ನವದೆಹಲಿ : ಕೊರೊನಾ ಸಂಕಷ್ಟದ ಕಾಲದಲ್ಲಿ ಪ್ರಧಾನಿ ಮೋದಿ ಅನ್ನದಾತರಿಗೆ ಆಸರೆಯಾಗಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8 ನೇ ಕಂತಿನ ಹಣವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.
ದೇಶದ 9.5 ಕೋಟಿ ರೈತರ ಖಾತೆಗಳಿಗೆ ಒಟ್ಟು19 ಸಾವಿರ ಕೋಟಿ ರೂಪಾಯಿಯನ್ನು ಜಮೆ ಮಾಡಲಾಗುತ್ತದೆ. ಇಂದು ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ನೇರ ಹಣ ವರ್ಗಾವಣೆಗೆ ಚಾಲನೆ ನೀಡಲಿದ್ದಾರೆ.
ಈಗಾಗಲೇ ನೋಂದಣಿ ಮಾಡಿಕೊಂಡಿರುವ ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ವರ್ಷಕ್ಕೆ 6000 ರೂ. ನೀಡಲಾಗುತ್ತದೆ. ಪ್ರತಿ 4 ತಿಂಗಳಿಗೊಮ್ಮೆ ತಲಾ 2,000 ರೂ.ಯಂತೆ ಒಟ್ಟು 3 ಕಂತುಗಳಲ್ಲಿ ಹಣ ಪಾವತಿಯಾಗಲಿದೆ.
Comments are closed.