಂಧ ಶಕ್ತಿಗಳು ಆಟವಾಡುತ್ತಿವೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

- Advertisement -

ಬೆಂಗಳೂರು : ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿರುವ ಹಿಜಾಬ್​ ವಿವಾದ ( Hijab Culture) ರಾಜ್ಯಮಟ್ಟದಲ್ಲಿ ಸುದ್ದಿ ಮಾಡುತ್ತಿದ್ದು ರಾಜಕೀಯ ಕೆಸರೆರಚಾಟಕ್ಕೆ ವೇದಿಕೆ ಕಲ್ಪಿಸಿದೆ. ಕಾಲೇಜುಗಳಲ್ಲಿ ಧರ್ಮದ ಆಚರಣೆ ಬೇಡ ಎನ್ನುವುದು ಸರ್ಕಾರದ ವಾದವಾಗಿದ್ದರೆ ಹಿಜಾಬ್​ ಹೆಸರಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಿಕ್ಷಣ ವಂಚಿತರನ್ನಾಗಿ ಮಾಡಲಾಗುತ್ತಿದೆ ಎನ್ನವುದು ವಿರೋಧ ಪಕ್ಷದ ವಾದವಾಗಿದೆ.

ಇಂದು ಬೆಂಗಳೂರಿನಲ್ಲಿ ಇದೇ ವಿಚಾರವಾಗಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಿಜಾಬ್​ ಹೆಸರಿನಲ್ಲಿ ಮತಾಂಧ ಶಕ್ತಿಗಳು ಆಟವಾಡುತ್ತಿದೆ.ಇದನ್ನು ನಾವು ಖಂಡಿತವಾಗಿಯೂ ವಿರೋಧಿಸುತ್ತೇವೆ. ಒಂದೂವರೆ ವರ್ಷದ ಹಿಂದೆ ಈ ರೀತಿಯ ಯಾವುದೇ ಸಮಸ್ಯೆಗಳು ಇರಲಿಲ್ಲ. ಹಿಜಾಬ್​ ಹೆಸರಿನಲ್ಲಿ ನಡೆಯುತ್ತಿರುವ ಧರ್ಮಾದಂತೆಯನ್ನು ಸಹಿಸಲು ಸಾಧ್ಯವೇ ಇಲ್ಲ. ಧರ್ಮದ ಹೆಸರಿನಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಅನಗತ್ಯ ಗೊಂದಲಗಳನ್ನು ಸೃಷ್ಟಿಸಬೇಡಿ ಎಂದು ಹೇಳಿದ್ದಾರೆ.

ಹಿಜಾಬ್​ ವಿವಾದಲ್ಲಿ ರಾಜ್ಯ ಸರ್ಕಾರವನ್ನು ದೂಷಿಸುತ್ತಿರುವ ಕಾಂಗ್ರೆಸ್​ ನಾಯಕರ ಮಾತಿಗೆ ಇದೇ ವೇಳೆ ತಿರುಗೇಟು ನೀಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾಂಗ್ರೆಸ್​ ನಾಯಕರು ಮತಕ್ಕಾಗಿ ಏನೇನೋ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಪರಿಸ್ಥಿತಿಯನ್ನು ಶಾಂತಗೊಳಿಸಲು ತಮ್ಮ ಪ್ರಯತ್ನವನ್ನು ಮಾಡಬೇಕು. ಅದರ ಹೊರತಾಗಿ ಸರ್ಕಾರವನ್ನು ಟೀಕಿಸುವ ಕೆಲಸ ಮಾಡಬಾರದು ಎಂದು ಗುಡುಗಿದ್ದಾರೆ.

ಕಾಲೇಜುಗಳಲ್ಲಿ ಹಿಜಾಬ್​ ಸಂಸ್ಕೃತಿಯನ್ನು ವಿರೋಧಿಸಿ ಕೇಸರು ಶಾಲು ಧರಿಸುವ ವಿದ್ಯಾರ್ಥಿಗಳ ವಿಚಾರವಾಗಿ ಪ್ರತಿಕ್ರಿಯಿಸಿದ ಕೋಟ ಶ್ರೀನಿವಾಸ ಪೂಜಾರಿ, ಒಂದನ್ನು ತಪ್ಪು ಎಂದು ಹೇಳಿದ ಮೇಲೆ ಇನ್ನೊಂದು ಕೂಡ ತಪ್ಪೇ ಅಲ್ಲವೇ..? ವಿದ್ಯಾರ್ಥಿಗಳು ಶಾಲಾ ಸಮವಸ್ತ್ರಗಳಿಗೆ ಬದ್ಧರಾಗಿ ಇರಬೇಕು. ಈ ವಿಚಾರವಾಗಿ ಶಿಕ್ಷಣ ಸಂಸ್ಥೆಗಳು ಯಾವುದೇ ಗೊಂದಲಕ್ಕೆ ಒಳಗಾಗುವುದು ಬೇಡ ಎಂದು ಹೇಳಿದರು.

ಇದನ್ನು ಓದಿ : ಶಾಲೆಯಲ್ಲಿ ಹಿಜಾಬ್‌ ಕೇಳುವವರು, ಮಹಿಳೆಯರಿಗೆ ಮಸೀದಿಯೊಳಗೆ ಪ್ರವೇಶ ಕೊಡಿ : ಸಚಿವ ಸುನೀಲ್‌ ಕುಮಾರ್‌

ಇದನ್ನೂ ಓದಿ : ಬೈಂದೂರಲ್ಲಿ ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ 300 ವಿದ್ಯಾರ್ಥಿಗಳು : ಕರಾವಳಿಯಲ್ಲಿ ಮುಂದುವರಿದ ಹಿಜಬ್‌ – ಕೇಸರಿ ಶಾಲು ವಿವಾದ

Minister Kota Srinivasa Poojary’s Statement on Hijab Culture

RELATED ARTICLES

Most Popular