ಸೋಮವಾರ, ಜೂನ್ 16, 2025
HomeBreakingಕರಾವಳಿಯಲ್ಲಿ ತಗ್ಗಿದ ಕೊರೊನಾ ಅಬ್ಬರ : ರಾಜ್ಯದಲ್ಲಿಂದು 239 ಮಂದಿಗೆ ಸೋಂಕು

ಕರಾವಳಿಯಲ್ಲಿ ತಗ್ಗಿದ ಕೊರೊನಾ ಅಬ್ಬರ : ರಾಜ್ಯದಲ್ಲಿಂದು 239 ಮಂದಿಗೆ ಸೋಂಕು

- Advertisement -

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿಂದು 239 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಕೊರೊನಾ ಪೀಡಿತರ ಸಂಖ್ಯೆ 5452ಕ್ಕೆ ಏರಿಕೆಯಾಗಿದೆ. ಆದ್ರೆ ಕರಾವಳಿ ಭಾಗದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ.

Alvas1

ಕಳೆದೊಂದು ವಾರದಿಂಲೂ ಕೊರೊನಾ ಆಘಾತ ಮೂಡಿಸಿದ್ದ ಉಡುಪಿ ಜಿಲ್ಲೆಯಲ್ಲಿಂದು ಕೊರೊನಾ ಸೋಂಕು ಕೊಂಚ ಮಟ್ಟಿಗೆ ಇಳಿಕೆಯಾಗಿದೆ. ಇಂದು ಕೇವಲ ಮಂದಿ ಮಂದಿಗಷ್ಟೇ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಉಡುಪಿಯಲ್ಲಿ ಸೋಂಕಿತರ ಸಂಖ್ಯೆ 902ಕ್ಕೆ ಏರಿಕೆಯಾಗಿದೆ.

Corona Virus Test

ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿಂದು ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಎರಡೂ ಜಿಲ್ಲೆಯಲ್ಲಿಯೂ 39 ಮಂದಿ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಲಬುರಗಿಯಲ್ಲಿ ಸೋಂಕಿತರ ಸಂಖ್ಯೆ 660ಕ್ಕೆ ಏರಿಕೆಯಾದ್ರೆ ಯಾದಗಿರಿಯಲ್ಲಿ 515ಕ್ಕೆ ಏರಿದೆ.

Corona Virus New

ಇನ್ನು ಬೆಳಗಾವಿ ಜಿಲ್ಲೆಯಲ್ಲಿ 38 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದರೆ, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ 23, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17, ದಾವಣಗೆರೆ 17, ಶಿವಮೊಗ್ಗ 12, ವಿಜಯಪುರ 9, ಬೀದರ್ 7, ಬಳ್ಳಾರಿ 6, ಬೆಂಗಳೂರು ಗ್ರಾಮಾಂತರ 5, ಹಾಸನ 5, ಧಾರವಾಡ 3, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 2, ಹಾಗೂ ಮಂಡ್ಯ ಮತ್ತು ರಾಯಚೂರು ಜಿಲ್ಲೆಯಲ್ಲಿ ತಲಾ ಒಂದೊಂದು ಕೊರೊನಾ ಪ್ರಕರಣ ದಾಖಲಾಗಿದೆ.

Corona Maharastra 4

ರಾಜ್ಯದಲ್ಲಿ ಇದುವರೆಗೆ ಕೊರೊನಾ ಮಹಾಮಾರಿಗೆ 61 ಮಂದಿ ಬಲಿಯಾಗಿದ್ರೆ, 2,132 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಉಳಿದಂತೆ 3257 ಮಂದಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular