ಕಲಬುರಗಿ: (Bank worker murder) ಮಾರಕಾಸ್ತ್ರಗಳಿಂದ ಬ್ಯಾಂಕ್ ನೌಕರನ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ತಾಲೂಕಿನ ಮಾಲಗತ್ತಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಸಚಿನ್ ಅಂಬಲಗಿ ಎನ್ನುವಾತನೇ ಕೊಲೆಯಾದ ವ್ಯಕ್ತಿ.
ಕಲಬುರಗಿಯ ಖಾಸಗಿ ಬ್ಯಾಂಕ್ ಒಂದರಲ್ಲಿ ಕಾಂಟ್ರಾಕ್ಟ್ ಬೇಸ್ ಮೇಲೆ ಸಚಿನ್ ಕೆಲಸ ಮಾಡುತ್ತಿದ್ದ. ಕೆಲಸ ಮುಗಿಸಿ ಮನೆಗೆ ಹೋಗುವ ವೇಳೆ ಮಾಲಗತ್ತಿ ಗ್ರಾಮದ ಹೊರವಲಯದಲ್ಲಿರುವ ಎಂ.ಎಂ.ಗಾರ್ಡನ್ ಬಳಿ ದುಷ್ಕರ್ಮಿಗಳು ಸಚಿನ್ ಬೈಕ್ ಅನ್ನು ಅಡ್ಡಗಟ್ಟಿ ಆತನನ್ನು ಕತ್ತು ಕೊಯ್ದು ಹತ್ಯೆ (Bank worker murder) ಮಾಡಿದ್ದಾರೆ. ಆತನ ಹತ್ಯೆಯ ನಂತರ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಡಾ.ವೈ.ಎಸ್. ರವಿಕುಮಾರ್ ಭೇಟಿ
ಘಟನೆಯ ವಿಷಯ ತಿಳಿಯುತ್ತಿದ್ದಂತೆ ಘಟನೆ ನಡೆದ ಸ್ಥಳಕ್ಕೆ ಸಿಟಿ ಪೊಲೀಸ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ವಿಶ್ವವಿದ್ಯಾನಿಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆ ನಡೆಸಿ ಪರಾರಿಯಾದ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಸುತ್ತಿದ್ದಾರೆ.
ಇದನ್ನೂ ಓದಿ : Sadananda Serigar suicide: ಕುರುಪ್ ಸಿನಿಮಾ ಶೈಲಿಯಲ್ಲಿ ಕೊಲೆ ಪ್ರಕರಣ : ಸದಾನಂದ ಸೇರಿಗಾರ್ ಜೈಲಿನಲ್ಲಿ ಆತ್ಮಹತ್ಯೆ
ಇದನ್ನೂ ಓದಿ : Small Child Died : ಚಾಲಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಮಗುವಿನೊಂದಿಗೆ ವಾಹನದಿಂದ ಹಾರಿದ ತಾಯಿ : 10 ತಿಂಗಳ ಮಗು ಸಾವು
ಇದನ್ನೂ ಓದಿ :Thawar Chand Gehlot: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರು ಚಾಲಕ ಹೃದಯಾಘಾತದಿಂದ ಸಾವು
ಇದನ್ನೂ ಓದಿ : small child died: ನೀರಿನ ಬಕೆಟ್ ಗೆ ಬಿದ್ದು ಪ್ರಾಣ ಕಳೆದುಕೊಂಡ ಮುದ್ದು ಕಂದಮ್ಮ..!
ಆತನ ಕೊಲೆಗೆ ನಿಖರವಾದ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ.ಪೊಲೀಸ್ ತನಿಖೆಯ ನಂತರವಷ್ಟೇ ಯುವಕನ ಹತ್ಯೆಗೆ ನಿಖರವಾದ ಕಾರಣ ತಿಳಿದು ಬರಲಿದೆ.
(Bank worker murder) The incident in which a bank employee was brutally killed by a knife took place in the outskirts of Malagatti village of Kalaburagi taluk. Sachin Ambalagi was the person killed.