ಎರಡು ವರ್ಷ ಹಡಿಲುಬಿಟ್ಟ ಕೃಷಿ‌ಭೂಮಿ ಸರಕಾರದ ಸುಪರ್ದಿಗೆ : ಜಿಲ್ಲಾಧಿಕಾರಿ ಜಗದೀಶ್

ಉಡುಪಿ : ಒಂದೆರಡು ವರ್ಷಗಳ ಕಾಲ ಹಡಿದು ಬಿಟ್ಟಿರುವ ಭೂಮಿ ಯನ್ನು ಸರಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದ ಕೃಷಿ ಆಂದೋಲನದ ಹಿನ್ನೆಲೆಯಲ್ಲಿ ಪ್ರಥಮ ಹಂತವಾಗಿ ಕೃಷಿ ಚಟುವಟಿಕೆ ನಡೆಸುವ ಗದ್ದೆಗಳಿಗೆ ಸಮರ್ಪಕ ವಾಗಿ ನೀರು ಹರಿದು ಹೋಗಲು ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಸೋಮವಾರ ಕೆಳಪರ್ಕಳದ ಗೋಪಾಲಕೃಷ್ಣ ದೇವಸ್ಥಾನದ ಸಮೀಪ ದಲ್ಲಿ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ಎರಡು ವರ್ಷಗಳ ಕಾಲ ಹಡಿಲು ಬಿಟ್ಟ ಕೃಷಿ ಭೂಮಿಯನ್ನು ಸರಕಾರ ಸುಪರ್ದಿಗೆ ತೆಗೆದು ಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದ್ದು ಇಂತಹವರಿಗೆ ನೊಟೀಸು ನೀಡಲಾಗುತ್ತದೆ. ಜಿಲ್ಲೆ ಯಲ್ಲಿ ಹಡಿಲು ಬಿಟ್ಟಿರುವ ಭೂಮಿಗಳನ್ನು ಗುರುತಿಸುವಂತೆ ಈಗಾಗಲೇ ತಹಶೀಲ್ದಾರ್‌ ಸೂಚನೆ ನೀಡಲಾಗಿದೆ.

ಎರಡನೇ ಹಂತ ವಾಗಿ ಹಡಿಲು ಭೂಮಿಯ ಮಾಲಕರಿ ಗೆ ನೊಟೀಸು ನೀಡಲಾಗು ತ್ತದೆ. ನಂತರವೂ ಭೂಮಿ ಯಲ್ಲಿ ಕೃಷಿ ಮಾಡದೆ ಹೋದರೆ, ಅದನ್ನು ಸರಕಾರದ ವಶಕ್ಕೆ ತೆಗೆದುಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದೆ ಎಂದಿದ್ದಾರೆ.

ಕೃಷಿ ಇಲಾಖೆಯ ಅಧಿಕಾರಿಗಳು ಕೃಷಿಯಲ್ಲಿ ಯಾಂತ್ರೀಕರಣ ಅಳವಡಿ ಸಿಕೊಳ್ಳುವ ಮೂಲಕ ಲಾಭದಾಯಕವಾಗಿ ಮಾಡಲು ಸಾಧ್ಯವಿದೆ ಎಂಬುವುದನ್ನುತೋರಿಸಿಕೊಟ್ಟಿದ್ದಾರೆ. ಯಾರೆಲ್ಲ ಭೂಮಿ ಹಡಿಲು ಬಿಟ್ಟಿದ್ದಾರೆ ಅವರೆಲ್ಲರೂ ಕೃಷಿಯಲ್ಲಿ ತೊಡಗಿಸಿಕೊಳ್ಳಿ. ಭೂಮಿ ಯಲ್ಲಿ ಕೃಷಿ ಮಾಡುವುದ ರಿಂದ ನೀರು ಇಂಗಲು ಸಾಧ್ಯವಾಗುತ್ತದೆ. ಇದರಿಂದ ಸುತ್ತಮುತ್ತ ಅಂತರ್ಜಲ ಹೆಚ್ಚಾಗುತ್ತದೆ ಎಂದಿದ್ದಾರೆ.

Comments are closed.