bjp leader balachandran killed : ತಮಿಳುನಾಡು ಬಿಜೆಪಿ ಎಸ್ಸಿ -ಎಸ್ಟಿ ಘಟಕದ ಕೇಂದ್ರ ಜಿಲ್ಲಾಧ್ಯಕ್ಷ ಬಾಲಚಂದ್ರನ್ರನ್ನು ಮೂವರು ಅಪರಿಚಿತ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಚೆನ್ನೈನ ಚಿಂತಾದ್ರಿಪೇಟೆಯಲ್ಲಿ ಮಂಗಳವಾರ ಸಂಜೆ ಈ ಘಟನೆ ಸಂಭವಿಸಿದೆ.
ಮೃತ ಬಾಲಚಂದ್ರನ್ಗೆ ಮೊದಲೇ ಜೀವ ಬೆದರಿಕೆ ನೀಡಲಾಗಿತ್ತು. ಹೀಗಾಗಿ ಬಾಲಚಂದ್ರನ್ ತಮಿಳುನಾಡು ಸರ್ಕಾರದಿಂದ ವೈಯಕ್ತಿಕ ಭದ್ರತಾ ಅಧಿಕಾರಿಯಿಂದ ಭದ್ರತೆಯನ್ನು ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ ಭದ್ರತಾ ಅಧಿಕಾರಿ ಟೀ ವಿರಾಮಕ್ಕೆ ತೆರಳಿದ್ದ ಸಂದರ್ಭದಲ್ಲಿ ಬಾಲಚಂದ್ರನ್ ಮೇಲೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಬಾಲಚಂದ್ರನ್ ಮೇಲೆ ದಾಳಿ ನಡೆದಿದ್ದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಬಾಲಚಂದ್ರನ್ರನ್ನು ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲು ಮಾಡಲಾಯ್ತಾದರೂ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ.ಕೃತ್ಯ ನಡೆದ ಸ್ಥಳದಿಂದ ಎಸ್ಕೇಪ್ ಆಗುವಲ್ಲಿ ಅಪರಿಚಿತ ದುಷ್ಕರ್ಮಿಗಳು ಯಶಸ್ವಿಯಾಗಿದ್ದಾರೆ. ಈ ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.
ಇನ್ನು ಈ ಘಟನೆ ಸಂಬಂಧ ಮಾತನಾಡಿದ ಚೆನ್ನೈ ಪೊಲೀಸ್ ಆಯುಕ್ತ ಶಂಕರ್ ಜಿವಾಲ್, ಇದು ವೈರತ್ವ ಕಾರಣದಿಂದ ನಡೆದಿರುವ ಕೊಲೆ ಪ್ರಕರಣ ಎನ್ನುವುದು ನನಗೆ ಮೇಲ್ನೋಟಕ್ಕೆ ಎನಿಸುತ್ತಿದೆ. ಪ್ರತ್ಯಕ್ಷದರ್ಶಿಗಳು ಈ ಘಟನೆಯ ಬಗ್ಗೆ ಸಾಕ್ಷ್ಯ ನುಡಿದಿದ್ದಾರೆ.ಕೊಲೆಗಾರರ ಬಂಧನಕ್ಕೆ ವಿಶೇಷ ತಂಡವನ್ನು ರಚಿಸಿದ್ದೇವೆ. ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಹೇಳಿದರು.
ಘಟನೆ ಸಂಬಂಧ ವಿಪಕ್ಷ ಎಐಎಡಿಎಂಕೆ ತಮಿಳುನಾಡು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಇದು ರಾಜ್ಯ ಪೊಲೀಸರ ವೈಫಲ್ಯ ಎಂದು ಪಳನಿಸ್ವಾಮಿ ಕಿಡಿಕಾರಿದ್ದಾರೆ ರಾಜ್ಯದಲ್ಲಿ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿದೆ. ಇಂತಹ ಘಟನೆಗಳಿಂದ ರಾಜಧಾನಿಯು ಕೊಲೆಗಡುಕರ ನಗರವಾಗಿ ಬದಲಾಗ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ : IPL Crickter Umran Mailk ಭರವಸೆಯ ದ್ರುವತಾರೆ ಉಮ್ರಾನ್ ಮಲ್ಲಿಕ್
ಇದನ್ನೂ ಓದಿ : Tilak Varma : IPL ಮೂಲಕ ಕನಸು ಬೆನ್ನತ್ತಿರುವ ಯುವ ಆಟಗಾರ ತಿಲಕ್ ವರ್ಮ
bjp leader balachandran killed while his security officer was on break