ಹಿಮಾಚಲ ಪ್ರದೇಶ: Oath ceremony: ಹಿಮಾಚಲ ಪ್ರದೇಶದ ನೂತನ ಸಿಎಂ ಆಗಿ ಸುಖವೀಂದರ್ ಸಿಂಗ್ ಸುಖು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ವೇಳೆ ಉಪಮುಖ್ಯಮಂತ್ರಿಯಾಗಿ ಮುಖೇಶ್ ಅಗ್ನಿಹೋತ್ರಿ ಕೂಡಾ ಪ್ರಮಾಣ ವಚನ ಸ್ವೀಕರಿಸಿದರು.
ಶಿಮ್ಲಾದ ರಿಜ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಸೇರಿದಂತೆ ಹಲವು ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖವೀಂದರ್ ಸಿಂಗ್ ಅಧಿಕಾರ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: Thawar Chand Gehlot: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರು ಚಾಲಕ ಹೃದಯಾಘಾತದಿಂದ ಸಾವು
ನವೆಂಬರ್ 12ರಂದು ಹಿಮಾಚಲ ಪ್ರದೇಶದ ವಿಧಾನಸಭೆಗೆ ಚುನಾವಣೆ ನಡೆದಿತ್ತು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 40 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೇರಿದೆ. ಆಡಳಿತ ಪಕ್ಷವಾಗಿದ್ದ ಬಿಜೆಪಿಯು 25 ಸ್ಥಾನಗಳನ್ನು ಗೆಲ್ಲುವ ಮೂಲಕ ಚುನಾವಣೆಯಲ್ಲಿ ಸೋಲು ಕಂಡಿದೆ. ಹಿಮಾಚಲ ಪ್ರದೇಶದಲ್ಲಿ 1982ರಿಂದಲೂ ಯಾವುದೇ ಪಕ್ಷವೂ ಇದುವರೆಗೆ ಸತತವಾಗಿ ಅಧಿಕಾರಕ್ಕೆ ಏರಿರುವ ಉದಾಹರಣೆಯೇ ಇಲ್ಲ. ಒಂದು ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಮತ್ತೊಂದು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಸಂಪ್ರದಾಯವೂ ಈ ಬಾರಿಯೂ ಮುಂದುವರಿದಿದೆ.
ಈ ಬಾರಿಯ ಸಿಎಂ ರೇಸ್ ನಲ್ಲಿ ಹಲವು ಆಕಾಂಕ್ಷಿಗಳಿದ್ದರು. ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಪತ್ನಿ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್, ಮುಖೇಶ್ ಅಗ್ನಿಹೋತ್ರಿ ಹಾಗೂ ಸುಖವೀಂದರ್ ಸಿಂಗ್ ಅವರ ನಡುವೆ ಸಿಎಂ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಕಾಂಗ್ರೆಸ್ ಹಿರಿಯ ನಾಯಕರ ನಿರ್ಧಾರದ ಮೇಲೆ ಸುಖವೀಂದರ್ ಸಿಎಂ ಗದ್ದುಗೆ ಏರಿದ್ದು, ಉಪಮುಖ್ಯಮಂತ್ರಿಯಾಗಿ ಮುಖೇಶ್ ಅಗ್ನಿಹೋತ್ರಿ ಅಧಿಕಾರ ವಹಿಸಿದ್ದಾರೆ.
ಇದನ್ನೂ ಓದಿ: Karnataka 2nd PUC Exam 2023: ದ್ವಿತೀಯ ಪಿಯುಸಿ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬದಲಾವಣೆ ತರಲು ಸರಕಾರ ಚಿಂತನೆ
Oath ceremony : Sukhvinder Sukhu took oath as 15th CM of Himachal Pradesh and Mukhesh Agnihotri took oath as Deputy CM