ಉಡುಪಿ : cm basavaraj bommai in udupi : ರಾಜ್ಯದಲ್ಲಿ ಸಧ್ಯ ಪಠ್ಯ ಪರಿಷ್ಕರಣೆಯ ಚರ್ಚೆ ಜೋರಾಗಿದೆ. ಪಠ್ಯ ಪರಿಷ್ಕರಣೆ ಚರ್ಚೆ ವಿಚಾರವಾಗಿ ರಾಜ್ಯದಲ್ಲಿ ನಡೆಯುತ್ತಿರುವ ಪರ ವಿರೋಧಗಳ ಕಾದಾಟದ ನಡುವೆಯೇ ಸಿಎಂ ಬಸವರಾಜ ಬೊಮ್ಮಾಯಿ ಇಂದು ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.
ಉಡುಪಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ನಡೆಯುತ್ತಿರುವ ಚರ್ಚೆ ಬಗ್ಗೆ ಶಿಕ್ಷಣರ ಸಚಿವರ ಬಳಿ ಸಮಗ್ರ ವರದಿಯನ್ನು ನಾನು ಕೇಳಿದ್ದೇನೆ. ಈ ಸಂಬಂಧ ಸಚಿವರು ನಾಳೆ ನನಗೆ ವರದಿಯನ್ನು ನೀಡಲಿದ್ದಾರೆ. ಈ ವರದಿಯನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿದ ಬಳಿಕ ನಾನು ಪರಿಷ್ಕರಣೆ ಸರಿಯೋ ತಪ್ಪೋ ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಈ ಸಂಬಂಧ ಸ್ವಾಮೀಜಿಗಳು ನನಗೆ ಪತ್ರ ಬರೆದಿದ್ದಾರೆ. ನಾನು ಅವರ ಜೊತೆ ಮಾತನಾಡಿದ್ದೇನೆ. ಪಠ್ಯ ಪರಿಷ್ಕರಣೆ ವಿಚಾರದಲ್ಲಿ ರಾಜ್ಯದಲ್ಲಿ ಎರಡು ರೀತಿಯಲ್ಲಿ ಚರ್ಚೆ ನಡೆಯುತ್ತಿದೆ. ಕೆಲವರು ಪಾಠ ವಾಪಸ್ ಪಡೆಯಬೇಕು ಎಂದು ಒಂದು ಪಂಗಡ ಹೇಳುತ್ತಿದೆ.ಇನ್ನೂ ಕೆಲವರು ಪಠ್ಯ ಪರಿಷ್ಕರಣೆ ಆಗಬೇಕು ಎನ್ನುತ್ತಿದ್ದಾರೆ. ಎಲ್ಲರ ಜೊತೆಯಲ್ಲೂ ನಾನು ಮಾತನಾಡುತ್ತೇನೆ ಎಂದು ಹೇಳಿದರು.
ಸಿಎಂ ಬಸವರಾಜ ಬೊಮ್ಮಾಯಿ ಎರಡು ದಿನಗಳ ಕಾಲ ಉಡುಪಿ ಪ್ರವಾಸದಲ್ಲಿದ್ದಾರೆ. ನಿನ್ನೆ ರಾತ್ರಿ ಉಡುಪಿಗೆ ಬಂದು ವಾಸ್ತವ್ಯ ಹೂಡಿರುವ ಸಿಎಂ ಬೊಮ್ಮಾಯಿ ಉಡುಪಿ ಜಿಲ್ಲೆಯ ಹೆಬ್ರಿ ಹಾಗೂ ಕಾರ್ಕಳ ತಾಲೂಕುಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಕಾರ್ಕಳದ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಉದ್ಘಾಟನೆ ,ಹೆಬ್ರಿ ತಾಲೂಕು ಆಡಳಿತ ಸೌಧ ಉದ್ಘಾಟನೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಠಡಿ ಅನಾವರಣ ಹಾಗೂ ಹೆಬ್ರಿ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯವನ್ನು ಸಿಎಂ ಬೊಮ್ಮಾಯಿ ನೆರವೇರಿಸುತ್ತಿದ್ದಾರೆ . ಇದಾದ ಬಳಿಕ ಮಂಗಳೂರು ಜಿಲ್ಲೆಗೆ ಸಿಎಂ ಬೊಮ್ಮಾಯಿ ಪ್ರವಾಸ ಕೈಗೊಳ್ಳಲಿದ್ದಾರೆ.
ಇದನ್ನು ಓದಿ : rape hubby’s friend :ಪತಿಯೊಂದಿಗೆ ಸಲುಗೆಯಿಂದಿದ್ದ ಮಹಿಳೆಯ ಮೇಲೆ ಗ್ಯಾಂಗ್ರೇಪ್ಗೆ ಸುಪಾರಿ ಕೊಟ್ಟ ಪತ್ನಿ
ಇದನ್ನೂ ಓದಿ : BCCI : ಐಪಿಎಲ್ 2022ರ ಫೈನಲ್ಗೆ ಮುನ್ನ ಮಹತ್ವದ ಘೋಷಣೆ ಮಾಡಿದ ಬಿಸಿಸಿಐ : ಆಟಗಾರರು ಪುಲ್ ಖಷ್
school textbook revision row cm basavaraj bommai in udupi to take action after the report