ಸೋಮವಾರ, ಏಪ್ರಿಲ್ 28, 2025
Homeagricultureಭರ್ಜರಿ ಏರಿಕೆ ಕಂಡ ಅಡಿಕೆ ಬೆಲೆ ! ಬೆಳೆಗಾರರು ಪುಲ್‌ ಖುಷ್‌

ಭರ್ಜರಿ ಏರಿಕೆ ಕಂಡ ಅಡಿಕೆ ಬೆಲೆ ! ಬೆಳೆಗಾರರು ಪುಲ್‌ ಖುಷ್‌

- Advertisement -

ಉಡುಪಿ : ಮಲೆನಾಡು, ಕರಾವಳಿ ಹಾಗೂ ಮಧ್ಯ ಕರ್ನಾಟಕ ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಬಹುದಿನಗಳಿಂದ ಸರಿಯಾದ ಬೆಲೆ ಇಲ್ಲದೇ ಸೋರಗುತಿತ್ತು. ಆದರೆ ಈಗ ಅಡಿಕೆ ಬೆಳೆಗೆ ಬಂಪರ್ ಬೆಲೆ ಬಂದಿದ್ದು, ಪ್ರತಿ ಕ್ವಿಂಟಾಲ್‍ಗೆ 50 ಸಾವಿರ ರೂ. ಅಧಿಕ ಬೆಲೆಗೆ ಮರಾಟವಾಗುತ್ತಿದೆ. ಇದರಿಂದಾಗಿ ಬೆಳೆಗಾರರು ಪುಲ್‌ ಖುಷ್‌ ಆಗಿದ್ದಾರೆ.

ಈಶಾನ್ಯ ಗಡಿರಾಜ್ಯಗಳಲ್ಲಿ ಸಂಘರ್ಷ ಏರ್ಪಟ್ಟಿರುವುದರಿಂದ ಕೇಂದ್ರ ಸರ್ಕಾರ ಗಡಿಗಳನ್ನು ಬಂದ್‌ ಮಾಡಿದೆ. ಹಾಗಾಗಿ ಇಂಡೋನೇಷಿಯಾ, ಮಲೇಷಿಯಾ ದೇಶಗಳಿಂದ ಬರುತ್ತಿದ್ದ ಕಳಪೆ ಅಡಿಕೆ ನಿಂತಿದೆ. ಈ ಬೆಳೆಯ ಮೇಲೆ ಕೆಲ ಗುಟ್ಕಾ ಕಂಪನಿಗಳು ಅವಲಂಬಿತವಾಗಿವೆ. ಈಗ ಗಡಿಗಳು ಬ್ಲಾಕ್ ಆಗಿರುವುದರಿಂದ ರೈತರಿಂದಲೇ ನೇರ ಖರೀದಿ ಮಾಡುತ್ತಿವೆ. ಇದು ಬೆಲೆ ಏರಿಕೆಗೆ ಕಾರಣವಾಗಿದೆ.

ಈಗಾಗಲೇ ಹೊಸ ಅಡಿಕೆ ಮಾರುಕಟ್ಟೆ ಪ್ರವೇಶ ಮಾಡಬೇಕಿತ್ತು. ಮಳೆ ಕಾರಣದಿಂದ ಕೊಯ್ಲು, ಸಂಸ್ಕರಣೆ ಸೇರಿದಂತೆ ಎಲ್ಲಾ ಕೆಲಸಗಳು ನಿಧಾನವಾಗಿದ್ದು ಹೆಚ್ಚು ಸಂಗ್ರಹವಾಗುತ್ತಿಲ್ಲ. ಮೂರು ವರ್ಷದಿಂದ ನಿರಂತರ ಮಳೆಯಾಗುತ್ತಿರುವುದರಿಂದ ಕೊಳೆರೋಗ ಬಾಧಿಸುತ್ತಿದೆ. ಇದು ಸಹ ಬೆಲೆ ಏರಿಕೆಗೆ ಕಾರಣ ಎನ್ನಲಾಗುತ್ತಿದೆ.

ಇದನ್ನೂ ಓದಿ: ಅನ್ನದಾತರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ : ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಇತ್ತೀಚೆಗೆ ರೈತರು ಅಡಿಕೆ ದಾಸ್ತಾನು ಮಾಡುವ ಸೌಲಭ್ಯ ಹೊಂದಿದ್ದು, ತಮಗೆ ಅನುಕೂಲಕರ ಸಮಯಕ್ಕೆ ತಂದು ಮಾರುಕಟ್ಟೆಯಲ್ಲಿ ಮಾರುತ್ತಿದ್ದಾರೆ. ದಿಢೀರ್ ಬೆಲೆ ಏರಿಕೆ ಲಾಭ ಪಡೆಯುವ ಉದ್ದೇಶದಿಂದ ಅಕ್ರಮ-ಸಕ್ರಮ ವ್ಯವಹಾರಸ್ಥರಲ್ಲಿ ಪೈಪೋಟಿ ಏರ್ಪಟ್ಟಿರುವುದರಿಂದ ಬೆಲೆ ಏರಿಸುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆಯಲ್ಲ ಎಂಬುದು ವ್ಯವಹಾರಸ್ಥರ ಅಭಿಪ್ರಾಯವಾಗಿದೆ.

ಫೆಬ್ರವರಿ 2020ರಲ್ಲಿ 39 ಸಾವಿರ ಆಸುಪಾಸಿನಲ್ಲಿದ್ದ ಅಡಿಕೆ ಕೆಲವೇ ತಿಂಗಳಲ್ಲಿ 42, 43 ಸಾವಿರಕ್ಕೆ ಸ್ಥಿರಗೊಂಡಿತು. 2021ರ ಆಗಸ್ಟ್ ವರೆಗೂ 38 ರಿಂದ 43 ಸಾವಿರವರೆಗೆ ಬೆಲೆ ಕಾಯ್ದುಕೊಂಡಿದೆ. ಆ. 10ರ ರಾಶಿಯ ಗರಿಷ್ಠ ಬೆಲೆ 44,099, 16ರಂದು 44,299 ರೂ, 19ರಂದು 44,099 ರೂ, 24ರಂದು 46,599 ರೂ, 25ರಂದು 47,500 ರೂ.ಗೆ ವಹಿವಾಟು ನಡೆದಿದೆ. ರೈತರಿಂದ ನೇರವಾಗಿ ಖರೀದಿಸುವ ವ್ಯವಹಾರಸ್ಥರು 49 ಸಾವಿರಕ್ಕೆ ಖರೀದಿ ಮಾಡಿ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: e sahamathi:ರೈತರಿಗೆ ಸಿಹಿಸುದ್ದಿ…! ಕೃಷಿ ಉತ್ಪನ್ನ ಮಾರಾಟಕ್ಕೆ ವೇದಿಕೆ ಕಲ್ಪಿಸಲಿದೆ ಇ –ಸಹಮತಿ…!!

ಬೆಲೆ ಏರಿಕೆಯು ಒಂದೆಡೆ ಖುಷಿಯ ವಿಚಾರವಾಗಿದ್ದರೆ, ಇನ್ನೊಂದೆಡೆ ವ್ಯಾಪಾರಸ್ಥರಲ್ಲಿ ಆತಂಕ ಹುಟ್ಟಿಸುತ್ತಿದೆ. 43 ಸಾವಿರಕ್ಕೆ ಖರೀದಿ ಮಾಡಿದ ಅಡಿಕೆ 48 ಸಾವಿರಕ್ಕೆ ಬಿಕರಿಯಾದರೆ ಲಾಭವಾಗುತ್ತದೆ. ಅದೇ 49 ಸಾವಿರಕ್ಕೆ ಖರೀದಿ ಮಾಡಿದ ಅಡಿಕೆ 43 ಸಾವಿರಕ್ಕೆ ಬಿಕರಿಯಾದರೆ ದೊಡ್ಡ ನಷ್ಟವಾಗಲಿದೆ. ಮಾರುಕಟ್ಟೆ ಬೆಲೆ ಸ್ಥಿರತೆ ಕಾಪಾಡಿಕೊಳ್ಳದಿದ್ದರೆ ಎಲ್ಲರಿಗೂ ದೊಡ್ಡ ನಷ್ಟವಾಗಲಿದೆ. ಒಂದೇ ಬಾರಿ ಮಾರುಕಟ್ಟೆ ಬಿದ್ದು ಹೋಗಿ ಅನೇಕ ವ್ಯಾಪಾರಿಗಳು ಬೀದಿಪಾಲಾದರು. ಆದರೆ ಈಗ ಅಡಿಕೆ ಧಾರಣೆ ಏರಿಕೆ ಬೆಳೆಗಾರರಲ್ಲಿ ಸಂತಸ ಮೂಡಿಸಿದೆ.

RELATED ARTICLES

Most Popular