ಬೆಂಗಳೂರು : ಶಿವಮೊಗ್ಗದಲ್ಲಿ ನಡೆದಿರುವ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ (Harsha murder ) ತೀವ್ರ ಸಂಚಲನ ಮೂಡಿಸಿದ್ದು, ಬರ್ಬರವಾಗಿ ಹತ್ಯೆಯಾದ ಹಿಂದೂ ಕಾರ್ಯಕರ್ತನ ಕೊಲೆ ಹಿಂದಿನ ಆರೋಪಿಗಳನ್ನು ಬಂಧಿಸಬೇಕೆಂಬ ತೀವ್ರ ಒತ್ತಡ ವ್ಯಕ್ತವಾಗುತ್ತಿದೆ. ಈ ಮಧ್ಯೆ ಕರ್ನಾಟಕ ಪೊಲೀಸರ ತನಿಖೆಗಿಂತ NIA ತನಿಖೆಯೇ (NIA investigation) ಸೂಕ್ತ ಎಂಬ ಒತ್ತಡ ವ್ಯಕ್ತವಾಗಿದ್ದು, ಸರ್ಕಾರ ಅಂತಿಮ ತೀರ್ಮಾನಕೈಗೊಳ್ಳುವ ಸಾಧ್ಯತೆ ಇದೆ.
ರವಿವಾರ ರಾತ್ರಿ 9.15 ರ ವೇಳೆಗೆ ಶಿವಮೊಗ್ಗದ ಭಾರತಿನಗರದಲ್ಲಿ ಹಿಂದೂಪರ ಸಂಘಟನೆ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ನಡೆದಿದೆ. ಕಾರಿನಲ್ಲಿ ಬಂದ ದುರುಳರು ಹರ್ಷ ಹತ್ಯೆಗೈಯ್ದು ಪರಾರಿಯಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳದಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದ್ದು ಕಲ್ಲು ತೂರಾಟ ನಡೆದಿದೆ. ಇನ್ನು ಶಿವಮೊಗ್ಗದಲ್ಲಿ ಈ ಹಿಂದೆಯೂ ಹಲವು ಹಿಂದೂಪರ ಕಾರ್ಯಕರ್ತರ ಹತ್ಯೆ ನಡೆದಿದೆ. ಹೀಗಾಗಿ ಮತ್ತೆ ಮತ್ತೆ ಈ ರೀತಿಯ ಕೃತ್ಯಗಳು ಮರುಕಳಿಸುತ್ತಿರುವುದಕ್ಕೆ ರಾಜಕೀಯ ವಲಯದಿಂದಲೂ ಆಕ್ರೋಶ ಕೇಳಿಬಂದಿದೆ.
.ಈ ಮಧ್ಯೆ ರಾಜಕೀಯ ಲಾಭಕ್ಕಾಗಿ ಈಶ್ಬರಪ್ಪನವರೇ ಹರ್ಷನ ಕೊಲೆ ಮಾಡಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಆರೋಪದ ಕುರಿತು ಪ್ರತಿಕ್ರಿಯಿಸಿದ ಹಿರಿಯ ಸಚಿವ ಕೆ.ಎಸ್. ಈಶ್ವರಪ್ಪ ಕಾಂಗ್ರೆಸ್ ನಾಯಕರು ನಾನು ಕೊಲೆ ಮಾಡಿಸಿದ್ದೇನೆ ಎಂದು ಆರೋಪಿಸುತ್ತಿದ್ದಾರೆ. ಹೀಗಾಗಿ ಈ ಕೇಸ್ ನ ನಿಶ್ಪಪಕ್ಷಪತಾ ತನಿಖೆಗಾಗಿ ಇದನ್ನು ಎನ್ ಐ ಎ ಗೆ ವಹಿಸಬೇಕೆಂದು ನಾನು ಆಗ್ರಹಿಸುತ್ತೇನೆ ಎಂದಿದ್ದಾರೆ.
ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಸಹ ಪ್ರಕರಣವನ್ನು NIA ಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಶೋಭಾ ಕರಂದ್ಲಾಜೆ, ಯಾವಾಗಲೂ ಹಿಂದುಪರ ಸಂಘಟನೆಗಳ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿಯೇ ಈ ರೀತಿ ಕೃತ್ಯ ಎಸಗಲಾಗುತ್ತಿದೆ. ಈ ಹಿಂದೆ ನಡೆದ ರುದ್ರೇಶ್ ಕೊಲೆ ಪ್ರಕರಣದಲ್ಲೂ ಪಿಎಫ್ಐ ಕೈವಾಡವಿರುವುದು ಧೃಡಪಟ್ಟಿದೆ. ಹೀಗಾಗಿ ಹರ್ಷ ಪ್ರಕರಣದ ಸೂಕ್ತ ತನಿಖೆಗಾಗಿ ಈ ಪ್ರಕರಣವನ್ನು NIA ವಹಿಸುವಂತೆ ಕೋರಿದ್ದಾರೆ.
ಮಾತ್ರವಲ್ಲ ಘಟನೆಯನ್ನು ತೀವ್ರವಾಗಿ ಖಂಡಿಸಿದ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೂಡ ಈ ಪ್ರಕರಣವನ್ನು NIA ತನಿಖೆಗೆ ನೀಡುವಂತೆ ಒತ್ತಾಯಿಸಿದ್ದಾರೆ. ಈ ಎಲ್ಲ ಬೆಳವಣಿಗೆಯಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಿದ್ದು ಸರ್ಕಾರ ನಾಳೆ ವೇಳೆಗೆ ಪ್ರಕರಣದ ತನಿಖೆ ಕುರಿತು ಸ್ಪಷ್ಟ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಇನ್ನೊಂದೆಡೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಖಾಸಿಫ್ ಹಾಗೂ ನದೀಮ್ ಎಂಬ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದರೆ ಸರ್ಕಾರ ತಮಗಾಗುವ ಮುಜುಗರ ತಪ್ಪಿಸಿಕೊಳ್ಳಲು NIA ತನಿಖೆಗೆ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ : ಭಜರಂಗದಳ ಕಾರ್ಯಕರ್ತ ಹರ್ಷ ಬರ್ಬರ ಹತ್ಯೆ: 144 ಸೆಕ್ಷನ್ ಜಾರಿ, ಶಿವಮೊಗ್ಗದಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ
ಇದನ್ನೂ ಓದಿ : ಬಿಜೆಪಿ ಕಾಂಗ್ರೆಸ್ ನಡುವೆ ಫೈಟ್ : ಹರ್ಷ ಕೊಲೆಯಲ್ಲೂ ಶುರುವಾಯ್ತು ರಾಜಕೀಯ ಲೆಕ್ಕಾಚಾರ
ಇದನ್ನೂ ಓದಿ : ಶಿವಮೊಗ್ಗದಲ್ಲಿ ಹರ್ಷ ಮೃತದೇಹ ಮೆರವಣಿಗೆ ವೇಳೆ ಕಲ್ಲು ತೂರಾಟ, ವಾಹನಕ್ಕೆ ಬೆಂಕಿ
ಇದನ್ನೂ ಓದಿ : ಶೀಘ್ರದಲ್ಲೇ ಹರ್ಷ ಕೊಲೆ ಆರೋಪಿಗಳ ಬಂಧನ : ಗೃಹಸಚಿವ ಆರಗ ಜ್ಞಾನೇಂದ್ರ
(Shivamogga Harsha murder case NIA investigation BJP leaders pressurizes over the Karnataka government)