mbbs student ends life : ಖಿನ್ನತೆಯಿಂದ ಬಳಲುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ : ಮದುವೆಯಾಗಿ ಮೂರೇ ತಿಂಗಳಿಗೆ ಆತ್ಮಹತ್ಯೆ
ಬೆಂಗಳೂರು : mbbs student ends life : ಆತ್ಮಹತ್ಯೆ ಎನ್ನುವುದು ಅತ್ಯಂತ ಭಯಾನಕವಾದ ಯೋಚನೆಯಾಗಿದೆ. ಯಾವುದೋ ಕೆಟ್ಟ ಸಂದರ್ಭದಲ್ಲಿ ಅನೇಕರು ಈ ದುಡುಕಿನ ನಿರ್ಧಾರವನ್ನು ತೆಗೆದುಕೊಂಡು ಬಿಡ್ತಾರೆ. ಜೀವ ಕಳೆದುಕೊಂಡ ಮಾತ್ರ ಸಮಸ್ಯೆಗಳು ಮುಗಿಯುತ್ತೆ ಎಂಬ ನಿರ್ಧಾರಕ್ಕೆ ಬಂದು ಜೀವವನ್ನೇ ಕೊನೆಯಾಗಿಸಿಕೊಂಡು ಬಿಡ್ತಾರೆ. ಕೌಟುಂಬಿಕ ಕಲಹ, ಪ್ರೇಮ ವೈಫಲ್ಯ, ಆರ್ಥಿಕ ಸಂಕಷ್ಟ ಹೀಗೆ ನಾನಾ ಕಾರಣಗಳಿಂದಾಗಿ ಅನೇಕರು ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಸರ್ಕಾರಗಳು ಆತ್ಮಹತ್ಯೆಯಂತಹ ಕೆಟ್ಟ ನಿರ್ಧಾರಗಳಿಂದ ಜನರನ್ನು ಕಾಪಾಡಲು ಸಹಾಯವಾಣಿಗಳು ಆರಂಭಿಸಿದ್ದರೂ ಸಹ ಇದರಿಂದ ಯಾವುದೇ ಪ್ರಯೋಜನವಾದಂತೆ ಕಾಣುತ್ತಿಲ್ಲ.
ಬೆಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ 11ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡತಹ ಘಟನೆಯೊಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿಯನ್ನು 31 ವರ್ಷದ ಪ್ರಥ್ವಿಕಾಂತ್ ರೆಡ್ಡಿ ಎಂದು ಗುರುತಿಸಲಾಗಿದೆ. ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಈತ ಅನಾರೋಗ್ಯ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.
ಆಂಧ್ರ ಪ್ರದೇಶದ ಕಡಪ ಮೂಲದ ಪೃಥ್ವಿರಾಜ್ ರೆಡ್ಡಿ ಅಮೃತಹಳ್ಳಿಯಲ್ಲಿ ವಾಸವಿದ್ದ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪೃಥ್ವಿರಾಜ್ ರೆಡ್ಡಿ ನ್ಯೂರಾಲಜಿ ಕೋರ್ಸ್ ಅಧ್ಯಯನ ಮಾಡುತ್ತಿದ್ದ ಎನ್ನಲಾಗಿದೆ, ಎಂಬಿಬಿಎಸ್ ಪದವಿ ಪೂರ್ಣಗೊಳ್ಳಲು ಕೇವಲ ಐದು ತಿಂಗಳು ಬಾಕಿ ಇರುವಾಹ ಪೃಥ್ವಿರಾಜ್ ಈ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ.
ಇಂದು ಮುಂಜಾನೆ ಐದು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಪತ್ನಿಯು ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಪೃಥ್ವಿರಾಜ್ ಕಟ್ಟಡದ ಹನ್ನೊಂದನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾನೆ. ಸ್ಥಳದಲ್ಲಿಯೇ ಪೃಥ್ವಿರಾಜ್ ಸಾವನ್ನಪ್ಪಿದ್ದಾನೆ. ಪೃಥ್ವಿರಾಜ್ ಮೊಬೈಲ್ನಲ್ಲಿ ತೆಲುಗು ಭಾಷೆಯಲ್ಲಿ ಬರೆಯಲಾದ ಡೆತ್ ನೋಟ್ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಮೃತ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೃಥ್ವಿರಾಜ್ ಮೊಬೈಲ್ ಫೋನ್ನ್ನು ವಶಕ್ಕೆ ಪಡೆದಿರುವ ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ.
ಇದನ್ನು ಓದಿ : Successor of Rohit Sharma : ಈ ಹುಡುಗನಿಗೆ ಸಪೋರ್ಟ್ ಮಾಡಿದ್ರೆ ಮತ್ತೊಬ್ಬ ರೋಹಿತ್ ಶರ್ಮಾ ಆಗ್ತಾನೆ
ಇದನ್ನೂ ಓದಿ : IPL Media Rights Auction 2022ನಲ್ಲಿ ಮೆಗಾ ಟ್ವಿಸ್ಟ್ : 23,575 ಕೋಟಿಗೆ ಸ್ಟಾರ್ ಸ್ಪೋರ್ಟ್ಸ್ ಪಾಲಾಯ್ತು ಟಿವಿ ರೈಟ್ಸ್
mbbs student ends life jumping from 11th floor in bengaluru
Comments are closed.