Mangalore : ಸಾರ್ವಕರ್ ಫೋಟೋ ಪ್ರದರ್ಶಿಸಿದ್ದಕ್ಕೆ ಶಾಲಾ ಶಿಕ್ಷಕರ ವಿರುದ್ಧ ಎಸ್ಡಿಪಿಐ,ಕಾಂಗ್ರೆಸ್ ಸದಸ್ಯರ ಆಕ್ರೋಶ
ಮಂಗಳೂರು : Mangalore : ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಫೋಟೋ ಪ್ರದರ್ಶನ ವಿಚಾರವಾಗಿ ಪರಿಸ್ಥಿತಿಯು ಉದ್ವಿಘ್ನತೆಗೆ ಸಾಕ್ಷಿಯಾಗಿದೆ. ಮುಸ್ಲಿಂ ಸಂಘಟನೆಯ ಯುವಕರು ಹಾಗೂ ಹಿಂದೂ ಕಾರ್ಯಕರ್ತರ ನಡುವಲ್ಲಿ ವೀರ ಸಾರ್ವಕರ್ ಫೋಟೋ ವಿಚಾರವಾಗಿ ಮಾತಿನ ಚಕಮಕಿ ಏರ್ಪಟ್ಟಿದ್ದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಲ್ಲದೇ ಶಿವಮೊಗ್ಗ ನಗರದಾದ್ಯಂತ ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಅಲ್ಲದೇ ಶಿವಮೊಗ್ಗದಲ್ಲಿ ಒಂದೇ ದಿನ ಇಬ್ಬರು ಯುವಕರ ಮೇಲೆ ಚಾಕು ಇರಿತವಾಗಿದ್ದು ಪರಿಸ್ಥಿತಿ ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.
ಈ ಎಲ್ಲದರ ನಡುವೆ ಇತ್ತ ಕಡಲ ನಗರಿ ಮಂಗಳೂರಿನಲ್ಲಿಯೂ ಸ್ವಾತಂತ್ರ್ಯೋತ್ಸವದ ನಿಮಿತ್ತ ದೇಶ ಭಕ್ತಿಗೀತೆಯ ನೃತ್ಯ ಪ್ರದರ್ಶನದ ಸಂದರ್ಭದಲ್ಲಿ ವೀರ ಸಾವರ್ಕರ್ ಫೋಟೋ ಪ್ರದರ್ಶಿಸಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಗುರುಪುರ ಪಂಚಾಯತ್ನ ಎಸ್ಡಿಪಿಐ ಹಾಗೂ ಕಾಂಗ್ರೆಸ್ ಸದಸ್ಯರು ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ವೀರ ಸಾವರ್ಕರ್ ಫೋಟೋವನ್ನು ಪ್ರದರ್ಶಸಿದ್ದಕ್ಕೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳು ನೃತ್ಯ ಪ್ರದರ್ಶನದ ಸಂದರ್ಭದಲ್ಲಿ ವೀರ ಸಾವರ್ಕರ್ ಫೋಟೋವನ್ನು ಪ್ರದರ್ಶಿಸಿದ್ದರು. ಈ ವೇಳೆ ಶಾಲಾ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಗುರುಪುರ ಪಂಚಾಯತ್ ವ್ಯಾಪ್ತಿಯ ಎಸ್ಡಿಪಿಐ ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯರು ಶಾಲಾ ಮುಖ್ಯೋಪಾಧ್ಯಾಯರನ್ನು ಕರೆಯಿಸಿ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಮಾಡಿದ್ದಾರೆ. ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಗುರುಪುರ ಪಂಚಾಯತ್ನ ಆಡಳಿತಾರೂಢ ಎಸ್ಡಿಪಿಐ ಹಾಗೂ ಕಾಂಗ್ರೆಸ್ ಸದಸ್ಯರು ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : Two youths stabbed in Shimoga : ಸಾವರ್ಕರ್ ಫೋಟೋ ವಿವಾದ : ಶಿವಮೊಗ್ಗದಲ್ಲಿ ಇಬ್ಬರು ಯುವಕರಿಗೆ ಚಾಕು ಇರಿತ
ಇದನ್ನೂ ಓದಿ : Rishabh Pant brand ambassador : ದೆಹಲಿಯ ರಿಷಭ್ ಪಂತ್ ಉತ್ತರಾಖಂಡ್ ಸರ್ಕಾರದ ಬ್ರಾಂಡ್ ಅಂಬಾಸಿಡರ್
Controversy over Sarvakar’s photo in Mangalore school
Comments are closed.