ಮಂಗಳೂರು : praveen nettaru murder : ಕರಾವಳಿ ಜಿಲ್ಲೆಯಲ್ಲಿ ಹರಿದ ನೆತ್ತರು ಇಡಿ ಕರ್ನಾಟಕವನ್ನೇ ದುಃಖದ ಸಾಗರದಲ್ಲಿ ಮುಳುಗಿಸಿದೆ. ಧರ್ಮದ ಹೆಸರಿನಲ್ಲಿ ಈ ರೀತಿಯ ದುಷ್ಕೃತ್ಯಗಳನ್ನು ಎಸೆಗಿದರೆ ಜನ ಸಾಮಾನ್ಯರು ಯಾವ ಧೈರ್ಯದಲ್ಲಿ ಬದುಕುವುದು ಎಂಬ ಪ್ರಶ್ನೆ ಎಲ್ಲರಲ್ಲೂ ಮನೆ ಮಾಡಿದೆ. ಕನಸಿನ ಮನೆ ನಿರ್ಮಿಸಬೇಕೆಂದುಕೊಂಡಿದ್ದ ಜಾಗದಲ್ಲೇ ಪ್ರವೀಣ್ ಅಂತ್ಯಕ್ರಿಯೆ ನೆರವೇರಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಹಿಂದೂ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.
ಇಂದು ಜನೋತ್ಸವ ಆಚರಿಸಬೇಕಿದ್ದ ಬೊಮ್ಮಾಯಿ ನೇತೃತ್ವದ ಸರ್ಕಾರದ ಹಿಂದೂ ಕಾರ್ಯಕರ್ತ ಹಾಗೂ ಭಜರಂಗದಳ ನಾಯಕ ಪ್ರವೀಣ್ ನೆಟ್ಟಾರು ಸಾವು ತೀವ್ರ ಮುಜುಗರವನ್ನುಂಟು ಮಾಡಿದೆ. ಈ ಪ್ರಕರಣದಲ್ಲಿ ರಾಜ್ಯ ಗೃಹ ಇಲಾಖೆ ಹೈ ಅಲರ್ಟ್ ಆಗಿದ್ದು ಪೊಲೀಸರ ಐದು ತಂಡಗಳನ್ನು ರಚಿಸಿ ತನಿಖೆಯನ್ನು ನಡೆಸಲಾಗುತ್ತಿದೆ. ಈ ಎಲ್ಲದರ ನಡುವೆ ಈ ಪ್ರಕರಣದಲ್ಲಿ ಸದ್ಯ ಏಳು ಮಂದಿ ಎಸ್ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ.
ನಿನ್ನೆ ಪೊಲೀಸರು 10 ಮಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಕರ್ನಾಟಕದ ಪೊಲೀಸ್ ಇಲಾಖೆ ಪ್ರವೀಣ್ ನೆಟ್ಟಾರು ಕೊಲೆ ತನಿಖೆಯನ್ನು ನಡೆಸಲು ಕೇರಳಕ್ಕೂ ತೆರಳಿದೆ. ಆರೋಪಿಗಳು ಕೊಲೆ ಮಾಡಿ ಕೇರಳಕ್ಕೆ ತೆರಳಿರುವ ಗುಮಾನಿ ಕೂಡ ಇರುವ ಹಿನ್ನೆಲೆಯಲ್ಲಿ ಪೊಲೀಸರು ನೆರೆ ರಾಜ್ಯದಲ್ಲಿಯೂ ತನಿಖೆ ಮುಂದುವರಿಸಿದ್ದಾರೆ.
ಹಿಂದೂ ಯುವಕನ ಕೊಲೆಯಲ್ಲಿ ಪಿಎಫ್ಐ ಹಾಗೂ ಎಸ್ಡಿಪಿಐ ಕಾರ್ಯಕರ್ತರ ಕೈವಾಡವಿದೆ ಎಂಬ ಆರೋಪ ಬಲವಾಗಿ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ತಡರಾತ್ರಿ ಎಸ್ಡಿಪಿಐ ಕಾರ್ಯಕರ್ತರ ಮನೆಗೆ ನುಗ್ಗಿದ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಈ ಕ್ರಮವನ್ನು ವಿರೋಧಿಸಿರುವ ಎಸ್ಡಿಪಿಐ ಕಾರ್ಯಕರ್ತರು ಪೊಲೀಸರು ಸುಖಾ ಸುಮ್ಮನೇ ಅಮಾಯಕರ ಮೇಲೆ ಅಸ್ತ್ರ ಪ್ರಯೋಗಿಸುತ್ತಿದ್ದಾರೆ ಎಂದು ದೂರಿದ್ದಾರೆ.
ಇದನ್ನೂ ಓದಿ : Praveen Nettaru murder : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 10 ಮಂದಿ ಶಂಕಿತರು ವಶಕ್ಕೆ
praveen nettaru murder 7 sdpi activists taken into police custody
Comments are closed.